<p><strong>ಗದಗ: ‘</strong>ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ನೋಂದಾಯಿತ ಜಾಬ್ಕಾರ್ಡ್ ಪಡೆದ ಕುಟುಂಬಸ್ಥರ ಇ- ಕೆವೈಸಿ ಮಾಡಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ. ಗ್ರಾಮದ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಗದಗ ತಾಲ್ಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಕುಮಾರ ಪೂಜಾರ ತಿಳಿಸಿದರು.</p>.<p>ತಾಲ್ಲೂಕಿನ ಅಸುಂಡಿ ಗ್ರಾಮ ಪಂಚಾಯಿತಿಗೆ ಮಂಗಳವಾರ ಭೇಟಿ ನೀಡಿ ಉದ್ಯೋಗ ಖಾತ್ರಿ ಜಾಬ್ಕಾರ್ಡ್ ಇ- ಕೆವೈಸಿ ಪ್ರಗತಿ ಪರಿಶೀಲಿಸಿ ಮಾತನಾಡಿದರು.</p>.<p>ಅ.31ರ ಒಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮುಖಚಹರೆ ದೃಢೀಕರಣ ಮಾಡಲು ಮನೆಗಳಿಗೆ ಭೇಟಿ ನೀಡುತ್ತಾರೆ. ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ ಸಕ್ರಿಯವಾಗಿರುವ ಜಾಬ್ಕಾರ್ಡ್ಗಳಿಗೆ ಇ-ಕೆವೈಸಿ ಕಾರ್ಯ ಮಾಡುತ್ತಿದ್ದಾರೆ ಎಂದರು.</p>.<p>‘ಇ-ಕೆವೈಸಿ ಮಾಡಿಸಿಕೊಳ್ಳದ ಜಾಬ್ ಕಾರ್ಡ್ಗಳು ಮುಂದಿನ ದಿನಗಳಲ್ಲಿ ಎನ್ಎಂಆರ್ ಸೃಜನೆ ಮಾಡಲು ಸಾಧ್ಯವಾಗುವುದಿಲ್ಲ. ಜತೆಗೆ ನಿಷ್ಟ್ರಿಯವಾಗುವ ಸಾಧ್ಯತೆ ಇರುವ ಕಾರಣ ಅ.31ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ವ್ಯಾಪ್ತಿಯಲ್ಲಿ 27 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ 26 ಸಾವಿರಕ್ಕೂ ಹೆಚ್ಚು ಜಾಬ್ಕಾರ್ಡ್ಗಳ ಇ- ಕೆವೈಸಿ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಪಿಡಿಒ ಹಾಗೂ ಟಿಆರ್ಎಂ ಮಂಜನಾಥ ರಜಪೂತ ಇದ್ದರು. </p>.<div><blockquote>ಉದ್ಯೋಗ ಖಾತ್ರಿ ಯೋಜನೆಯ ನೋಂದಾಯಿತ ಕೂಲಿಕಾರರು ಅ.31ರೊಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. </blockquote><span class="attribution">-ಕುಮಾರ ಪೂಜಾರ ಸಹಾಯಕ ನಿರ್ದೇಶಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: ‘</strong>ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ನೋಂದಾಯಿತ ಜಾಬ್ಕಾರ್ಡ್ ಪಡೆದ ಕುಟುಂಬಸ್ಥರ ಇ- ಕೆವೈಸಿ ಮಾಡಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ. ಗ್ರಾಮದ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಗದಗ ತಾಲ್ಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಕುಮಾರ ಪೂಜಾರ ತಿಳಿಸಿದರು.</p>.<p>ತಾಲ್ಲೂಕಿನ ಅಸುಂಡಿ ಗ್ರಾಮ ಪಂಚಾಯಿತಿಗೆ ಮಂಗಳವಾರ ಭೇಟಿ ನೀಡಿ ಉದ್ಯೋಗ ಖಾತ್ರಿ ಜಾಬ್ಕಾರ್ಡ್ ಇ- ಕೆವೈಸಿ ಪ್ರಗತಿ ಪರಿಶೀಲಿಸಿ ಮಾತನಾಡಿದರು.</p>.<p>ಅ.31ರ ಒಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮುಖಚಹರೆ ದೃಢೀಕರಣ ಮಾಡಲು ಮನೆಗಳಿಗೆ ಭೇಟಿ ನೀಡುತ್ತಾರೆ. ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ ಸಕ್ರಿಯವಾಗಿರುವ ಜಾಬ್ಕಾರ್ಡ್ಗಳಿಗೆ ಇ-ಕೆವೈಸಿ ಕಾರ್ಯ ಮಾಡುತ್ತಿದ್ದಾರೆ ಎಂದರು.</p>.<p>‘ಇ-ಕೆವೈಸಿ ಮಾಡಿಸಿಕೊಳ್ಳದ ಜಾಬ್ ಕಾರ್ಡ್ಗಳು ಮುಂದಿನ ದಿನಗಳಲ್ಲಿ ಎನ್ಎಂಆರ್ ಸೃಜನೆ ಮಾಡಲು ಸಾಧ್ಯವಾಗುವುದಿಲ್ಲ. ಜತೆಗೆ ನಿಷ್ಟ್ರಿಯವಾಗುವ ಸಾಧ್ಯತೆ ಇರುವ ಕಾರಣ ಅ.31ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ವ್ಯಾಪ್ತಿಯಲ್ಲಿ 27 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ 26 ಸಾವಿರಕ್ಕೂ ಹೆಚ್ಚು ಜಾಬ್ಕಾರ್ಡ್ಗಳ ಇ- ಕೆವೈಸಿ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಪಿಡಿಒ ಹಾಗೂ ಟಿಆರ್ಎಂ ಮಂಜನಾಥ ರಜಪೂತ ಇದ್ದರು. </p>.<div><blockquote>ಉದ್ಯೋಗ ಖಾತ್ರಿ ಯೋಜನೆಯ ನೋಂದಾಯಿತ ಕೂಲಿಕಾರರು ಅ.31ರೊಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. </blockquote><span class="attribution">-ಕುಮಾರ ಪೂಜಾರ ಸಹಾಯಕ ನಿರ್ದೇಶಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>