ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಸಿ.ಎಸ್.ಅರಸನಾಳ ಮಾತನಾಡಿ, ‘ಸ್ವಾವಲಂಬಿ ಭಾರತ ಅಭಿಯಾನದ ಅಡಿ ಏಳು ಕ್ಷೇತ್ರಗಳಲ್ಲಿ ಸುಧಾರಣೆ ಹೊಂದಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಭಾರತದ ಸಂಕಲ್ಪವನ್ನು ಸಾಬೀತುಪಡಿಸುವ ಸಲುವಾಗಿ ಭೂಮಿ, ಕಾರ್ಮಿಕ, ದ್ರವ್ಯ ಮತ್ತು ಕಾನೂನುಗಳೆಲ್ಲವನ್ನೂ ಆತ್ಮ ನಿರ್ಭರ ಭಾರತ ಪ್ಯಾಕೇಜ್ನಲ್ಲಿ ಒತ್ತಿಹೇಳಲಾಗಿದೆ’ ಎಂದು ತಿಳಿಸಿದರು.