ಬಳಿಕ ಮಾತನಾಡಿದ ಮಾಜಿ ಸೈನಿಕ ರಮೇಶ ಶಂಕರಗೌಡ ಹಟ್ಟಿ, ನಮ್ಮ ಊರಿನ ಮಕ್ಕಳು ಈ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಪಡೆದು, ಉನ್ನತ ಹುದ್ದೆ ಅಲಂಕರಿಸಿ, ಉತ್ತಮ ಪ್ರಜೆಯಾಗಿ ಬಾಳಬೇಕು. ಸಮಾಜ ಮತ್ತು ದೇಶಕ್ಕೆ ಅಮೂಲ್ಯ ಕೊಡುಗೆ ನೀಡುವಂತಾಗಬೇಕು. ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತು ಊಟ ಮಾಡಲು ಅನುಕೂಲವಾಗುವಂತೆ ಭೋಜನಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗಿದ್ದು, ಕಟ್ಟಡ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ನೀಡಲಾಗುವುದು ಎಂದರು.