‘ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸ್ವೀಪ್ ಸಮಿತಿಯಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತಗಟ್ಟೆಯಲ್ಲಿ ಮತಯಂತ್ರ ಪ್ರಾತ್ಯಕ್ಷಿಕೆಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲ ಆಶಾ ಕಾರ್ಯಕರ್ತೆಯರು ಹಾಗೂ ತಮ್ಮ ಕುಟುಂಬದ ಸದಸ್ಯರು ಸೇರಿದಂತೆ ತಾವು ಕಾರ್ಯನಿರ್ವಹಿಸುವ ಪ್ರದೇಶದಲ್ಲಿರುವ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಹೇಳಿದರು.