<p><strong>ಗದಗ:</strong> ‘ಕಮೀಷನ್ ಆಸೆಗಾಗಿ ಸರ್ಕಾರವು ಕಪ್ಪತಗುಡ್ಡದಲ್ಲಿ ಮತ್ತೆ ಗಣಿಗಾರಿಕೆಗೆ ಅವಕಾಶ ಕೊಡಬಾರದು. ಅವಕಾಶ ನೀಡಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಖಡಕ್ ಎಚ್ಚರಿಕೆ ನೀಡಿದರು.</p>.<p>ಶನಿವಾರ ಇಲ್ಲಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್ ಹಿರೇಮಠ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು,‘ಲಾಕ್ಡೌನ್ನಿಂದ ಸರ್ಕಾರದ ಬೊಕ್ಕಸಕ್ಕೆ ಹಣದ ಕೊರತೆಯಾಗಿದೆಯೆಂದು ಅರಣ್ಯ ಮತ್ತು ಖನಿಜ ಸಂಪತ್ತು ಕೊಳ್ಳೆಹೊಡೆಯಲು ಅವಕಾಶ ನೀಡಬಾರದು’ ಎಂದರು.</p>.<p>‘ಸರ್ಕಾರ ಈಗಾಗಲೇ ಬೊಕ್ಕಸ ತುಂಬಿಕೊಳ್ಳಲು ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಈಗ ಗಣಿಗಾರಿಕೆ ಮೂಲಕವೂ ಬೊಕ್ಕಸ ಭರ್ತಿ ಮಾಡುವ ಚಿಂತನೆಯಿದ್ದರೆ, ತಕ್ಷಣ ಅದರಿಂದ ಹಿಂದೆ ಸರಿಯಬೇಕು’ ಎಂದು ಸ್ವಾಮೀಜಿ ಹೇಳಿದರು.</p>.<p>ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಪೋಸ್ಕೊ ಕಂಪೆನಿ ಕಪ್ಪತ್ತಗುಡ್ಡ ವ್ಯಾಪ್ತಿಯಲ್ಲಿ ನೆಲೆಯೂರಲು ಪ್ರಯತ್ನಿಸಿತ್ತು. ಆದರೆ, ಅಂದು ಲಿಂಗೈಕ್ಯ ತೋಂಟದ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟವು ಈ ಕಂಪೆನಿಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೆ ಯಡಿಯೂರಪ್ಪ ಅವರ ಅವಧಿಯಲ್ಲೇ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಗುಮಾನಿ ಎದ್ದಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು’ ಎಂದು ಸ್ವಾಮೀಜಿ ಆಗ್ರಹಿಸಿದರು.</p>.<p>‘ಯಾವುದೇ ಕಾರಣಕ್ಕೂ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಬಿಡುವುದಿಲ್ಲ’ ಎಂದು ಎಸ್.ಆರ್ ಹಿರೇಮಠ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಕಮೀಷನ್ ಆಸೆಗಾಗಿ ಸರ್ಕಾರವು ಕಪ್ಪತಗುಡ್ಡದಲ್ಲಿ ಮತ್ತೆ ಗಣಿಗಾರಿಕೆಗೆ ಅವಕಾಶ ಕೊಡಬಾರದು. ಅವಕಾಶ ನೀಡಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಖಡಕ್ ಎಚ್ಚರಿಕೆ ನೀಡಿದರು.</p>.<p>ಶನಿವಾರ ಇಲ್ಲಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್ ಹಿರೇಮಠ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು,‘ಲಾಕ್ಡೌನ್ನಿಂದ ಸರ್ಕಾರದ ಬೊಕ್ಕಸಕ್ಕೆ ಹಣದ ಕೊರತೆಯಾಗಿದೆಯೆಂದು ಅರಣ್ಯ ಮತ್ತು ಖನಿಜ ಸಂಪತ್ತು ಕೊಳ್ಳೆಹೊಡೆಯಲು ಅವಕಾಶ ನೀಡಬಾರದು’ ಎಂದರು.</p>.<p>‘ಸರ್ಕಾರ ಈಗಾಗಲೇ ಬೊಕ್ಕಸ ತುಂಬಿಕೊಳ್ಳಲು ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಈಗ ಗಣಿಗಾರಿಕೆ ಮೂಲಕವೂ ಬೊಕ್ಕಸ ಭರ್ತಿ ಮಾಡುವ ಚಿಂತನೆಯಿದ್ದರೆ, ತಕ್ಷಣ ಅದರಿಂದ ಹಿಂದೆ ಸರಿಯಬೇಕು’ ಎಂದು ಸ್ವಾಮೀಜಿ ಹೇಳಿದರು.</p>.<p>ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಪೋಸ್ಕೊ ಕಂಪೆನಿ ಕಪ್ಪತ್ತಗುಡ್ಡ ವ್ಯಾಪ್ತಿಯಲ್ಲಿ ನೆಲೆಯೂರಲು ಪ್ರಯತ್ನಿಸಿತ್ತು. ಆದರೆ, ಅಂದು ಲಿಂಗೈಕ್ಯ ತೋಂಟದ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟವು ಈ ಕಂಪೆನಿಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೆ ಯಡಿಯೂರಪ್ಪ ಅವರ ಅವಧಿಯಲ್ಲೇ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಗುಮಾನಿ ಎದ್ದಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು’ ಎಂದು ಸ್ವಾಮೀಜಿ ಆಗ್ರಹಿಸಿದರು.</p>.<p>‘ಯಾವುದೇ ಕಾರಣಕ್ಕೂ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಬಿಡುವುದಿಲ್ಲ’ ಎಂದು ಎಸ್.ಆರ್ ಹಿರೇಮಠ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>