<p><strong>ಗದಗ: ‘</strong>ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಒಟ್ಟು 46 ಸಮುದಾಯಗಳು ಇದ್ದು, ಅವುಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು’ ಎಂದು ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವಿಂದ್ರ ಶೆಟ್ಟಿ ಹೇಳಿದರು.</p>.<p>ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಅಲೆಮಾರಿ ಸಮುದಾಯವು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ನಿಗಮದಿಂದ ಸಮುದಾಯದ ಆರ್ಥಿಕ ಸಬಲತೆ ಸಾಧಿಸುವುದರ ಜತೆಗೆ ಅವರು ಎಲ್ಲರಂತೆ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡಲಾಗುವುದು’ ಎಂದು ತಿಳಿಸಿದರು.</p>.<p>‘ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವುದರ ಮೂಲಕ ಸಮುದಾಯದ ಪ್ರಗತಿ ಮಾಡಲಾಗುವುದು. ಗದಗ ಜಿಲ್ಲೆಯಲ್ಲಿ ಅಂದಾಜು 47 ಸಾವಿರ ಅಲೆಮಾರಿ, ಅರೆ ಅಲೆಮಾರಿ ಜನರು ವಾಸವಿದ್ದು ಅವರಿಗೆ ನಿವೇಶನ ಸೇರಿದಂತೆ ಸಾಲ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.</p>.<p>‘ನಿಗಮದ ಅಧ್ಯಕ್ಷನಾದ ನಂತರ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಇದು 11ನೇ ಜಿಲ್ಲೆಯಾಗಿದೆ. ಸಮುದಾಯದವರ ಸ್ಥಿತಿಗತಿ , ಆಚಾರ ವಿಚಾರವನ್ನು ಪ್ರವಾಸದ ಮೂಲಕ ಅರಿಯುವುದರೊಂದಿಗೆ ಸಮಗ್ರ ವರದಿ ತಯಾರಿಸಿ ಮುಖ್ಯಮಂತ್ರಿಗೆ ಸಲ್ಲಿಸಲಾಗುವುದು’ ಎಂದು ಹೇಳಿದರು.</p>.<p>‘ಅಲೆಮಾರಿ ಸಮುದಾಯಕ್ಕೆ ಪ್ರತಿ ಜಿಲ್ಲೆಗೆ ಒಂದರಂತೆ ಸಭಾಭವನ ನಿರ್ಮಿಸಬೇಕು. ಅದಕ್ಕೆ ಅಗತ್ಯವಿರುವ ಅನುದಾನ ಕ್ರೋಡೀಕರಣ ಮಾಡಲಾಗುವುದು. ಅಲ್ಲದೇ ಪ್ರತ್ಯೇಕ ಸ್ಮಶಾನ ಅಗತ್ಯವಿದ್ದು ಅವುಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗು ವುದು’ ಎಂದು ತಿಳಿಸಿದರು.</p>.<p>ರಾಜ್ಯ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಹರೀಶ ಪೂಜಾರ, ಗೊಂದಳಿ ಸಮಾಜದ ಮುಖಂಡ ವಿಠಲ ಗಣಾಚಾರಿ, ಸಮಾಜದ ಮುಖಂಡರಾದ ಶಂಕರ ಹೆಬ್ಬಳ್ಳಿ , ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಿಯದರ್ಶಿನಿ ಇದ್ದರು.</p>.<p class="Briefhead"><strong>ಸಮುದಾಯದ ಏಳಿಗೆಗೆ ಶ್ರಮಿಸಲು ಸೂಚನೆ</strong></p>.<p><strong>ಗದಗ:</strong> ‘ಜಿಲ್ಲೆಯಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿಸುವುದರೊಂದಿಗೆ ಸಮುದಾಯದ ಆರ್ಥಿಕ ಪ್ರಗತಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದು ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಉತ್ತಮ ಶಿಕ್ಷಣ ದೊರಕಿಸಿಕೊಡಲು ಶ್ರಮಿಸಬೇಕು’ ಎಂದು ಹೇಳಿದರು.</p>.<p>ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಟಿ. ಪ್ರಿಯದರ್ಶಿನಿ ಮಾತನಾಡಿ, ‘2020-21ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ ಅಡಿ 25 ಫಲಾನುಭವಿಗಳಿಗೆ ₹12.50 ಲಕ್ಷ ಆರ್ಥಿಕ ಗುರಿ ನಿಗದಿಪಡಿಸಲಾಗಿತ್ತು. ಇದರಲ್ಲಿ 21 ಫಲಾನುಭವಿಗಳಿಗೆ ₹10.50 ಲಕ್ಷ ವಿತರಿಸಲಾಗಿದೆ. ಕಿರುಸಾಲ ಯೋಜನೆ ಅಡಿ 10 ಮಂದಿ ಫಲಾನುಭವಿಗಳಿಗೆ ₹2 ಲಕ್ಷ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: ‘</strong>ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಒಟ್ಟು 46 ಸಮುದಾಯಗಳು ಇದ್ದು, ಅವುಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು’ ಎಂದು ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವಿಂದ್ರ ಶೆಟ್ಟಿ ಹೇಳಿದರು.</p>.<p>ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಅಲೆಮಾರಿ ಸಮುದಾಯವು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ನಿಗಮದಿಂದ ಸಮುದಾಯದ ಆರ್ಥಿಕ ಸಬಲತೆ ಸಾಧಿಸುವುದರ ಜತೆಗೆ ಅವರು ಎಲ್ಲರಂತೆ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡಲಾಗುವುದು’ ಎಂದು ತಿಳಿಸಿದರು.</p>.<p>‘ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವುದರ ಮೂಲಕ ಸಮುದಾಯದ ಪ್ರಗತಿ ಮಾಡಲಾಗುವುದು. ಗದಗ ಜಿಲ್ಲೆಯಲ್ಲಿ ಅಂದಾಜು 47 ಸಾವಿರ ಅಲೆಮಾರಿ, ಅರೆ ಅಲೆಮಾರಿ ಜನರು ವಾಸವಿದ್ದು ಅವರಿಗೆ ನಿವೇಶನ ಸೇರಿದಂತೆ ಸಾಲ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.</p>.<p>‘ನಿಗಮದ ಅಧ್ಯಕ್ಷನಾದ ನಂತರ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಇದು 11ನೇ ಜಿಲ್ಲೆಯಾಗಿದೆ. ಸಮುದಾಯದವರ ಸ್ಥಿತಿಗತಿ , ಆಚಾರ ವಿಚಾರವನ್ನು ಪ್ರವಾಸದ ಮೂಲಕ ಅರಿಯುವುದರೊಂದಿಗೆ ಸಮಗ್ರ ವರದಿ ತಯಾರಿಸಿ ಮುಖ್ಯಮಂತ್ರಿಗೆ ಸಲ್ಲಿಸಲಾಗುವುದು’ ಎಂದು ಹೇಳಿದರು.</p>.<p>‘ಅಲೆಮಾರಿ ಸಮುದಾಯಕ್ಕೆ ಪ್ರತಿ ಜಿಲ್ಲೆಗೆ ಒಂದರಂತೆ ಸಭಾಭವನ ನಿರ್ಮಿಸಬೇಕು. ಅದಕ್ಕೆ ಅಗತ್ಯವಿರುವ ಅನುದಾನ ಕ್ರೋಡೀಕರಣ ಮಾಡಲಾಗುವುದು. ಅಲ್ಲದೇ ಪ್ರತ್ಯೇಕ ಸ್ಮಶಾನ ಅಗತ್ಯವಿದ್ದು ಅವುಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗು ವುದು’ ಎಂದು ತಿಳಿಸಿದರು.</p>.<p>ರಾಜ್ಯ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಹರೀಶ ಪೂಜಾರ, ಗೊಂದಳಿ ಸಮಾಜದ ಮುಖಂಡ ವಿಠಲ ಗಣಾಚಾರಿ, ಸಮಾಜದ ಮುಖಂಡರಾದ ಶಂಕರ ಹೆಬ್ಬಳ್ಳಿ , ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಿಯದರ್ಶಿನಿ ಇದ್ದರು.</p>.<p class="Briefhead"><strong>ಸಮುದಾಯದ ಏಳಿಗೆಗೆ ಶ್ರಮಿಸಲು ಸೂಚನೆ</strong></p>.<p><strong>ಗದಗ:</strong> ‘ಜಿಲ್ಲೆಯಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿಸುವುದರೊಂದಿಗೆ ಸಮುದಾಯದ ಆರ್ಥಿಕ ಪ್ರಗತಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದು ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಉತ್ತಮ ಶಿಕ್ಷಣ ದೊರಕಿಸಿಕೊಡಲು ಶ್ರಮಿಸಬೇಕು’ ಎಂದು ಹೇಳಿದರು.</p>.<p>ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಟಿ. ಪ್ರಿಯದರ್ಶಿನಿ ಮಾತನಾಡಿ, ‘2020-21ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ ಅಡಿ 25 ಫಲಾನುಭವಿಗಳಿಗೆ ₹12.50 ಲಕ್ಷ ಆರ್ಥಿಕ ಗುರಿ ನಿಗದಿಪಡಿಸಲಾಗಿತ್ತು. ಇದರಲ್ಲಿ 21 ಫಲಾನುಭವಿಗಳಿಗೆ ₹10.50 ಲಕ್ಷ ವಿತರಿಸಲಾಗಿದೆ. ಕಿರುಸಾಲ ಯೋಜನೆ ಅಡಿ 10 ಮಂದಿ ಫಲಾನುಭವಿಗಳಿಗೆ ₹2 ಲಕ್ಷ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>