<p>ಪ್ರಜಾವಾಣಿ ವಾರ್ತೆ</p>.<p><strong>ಲಕ್ಷ್ಮೇಶ್ವರ</strong>: ‘ಸಾಮೂಹಿಕ ವಿವಾಹ ನಡೆಸುವುದರಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯ. ಬಡವರಿಗೆ ಅನುಕೂಲ ಕಲ್ಪಿಸುವ ಉದ್ಧೇಶದಿಂದ ಪ್ರತಿವರ್ಷ ಹೂವಿನಶಿಗ್ಲಿ ವಿರಕ್ತಮಠದಲ್ಲಿ ಸಾಮೂಹಿಕ ವಿವಾಹ ನಡೆಸುವ ಕಾರ್ಯ ಶ್ಲಾಘನೀಯ’ ಎಂದು ಸವಣೂರು ದೊಡ್ಡಹುಣಸೆಮಠದ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ ಮಠದ ಚೆನ್ನವೀರ ಸ್ವಾಮೀಜಿ ಮಾತನಾಡಿ, ‘ಮಠದ ಹಿಂದಿನ ಮಠಾಧೀಶರಾದ ಲಿಂ.ನಿರಂಜನ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಮಠ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಭಕ್ತರ ಸಹಕಾರದಿಂದ ಮಠ ಅಭಿವೃದ್ಧಿ ಆಗುತ್ತಿದೆ. ಮಠದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉಚಿತ ದಾಸೋಹ, ವಸತಿ, ವಿದ್ಯೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ, ಗುಡ್ಡದನ್ವೇರಿ ವಿರಕ್ತಮಠದ ಶಿವಯೋಗೀಶ್ವರ ಸ್ವಾಮೀಜಿ, ಹಿರೇಮಲ್ಲನಕೇರಿ ವಿರಕ್ತಮಠದ ಅಭಿನವ ಚನ್ನಬಸವ ಸ್ವಾಮೀಜಿ, ಬಸವೇಶ ಮಹಾಂತಶೆಟ್ಟರ, ಚಂಬಣ್ಣ ಬಾಳಿಕಾಯಿ, ನೀಲಪ್ಪ ಕರ್ಜೆಕಣ್ಣವರ ವಾಲಿಶೆಟ್ರ, ಎಂ.ಎಂ. ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಲಕ್ಷ್ಮೇಶ್ವರ</strong>: ‘ಸಾಮೂಹಿಕ ವಿವಾಹ ನಡೆಸುವುದರಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯ. ಬಡವರಿಗೆ ಅನುಕೂಲ ಕಲ್ಪಿಸುವ ಉದ್ಧೇಶದಿಂದ ಪ್ರತಿವರ್ಷ ಹೂವಿನಶಿಗ್ಲಿ ವಿರಕ್ತಮಠದಲ್ಲಿ ಸಾಮೂಹಿಕ ವಿವಾಹ ನಡೆಸುವ ಕಾರ್ಯ ಶ್ಲಾಘನೀಯ’ ಎಂದು ಸವಣೂರು ದೊಡ್ಡಹುಣಸೆಮಠದ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ ಮಠದ ಚೆನ್ನವೀರ ಸ್ವಾಮೀಜಿ ಮಾತನಾಡಿ, ‘ಮಠದ ಹಿಂದಿನ ಮಠಾಧೀಶರಾದ ಲಿಂ.ನಿರಂಜನ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಮಠ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಭಕ್ತರ ಸಹಕಾರದಿಂದ ಮಠ ಅಭಿವೃದ್ಧಿ ಆಗುತ್ತಿದೆ. ಮಠದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉಚಿತ ದಾಸೋಹ, ವಸತಿ, ವಿದ್ಯೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ, ಗುಡ್ಡದನ್ವೇರಿ ವಿರಕ್ತಮಠದ ಶಿವಯೋಗೀಶ್ವರ ಸ್ವಾಮೀಜಿ, ಹಿರೇಮಲ್ಲನಕೇರಿ ವಿರಕ್ತಮಠದ ಅಭಿನವ ಚನ್ನಬಸವ ಸ್ವಾಮೀಜಿ, ಬಸವೇಶ ಮಹಾಂತಶೆಟ್ಟರ, ಚಂಬಣ್ಣ ಬಾಳಿಕಾಯಿ, ನೀಲಪ್ಪ ಕರ್ಜೆಕಣ್ಣವರ ವಾಲಿಶೆಟ್ರ, ಎಂ.ಎಂ. ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>