<p><strong>ಬೆಳವಣಿಕಿ (ರೋಣ)</strong>: ‘ಧಾರ್ಮಿಕ ಕಾರ್ಯಗಳು ಸಾಮಾನ್ಯ ಮನುಷ್ಯನನ್ನು ಮಹಾ ಮಾನವನನ್ನಾಗಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಈ ಸಮಯದಲ್ಲಿ ಜನರು ಪರಸ್ಪರ ಸೇವಾ ಮನೋಭಾವ ಹಾಗೂ ಸೌರ್ಹಾದದಿಂದ ಕೂಡಿ ಕೆಲಸ ಮಾಡುವ ಮೂಲಕ ದೇವರ ಪ್ರೀತಿಗೆ ಪಾತ್ರರಾಗುತ್ತಾರೆ’ ಎಂದು ಬೆನಹಾಳ ಸದಾಶಿವ ಮಹಾಂತ ಶಿವಾಚಾರ್ಯರು ತಿಳಿಸಿದರು.</p>.<p>ತಾಲ್ಲೂಕಿನ ಕೌಜಗೇರಿ ಗ್ರಾಮದಲ್ಲಿ ನೆಡದ ಮಾರುತೇಶ್ವರ ನೂತನ ರಥೋತ್ಸವ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ನರಗುಂದ ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಊರಿನಲ್ಲಿ ಏಕತೆ ಮೂಡಿಸುವುದರಲ್ಲಿ ಧಾರ್ಮಿಕ ಕಾರ್ಯಗಳು ಸಹಕಾರಿಯಾಗಿವೆ. ದಾನ ಧರ್ಮ ಮಾಡುವುದರಿಂದ ಜೀವನದಲ್ಲಿ ಶಾಂತಿ ನೆಮ್ಮದಿ ನೆಲಸುವುದರ ಮೂಲಕ ಸನ್ಮಾರ್ಗದಲ್ಲಿ ಸಾಗಬಹುದು’ ಎಂದು ಹೇಳಿದರು.</p>.<p>ಗದಗ ರಾಜೇಶ್ವರಿ ಸಂಗಮೇಶ ಸಜ್ಜನ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.</p>.<p>ಹೊಳೆಆಲೂರಿನ ಕಲ್ಮೇಶ್ವರ ಮಹಾವಿದ್ಯಾಲಯದ ಉಪನ್ಯಾಸಕ ಮಲ್ಲಿಕಾರ್ಜುನ ಬೇವೂರ ಉಪನ್ಯಾಸ ನೀಡಿದರು.</p>.<p>ಬಳಿಕ ಗಣ್ಯರಿಗೆ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆದವು. ಇಬ್ರಾಹಿಂ ರೋಣದ ಸ್ವಾಗತಿಸಿದರು. ಬಸವರಾಜ ಸಜ್ಜನ ನಿರೂಪಿಸಿದರು. ಎಂ.ಜಿ.ಬಡಿಗೇರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳವಣಿಕಿ (ರೋಣ)</strong>: ‘ಧಾರ್ಮಿಕ ಕಾರ್ಯಗಳು ಸಾಮಾನ್ಯ ಮನುಷ್ಯನನ್ನು ಮಹಾ ಮಾನವನನ್ನಾಗಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಈ ಸಮಯದಲ್ಲಿ ಜನರು ಪರಸ್ಪರ ಸೇವಾ ಮನೋಭಾವ ಹಾಗೂ ಸೌರ್ಹಾದದಿಂದ ಕೂಡಿ ಕೆಲಸ ಮಾಡುವ ಮೂಲಕ ದೇವರ ಪ್ರೀತಿಗೆ ಪಾತ್ರರಾಗುತ್ತಾರೆ’ ಎಂದು ಬೆನಹಾಳ ಸದಾಶಿವ ಮಹಾಂತ ಶಿವಾಚಾರ್ಯರು ತಿಳಿಸಿದರು.</p>.<p>ತಾಲ್ಲೂಕಿನ ಕೌಜಗೇರಿ ಗ್ರಾಮದಲ್ಲಿ ನೆಡದ ಮಾರುತೇಶ್ವರ ನೂತನ ರಥೋತ್ಸವ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ನರಗುಂದ ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಊರಿನಲ್ಲಿ ಏಕತೆ ಮೂಡಿಸುವುದರಲ್ಲಿ ಧಾರ್ಮಿಕ ಕಾರ್ಯಗಳು ಸಹಕಾರಿಯಾಗಿವೆ. ದಾನ ಧರ್ಮ ಮಾಡುವುದರಿಂದ ಜೀವನದಲ್ಲಿ ಶಾಂತಿ ನೆಮ್ಮದಿ ನೆಲಸುವುದರ ಮೂಲಕ ಸನ್ಮಾರ್ಗದಲ್ಲಿ ಸಾಗಬಹುದು’ ಎಂದು ಹೇಳಿದರು.</p>.<p>ಗದಗ ರಾಜೇಶ್ವರಿ ಸಂಗಮೇಶ ಸಜ್ಜನ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.</p>.<p>ಹೊಳೆಆಲೂರಿನ ಕಲ್ಮೇಶ್ವರ ಮಹಾವಿದ್ಯಾಲಯದ ಉಪನ್ಯಾಸಕ ಮಲ್ಲಿಕಾರ್ಜುನ ಬೇವೂರ ಉಪನ್ಯಾಸ ನೀಡಿದರು.</p>.<p>ಬಳಿಕ ಗಣ್ಯರಿಗೆ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆದವು. ಇಬ್ರಾಹಿಂ ರೋಣದ ಸ್ವಾಗತಿಸಿದರು. ಬಸವರಾಜ ಸಜ್ಜನ ನಿರೂಪಿಸಿದರು. ಎಂ.ಜಿ.ಬಡಿಗೇರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>