<p><strong>ಗದಗ: </strong>‘ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದರು.</p>.<p>ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೀರು ಸರಬರಾಜು ಮತ್ತು ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಂತರ ಮಾಧ್ಯಮದವರ ಜತೆಗೆ ಮಾತನಾಡಿದರು.</p>.<p>‘ಸರ್ಕಾರದಿಂದ ಅನುಮೋದನೆ ಸಿಕ್ಕಿ, ಹಣ ಬಿಡುಗಡೆಯಾಗಿದ್ದರೂ ಕೂಡ ಸಾಕಷ್ಟು ಕಾಮಗಾರಿಗಳು ಪೂರ್ಣಗೊಂಡಿಲ್ಲ. ಈ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನೂ ನವೆಂಬರ್ ವೇಳೆಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.</p>.<p>‘ಎಲ್ಲ ಪಟ್ಟಣಗಳಿಗೆ 24X7 ಕುಡಿಯುವ ನೀರು ಒದಗಿಸುವ ಯೋಜನೆಗೆ ಅಗತ್ಯವಿರುವ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಿದ್ದು, ಇದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.</p>.<p>‘ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುವ ನೂತನ ಬಡಾವಣೆಗಳಲ್ಲಿ ಶೇ 5ರಷ್ಟು ನಿವೇಶನಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ಮೀಸಲಿಡಲು ನಿರ್ಧರಿಸಲಾಗಿದೆ. ಈ ಕುರಿತು ಸುತ್ತೋಲೆಯನ್ನು ಶೀಘ್ರವೇ ಹೊರಡಿಸಲಾಗುವುದು’ ಎಂದು ಹೇಳಿದರು.</p>.<p>‘ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಯುಜಿಡಿ ಯೋಜನೆ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಿ, ಕೈಗೊಳ್ಳಬೇಕಾದಂತಹ ಯುಜಿಡಿ ಕಾಮಗಾರಿಗಳ ಸೂಕ್ತ ಪ್ರಸ್ತಾವಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕಳಕಪ್ಪ ಬಂಡಿ, ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಇದ್ದರು.</p>.<p><strong>ಗೌರವ ಘಟಕ: ನಿರ್ವಹಣೆ ಅಚ್ಚುಕಟ್ಟಾಗಿರಲಿ</strong></p>.<p>‘ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಿರುವ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಗೌರವ ಘಟಕಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ’ ಎಂದು ಸಚಿವ ಬಿ.ಎ.ಬಸವರಾಜ ಹೇಳಿದರು.</p>.<p>‘ಸೂಕ್ತ ನಿರ್ವಹಣೆ ಜತೆಗೆ ವೈಯಕ್ತಿಕ ಶುಚಿತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಘಟಕದ ಸದುಪಯೋಗವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದರು.</p>.<p>ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೀರು ಸರಬರಾಜು ಮತ್ತು ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಂತರ ಮಾಧ್ಯಮದವರ ಜತೆಗೆ ಮಾತನಾಡಿದರು.</p>.<p>‘ಸರ್ಕಾರದಿಂದ ಅನುಮೋದನೆ ಸಿಕ್ಕಿ, ಹಣ ಬಿಡುಗಡೆಯಾಗಿದ್ದರೂ ಕೂಡ ಸಾಕಷ್ಟು ಕಾಮಗಾರಿಗಳು ಪೂರ್ಣಗೊಂಡಿಲ್ಲ. ಈ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನೂ ನವೆಂಬರ್ ವೇಳೆಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.</p>.<p>‘ಎಲ್ಲ ಪಟ್ಟಣಗಳಿಗೆ 24X7 ಕುಡಿಯುವ ನೀರು ಒದಗಿಸುವ ಯೋಜನೆಗೆ ಅಗತ್ಯವಿರುವ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಿದ್ದು, ಇದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.</p>.<p>‘ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುವ ನೂತನ ಬಡಾವಣೆಗಳಲ್ಲಿ ಶೇ 5ರಷ್ಟು ನಿವೇಶನಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ಮೀಸಲಿಡಲು ನಿರ್ಧರಿಸಲಾಗಿದೆ. ಈ ಕುರಿತು ಸುತ್ತೋಲೆಯನ್ನು ಶೀಘ್ರವೇ ಹೊರಡಿಸಲಾಗುವುದು’ ಎಂದು ಹೇಳಿದರು.</p>.<p>‘ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಯುಜಿಡಿ ಯೋಜನೆ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಿ, ಕೈಗೊಳ್ಳಬೇಕಾದಂತಹ ಯುಜಿಡಿ ಕಾಮಗಾರಿಗಳ ಸೂಕ್ತ ಪ್ರಸ್ತಾವಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕಳಕಪ್ಪ ಬಂಡಿ, ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಇದ್ದರು.</p>.<p><strong>ಗೌರವ ಘಟಕ: ನಿರ್ವಹಣೆ ಅಚ್ಚುಕಟ್ಟಾಗಿರಲಿ</strong></p>.<p>‘ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಿರುವ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಗೌರವ ಘಟಕಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ’ ಎಂದು ಸಚಿವ ಬಿ.ಎ.ಬಸವರಾಜ ಹೇಳಿದರು.</p>.<p>‘ಸೂಕ್ತ ನಿರ್ವಹಣೆ ಜತೆಗೆ ವೈಯಕ್ತಿಕ ಶುಚಿತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಘಟಕದ ಸದುಪಯೋಗವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>