<p><strong>ಮುಂಡರಗಿ:</strong> ‘ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಅತೀ ರಂಜಿತ ಹಾಗೂ ನಕಾರಾತ್ಮಕ ಸುದ್ದಿಗಳನ್ನು ಹೆಚ್ಚು ಬಿತ್ತರಿಸುತ್ತಿದ್ದು, ಅವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಲಿವೆ. ಇದರಿಂದ ಸಮಾಜದಲ್ಲಿ ಯಾವ ಸುಧಾರಣೆ ತರಲಾಗುವುದಿಲ್ಲ’ ಎಂದು ಪುರಸಭೆ ಸದಸ್ಯ ಪ್ರಲ್ಹಾದ ಹೊಸಮನಿ ಹೇಳಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಹಾಗೂ ಚೈತನ್ಯ ಶಿಕ್ಷಣ ಸಂಸ್ಥೆಗಳು ಸಂಯುಕ್ತವಾಗಿ ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಶರಣ ಚಿಂತನ ಮಾಲೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅನ್ನದಾನೀಶ್ವರ ಸ್ವಾಮೀಜಿ ಉದಾರ ದೇಣಿಗೆ ಹಾಗೂ ನಿವೇಶನ ದಾನದ ಮೂಲಕ ಸುಸಜ್ಜಿತ ನೂತನ ಕಸಾಪ ಭವನ ನಿರ್ಮಾಣಗೊಂಡಿದ್ದು, ಅದಕ್ಕೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಮುಖ್ಯ ಶಿಕ್ಷಕ ಎಸ್.ಎಸ್.ಮಠದ ಮಾತನಾಡಿ, ಕಾಯಕ ನಿಷ್ಠೆಯುಳ್ಳ ಶರಣ ಮರುಳ ಶಂಕರದೇವರು ಅನುಭವ ಮಂಟಪದಲ್ಲಿ ಕಾಯಕ ಮಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ತತ್ವಾದರ್ಶಗಳು ನಮಗೆಲ್ಲ ಮಾದರಿಯಾಗಿವೆ ಎಂದು ತಿಳಿಸಿದರು.</p>.<p>ಕಸಾಪ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, ಶರಣ ಚಿಂತನ ಮಾಲೆ ಉಪನ್ಯಾಸ ಕಾರ್ಯಕ್ರಮವು ಈವರೆಗೂ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿದ್ದವು. ಇನ್ಮುಂದೆ ಶರಣ ಚಿಂತನ ಮಾಲೆ ಸೇರಿದಂತೆ ಎಲ್ಲ ಸಭೆ, ಸಮಾರಂಭಗಳನ್ನು ನೂತನ ಕಸಾಪ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿದು.</p>.<p>ಪತ್ರಕರ್ತರಾದ ಸಂತೋಷ ಮುರುಡಿ, ಮಹಾಲಿಂಗೇಶ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಸರೋಜಾ ಹಿರೇಮಠ ಪ್ರಾರ್ಥಿಸಿದರು. ಎನ್.ಎನ್.ಕಲಕೇರಿ ಸರ್ವರನ್ನು ಸ್ವಾಗತಿಸಿದರು. ಕಾಶೀನಾಥ ಬಿಳಿಮಗ್ಗದ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಮುಧೋಳ ಕಾರ್ಯಕ್ರಮ ನಿರೂಪಿಸಿದರು. ವೀಣಾ ಪಾಟೀಲ ವಂದಿಸಿದರು.</p>.<p>ಹಿರಿಯ ಸಾಹಿತಿ ಆರ್.ಎಲ್. ಪೊಲೀಸಪಾಟೀಲ, ಮುಖಂಡರಾದ ನಾಗೇಶ ಹುಬ್ಬಳ್ಳಿ, ಎಸ್.ಬಿ.ಕೆ.ಗೌಡರ, ಶಂಕರ ಕೂಕನೂರ, ಎನ್.ಎಸ್.ಅಲ್ಲಿಪುರ, ಎ.ವೈ.ನವಲಗುಂದ, ಆರ್.ಕೆ.ರಾಯನಗೌಡರ, ವಿ.ಎಪ್.ಗುಡದಪ್ಪನವರ, ನಿಂಗು ಸೊಲಗಿ, ಎಸ್.ಬಿ.ಹಿರೇಮಠ, ಕೊಟ್ರೇಶ ಜವಳಿ, ಸುರೇಶ ಭಾವಿಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಅತೀ ರಂಜಿತ ಹಾಗೂ ನಕಾರಾತ್ಮಕ ಸುದ್ದಿಗಳನ್ನು ಹೆಚ್ಚು ಬಿತ್ತರಿಸುತ್ತಿದ್ದು, ಅವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಲಿವೆ. ಇದರಿಂದ ಸಮಾಜದಲ್ಲಿ ಯಾವ ಸುಧಾರಣೆ ತರಲಾಗುವುದಿಲ್ಲ’ ಎಂದು ಪುರಸಭೆ ಸದಸ್ಯ ಪ್ರಲ್ಹಾದ ಹೊಸಮನಿ ಹೇಳಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಹಾಗೂ ಚೈತನ್ಯ ಶಿಕ್ಷಣ ಸಂಸ್ಥೆಗಳು ಸಂಯುಕ್ತವಾಗಿ ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಶರಣ ಚಿಂತನ ಮಾಲೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅನ್ನದಾನೀಶ್ವರ ಸ್ವಾಮೀಜಿ ಉದಾರ ದೇಣಿಗೆ ಹಾಗೂ ನಿವೇಶನ ದಾನದ ಮೂಲಕ ಸುಸಜ್ಜಿತ ನೂತನ ಕಸಾಪ ಭವನ ನಿರ್ಮಾಣಗೊಂಡಿದ್ದು, ಅದಕ್ಕೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಮುಖ್ಯ ಶಿಕ್ಷಕ ಎಸ್.ಎಸ್.ಮಠದ ಮಾತನಾಡಿ, ಕಾಯಕ ನಿಷ್ಠೆಯುಳ್ಳ ಶರಣ ಮರುಳ ಶಂಕರದೇವರು ಅನುಭವ ಮಂಟಪದಲ್ಲಿ ಕಾಯಕ ಮಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ತತ್ವಾದರ್ಶಗಳು ನಮಗೆಲ್ಲ ಮಾದರಿಯಾಗಿವೆ ಎಂದು ತಿಳಿಸಿದರು.</p>.<p>ಕಸಾಪ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, ಶರಣ ಚಿಂತನ ಮಾಲೆ ಉಪನ್ಯಾಸ ಕಾರ್ಯಕ್ರಮವು ಈವರೆಗೂ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿದ್ದವು. ಇನ್ಮುಂದೆ ಶರಣ ಚಿಂತನ ಮಾಲೆ ಸೇರಿದಂತೆ ಎಲ್ಲ ಸಭೆ, ಸಮಾರಂಭಗಳನ್ನು ನೂತನ ಕಸಾಪ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿದು.</p>.<p>ಪತ್ರಕರ್ತರಾದ ಸಂತೋಷ ಮುರುಡಿ, ಮಹಾಲಿಂಗೇಶ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಸರೋಜಾ ಹಿರೇಮಠ ಪ್ರಾರ್ಥಿಸಿದರು. ಎನ್.ಎನ್.ಕಲಕೇರಿ ಸರ್ವರನ್ನು ಸ್ವಾಗತಿಸಿದರು. ಕಾಶೀನಾಥ ಬಿಳಿಮಗ್ಗದ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಮುಧೋಳ ಕಾರ್ಯಕ್ರಮ ನಿರೂಪಿಸಿದರು. ವೀಣಾ ಪಾಟೀಲ ವಂದಿಸಿದರು.</p>.<p>ಹಿರಿಯ ಸಾಹಿತಿ ಆರ್.ಎಲ್. ಪೊಲೀಸಪಾಟೀಲ, ಮುಖಂಡರಾದ ನಾಗೇಶ ಹುಬ್ಬಳ್ಳಿ, ಎಸ್.ಬಿ.ಕೆ.ಗೌಡರ, ಶಂಕರ ಕೂಕನೂರ, ಎನ್.ಎಸ್.ಅಲ್ಲಿಪುರ, ಎ.ವೈ.ನವಲಗುಂದ, ಆರ್.ಕೆ.ರಾಯನಗೌಡರ, ವಿ.ಎಪ್.ಗುಡದಪ್ಪನವರ, ನಿಂಗು ಸೊಲಗಿ, ಎಸ್.ಬಿ.ಹಿರೇಮಠ, ಕೊಟ್ರೇಶ ಜವಳಿ, ಸುರೇಶ ಭಾವಿಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>