ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಪೋಸ್ಕೊ ಕಂಪೆನಿ ಕಪ್ಪತ್ತಗುಡ್ಡ ವ್ಯಾಪ್ತಿಯಲ್ಲಿ ನೆಲೆಯೂರಲು ಪ್ರಯತ್ನಿಸಿತ್ತು. ಆದರೆ, ಅಂದು ಲಿಂಗೈಕ್ಯ ತೋಂಟದ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟವು ಈ ಕಂಪೆನಿಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೆ ಯಡಿಯೂರಪ್ಪ ಅವರ ಅವಧಿಯಲ್ಲೇ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಗುಮಾನಿ ಎದ್ದಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು’ ಎಂದು ಸ್ವಾಮೀಜಿ ಆಗ್ರಹಿಸಿದರು.