ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತರ ರಾಜ್ಯ ಕಾರ್ಯಕಾರಣಿ ಸಭೆ ಯಶಸ್ವಿ

Last Updated 22 ಆಗಸ್ಟ್ 2021, 15:20 IST
ಅಕ್ಷರ ಗಾತ್ರ

ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸಮಿತಿ ಸಭೆ ನಗರದ ಶ್ರೀನಿವಾಸ ಭವನದಲ್ಲಿ ಭಾನುವಾರ ನಡೆಯಿತು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿಂದಿನ ಕಾರ್ಯಕಾರಣಿ ಸಭೆಯ ನಡಾವಳಿಗಳನ್ನು ಪ್ರಧಾನ ಕಾರ್ಯದರ್ಶಿ ಜಿ.ಲೋಕೇಶ ಓದಿ ಅನುಮೋದನೆ ಪಡೆದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಯಕಾರಣಿ ಮಂಡಳಿ ಸದಸ್ಯರು ಪಾಲ್ಗೊಂಡು, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಕಾರ್ಯಕ್ರಮದ ಆರಂಭದಲ್ಲಿ ಕೋವಿಡ್ ಹಾಗೂ ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ರಾಜ್ಯ ಘಟಕದ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ, ಪುಂಡಲೀಕ ಬಾಳೋಜಿ, ಬಂಗ್ಲೆ ಮಲ್ಲಿಕಾರ್ಜುನ, ಸಂಜೀವರಾವ್ ಕುಲಕರ್ಣಿ, ಗದಗ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಷರೀಫನವರ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಅಜಿತ್ ಹೊಂಬಾಳಿ ಇದ್ದರು.

ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕುಷ್ಟಗಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT