<p><strong>ಮುಂಡರಗಿ:</strong> ‘ಜಗತ್ತಿನಲ್ಲಿ ಹಲವು ಧರ್ಮಗಳಿರುವಂತೆ ನಮ್ಮ ಪರಂಪರೆಯಲ್ಲಿ ಸತಿ–ಪತಿಗಳಿಗೂ ಒಂದು ಪವಿತ್ರವಾದ ಧರ್ಮವಿದೆ. ಭಾರತೀಯ ಸಂಸ್ಕೃತಿಯಲ್ಲಿ ಸತಿ–ಪತಿಗಳ ಧರ್ಮಕ್ಕೆ ತುಂಬಾ ಗೌರವವಿದ್ದು, ಅದು ಕುಟುಂಬದ ಎಲ್ಲ ಸದಸ್ಯರನ್ನು ಒಳಗೊಂಡಿರುತ್ತದೆ’ ಎಂದು ಡಾ.ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳ 155ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಸತಿ–ಪತಿಗಳು ದಾಂಪತ್ಯದಲ್ಲಿ ಪರೋಪಕಾರ, ಸಹಾಯ, ಸಹಕಾರ ಮೊದಲಾದ ಉದಾತ್ತ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ನಿತ್ಯ ಕಾಯಕ ಹಾಗೂ ದಾಸೋಹಗಳನ್ನು ಕೈಗೊಳ್ಳಬೇಕು. ಅಂತಹ ದಾಂಪತ್ಯ ಸದಾ ಸುಖಿಯಾಗಿರುತ್ತದೆ’ ಎಂದು ತಿಳಿಸಿದರು.</p>.<p>ಲಿಂಗನಾಯಕನಹಳ್ಳಿಯ ಶ್ರೀಚನ್ನವೀರ ಸ್ವಾಮೀಜಿ ಮಾತನಾಡಿ, ‘ಸತಿ, ಪತಿಗಳು ಒಂದೇ ರಥದ ಎರಡು ಚಕ್ರಗಳಿದ್ದಂತೆ. ಅದರಲ್ಲಿ ಯಾವುದೂ ಕೀಳಲ್ಲ, ಯಾವುದೂ ಮೇಲಲ್ಲ. ಇಬ್ಬರೂ ಪರಸ್ಪರ ಅರ್ಥಮಾಡಿಕೊಂಡು ಸಾಮರಸ್ಯದಿಂದ ಬದುಕಬೇಕು. ಇದೇ ನಿಜವಾದ ದಾಂಪತ್ಯ ಧರ್ಮವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಹಿರೇಮಲ್ಲನಕೇರಿ ಶ್ರೀಚನ್ನಬಸವ ಸ್ವಾಮೀಜಿ, ಕುಕನೂರಿನ ಮಹಾದೇವ ಸ್ವಾಮೀಜಿ, ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿದರು. ಶಿಕ್ಷಕ ಎಸ್.ಎಸ್. ಇನಾಮತಿ, ನಾಗಭೂಷಣ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.</p>.<p>ಶ್ರೀಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಸ್ವಾಮೀಜಿ, ಕನಕಗಿರಿಯ ಚನ್ನಮಲ್ಲ ಸ್ವಾಮೀಜಿ, ಶಿವಾನಂದ ದೇವರು, ಜಾತ್ರಾಮಹೋತ್ಸವ ಸಮಿತಿ ಅಧ್ಯಕ್ಷ ವಿ.ಜೆ. ಹಿರೇಮಠ, ಉಪಾಧ್ಯಕ್ಷ ದೇವು ಹಡಪದ, ಮುದಿಯಪ್ಪ ಕುಂಬಾರ, ಕಾರ್ಯದರ್ಶಿ ಶಿವು ನಾಡಗೌಡ್ರ, ಸಹಕಾರ್ಯದರ್ಶಿ ಶಿವು ವಾಲಿಕಾರ, ಖಜಾಂಚಿ ನಾಗರಾಜ ಮುರಡಿ ಇದ್ದರು.</p>.<p>ಸಾಮೂಹಿಕ ವಿವಾಹ ಸಮಾರಂಭದಲ್ಲಿ 25 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಜಗತ್ತಿನಲ್ಲಿ ಹಲವು ಧರ್ಮಗಳಿರುವಂತೆ ನಮ್ಮ ಪರಂಪರೆಯಲ್ಲಿ ಸತಿ–ಪತಿಗಳಿಗೂ ಒಂದು ಪವಿತ್ರವಾದ ಧರ್ಮವಿದೆ. ಭಾರತೀಯ ಸಂಸ್ಕೃತಿಯಲ್ಲಿ ಸತಿ–ಪತಿಗಳ ಧರ್ಮಕ್ಕೆ ತುಂಬಾ ಗೌರವವಿದ್ದು, ಅದು ಕುಟುಂಬದ ಎಲ್ಲ ಸದಸ್ಯರನ್ನು ಒಳಗೊಂಡಿರುತ್ತದೆ’ ಎಂದು ಡಾ.ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳ 155ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಸತಿ–ಪತಿಗಳು ದಾಂಪತ್ಯದಲ್ಲಿ ಪರೋಪಕಾರ, ಸಹಾಯ, ಸಹಕಾರ ಮೊದಲಾದ ಉದಾತ್ತ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ನಿತ್ಯ ಕಾಯಕ ಹಾಗೂ ದಾಸೋಹಗಳನ್ನು ಕೈಗೊಳ್ಳಬೇಕು. ಅಂತಹ ದಾಂಪತ್ಯ ಸದಾ ಸುಖಿಯಾಗಿರುತ್ತದೆ’ ಎಂದು ತಿಳಿಸಿದರು.</p>.<p>ಲಿಂಗನಾಯಕನಹಳ್ಳಿಯ ಶ್ರೀಚನ್ನವೀರ ಸ್ವಾಮೀಜಿ ಮಾತನಾಡಿ, ‘ಸತಿ, ಪತಿಗಳು ಒಂದೇ ರಥದ ಎರಡು ಚಕ್ರಗಳಿದ್ದಂತೆ. ಅದರಲ್ಲಿ ಯಾವುದೂ ಕೀಳಲ್ಲ, ಯಾವುದೂ ಮೇಲಲ್ಲ. ಇಬ್ಬರೂ ಪರಸ್ಪರ ಅರ್ಥಮಾಡಿಕೊಂಡು ಸಾಮರಸ್ಯದಿಂದ ಬದುಕಬೇಕು. ಇದೇ ನಿಜವಾದ ದಾಂಪತ್ಯ ಧರ್ಮವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಹಿರೇಮಲ್ಲನಕೇರಿ ಶ್ರೀಚನ್ನಬಸವ ಸ್ವಾಮೀಜಿ, ಕುಕನೂರಿನ ಮಹಾದೇವ ಸ್ವಾಮೀಜಿ, ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿದರು. ಶಿಕ್ಷಕ ಎಸ್.ಎಸ್. ಇನಾಮತಿ, ನಾಗಭೂಷಣ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.</p>.<p>ಶ್ರೀಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಸ್ವಾಮೀಜಿ, ಕನಕಗಿರಿಯ ಚನ್ನಮಲ್ಲ ಸ್ವಾಮೀಜಿ, ಶಿವಾನಂದ ದೇವರು, ಜಾತ್ರಾಮಹೋತ್ಸವ ಸಮಿತಿ ಅಧ್ಯಕ್ಷ ವಿ.ಜೆ. ಹಿರೇಮಠ, ಉಪಾಧ್ಯಕ್ಷ ದೇವು ಹಡಪದ, ಮುದಿಯಪ್ಪ ಕುಂಬಾರ, ಕಾರ್ಯದರ್ಶಿ ಶಿವು ನಾಡಗೌಡ್ರ, ಸಹಕಾರ್ಯದರ್ಶಿ ಶಿವು ವಾಲಿಕಾರ, ಖಜಾಂಚಿ ನಾಗರಾಜ ಮುರಡಿ ಇದ್ದರು.</p>.<p>ಸಾಮೂಹಿಕ ವಿವಾಹ ಸಮಾರಂಭದಲ್ಲಿ 25 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>