<p><strong>ನರೇಗಲ್</strong>: ‘ಪ್ರತಿದಿನ ಧ್ಯಾನ ಮಾಡುವುದರಿಂದ ನರಮಂಡಲಕ್ಕೆ ವಿಶ್ರಾಂತಿ ಜೊತೆಗೆ ಮಾನಸಿಕ ಪ್ರಕ್ರಿಯೆಗಳು ಸ್ವಯಂಪ್ರೇರಿತ ನಿಯಂತ್ರಣದಲ್ಲಿಡಲು ಸಹಕಾರಿ’ ಎಂದು ಗದಗ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಬಿ.ಕೆ. ಜಯಂತಕ್ಕ ಹೇಳಿದರು.</p>.<p>ನರೇಗಲ್ ಪಟ್ಟಣದ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ರಾಜಸ್ಥಾನದ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸನ್ಯಾಸಿನಿ ಜಗದಂಭಾ ಸರಸ್ವತಿ ಅವರ ಸ್ಮೃತಿ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.</p>.<p>‘ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯನ್ನು ತಮ್ಮ 16ನೇ ವಯಸ್ಸಿನಲ್ಲಿಯೇ 1950ರಲ್ಲಿ ರಾಜಸ್ಥಾನದ ಅಬು ಪರ್ವತದಲ್ಲಿ ಸ್ಥಾಪಿಸಿದರು. 1952 ರಲ್ಲಿ ಕರ್ನಾಟಕಕ್ಕೆ ಹೃದಯ ಪುಷ್ಪದಾದಿಯಾಗಿ ಪರಿಚಿತಗೊಂಡರು. ಅವರೊಂದಿಗೆ ರಾಜಋಷಿ ದಾದಾ ಲೇಖರಾಜರ ಆಧ್ಯಾತ್ಮದ ಜ್ಞಾನದಿಂದಾಗಿ ಇಂದು ದೇಶದಾದ್ಯಾಂತ ಸಾವಿರಾರು ಕೇಂದ್ರಗಳನ್ನು ತೆರೆಯುವಂತಾಗಿದೆ’ ಎಂದರು.</p>.<p>ನರೇಗಲ್ನ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ. ಸವಿತಕ್ಕ ಮಾತನಾಡಿ, ‘ಆಧ್ಯಾತ್ಮ ಶಿಕ್ಷಣ ಮನಸ್ಸು ಶಾಂತಗೊಳಿಸುವ ಜೊತೆಗೆ ಒತ್ತಡ ಮುಕ್ತ ಜೀವನ ಸಾಗಿಸಲು ಸಹಕಾರ ನೀಡುತ್ತದೆ’ ಎಂದರು.</p>.<p>ಈ ವೇಳೆ ಈಶ್ವರೀಯ ವಿಶ್ವವಿದ್ಯಾಲಯದ ಅನುಯಾಯಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ‘ಪ್ರತಿದಿನ ಧ್ಯಾನ ಮಾಡುವುದರಿಂದ ನರಮಂಡಲಕ್ಕೆ ವಿಶ್ರಾಂತಿ ಜೊತೆಗೆ ಮಾನಸಿಕ ಪ್ರಕ್ರಿಯೆಗಳು ಸ್ವಯಂಪ್ರೇರಿತ ನಿಯಂತ್ರಣದಲ್ಲಿಡಲು ಸಹಕಾರಿ’ ಎಂದು ಗದಗ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಬಿ.ಕೆ. ಜಯಂತಕ್ಕ ಹೇಳಿದರು.</p>.<p>ನರೇಗಲ್ ಪಟ್ಟಣದ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ರಾಜಸ್ಥಾನದ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸನ್ಯಾಸಿನಿ ಜಗದಂಭಾ ಸರಸ್ವತಿ ಅವರ ಸ್ಮೃತಿ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.</p>.<p>‘ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯನ್ನು ತಮ್ಮ 16ನೇ ವಯಸ್ಸಿನಲ್ಲಿಯೇ 1950ರಲ್ಲಿ ರಾಜಸ್ಥಾನದ ಅಬು ಪರ್ವತದಲ್ಲಿ ಸ್ಥಾಪಿಸಿದರು. 1952 ರಲ್ಲಿ ಕರ್ನಾಟಕಕ್ಕೆ ಹೃದಯ ಪುಷ್ಪದಾದಿಯಾಗಿ ಪರಿಚಿತಗೊಂಡರು. ಅವರೊಂದಿಗೆ ರಾಜಋಷಿ ದಾದಾ ಲೇಖರಾಜರ ಆಧ್ಯಾತ್ಮದ ಜ್ಞಾನದಿಂದಾಗಿ ಇಂದು ದೇಶದಾದ್ಯಾಂತ ಸಾವಿರಾರು ಕೇಂದ್ರಗಳನ್ನು ತೆರೆಯುವಂತಾಗಿದೆ’ ಎಂದರು.</p>.<p>ನರೇಗಲ್ನ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ. ಸವಿತಕ್ಕ ಮಾತನಾಡಿ, ‘ಆಧ್ಯಾತ್ಮ ಶಿಕ್ಷಣ ಮನಸ್ಸು ಶಾಂತಗೊಳಿಸುವ ಜೊತೆಗೆ ಒತ್ತಡ ಮುಕ್ತ ಜೀವನ ಸಾಗಿಸಲು ಸಹಕಾರ ನೀಡುತ್ತದೆ’ ಎಂದರು.</p>.<p>ಈ ವೇಳೆ ಈಶ್ವರೀಯ ವಿಶ್ವವಿದ್ಯಾಲಯದ ಅನುಯಾಯಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>