ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಿತೂರಿ ಇದೆ ಎಂದು ಆರೋಪಿಸಿ ಹಾಗೂ ಸಿದ್ದರಾಮಯ್ಯ ಅವರನ್ನು ಮೀರ್ ಸಾದಿಕ್ ಎಂದು ಉಲ್ಲೇಖಿಸಿ ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಹುಬ್ಬಳ್ಳಿಯಲ್ಲಿ ಗಲಭೆಯನ್ನು ಮೊದಲು ಹುಟ್ಟು ಹಾಕಿದ್ದು ಯಾರು? ಮೊದಲು ವಿಡಿಯೊ ಪೋಸ್ಟ್ ಮಾಡಿದವನು ಯಾರು? ಆತ ಬಜರಂಗದಳದ ಕಾರ್ಯಕರ್ತ. ಈಗ ಆತನನ್ನು ಬಂಧಿಸಲಾಗಿದೆ. ಆತ ಪೋಸ್ಟ್ ಹಾಕಿದ ನಂತರ ಗಲಾಟೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಶಿಕ್ಷೆಯನ್ನೂ ಕೊಡಲಿ. ಆದರೆ, ತಮ್ಮ ತಪ್ಪು, ಭ್ರಷ್ಟಾಚಾರ ಹಾಗೂ ಸುಳ್ಳುಗಳನ್ನು ಮುಚ್ಚಿಕೊಳ್ಳಲುಬಿಜೆಪಿಯವರು ಕಾಂಗ್ರೆಸ್ ಮೇಲೆ ಆರೋಪಿಸುತ್ತಿದ್ದಾರೆ’ ಎಂದರು.