‘ಉಪ ಚುನಾವಣೆ ಜತೆಗೆ ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆ ಸಂಬಂಧವಾಗಿ ಗದಗ, ಹಾವೇರಿ, ಕಾರವಾರ ಮತ್ತು ಧಾರವಾಡ ಜಿಲ್ಲೆಗಳ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಗದಗ ಜಿಲ್ಲೆಯಲ್ಲಿ ಶನಿವಾರ ನಡೆದ ನಾಲ್ಕೈದು ಸಭೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ಇರುವುದರಿಂದ ಸಭೆಗಳಿಗೆ ಮತದಾರರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನ ಇತ್ತು. ಆದರೆ, ನಾನು ಭಾಗವಹಿಸಿದ ಎಲ್ಲ ಸಭೆಗಳಿಗೂ ನೂರರಿಂದ ಇನ್ನೂರು ಮತದಾರರು ಬಂದಿದ್ದಾರೆ. ಇದನ್ನು ನೋಡಿದಾಗ ಬಿಜೆಪಿ ಪರವಾದ ಅಲೆ ಇದೆ ಎಂಬುದು ತಿಳಿಯತ್ತದೆ’ ಎಂದು ಅವರು ಹೇಳಿದರು.