ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆ ಪ್ರಕರಣ ಹಿಂಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಕಾನೂನು ಸಚಿವ ಎಚ್.ಕೆ.ಪಾಟೀಲ ಈ ಬಗ್ಗೆ ಸವಿಸ್ತಾರವಾಗಿ ಹೇಳಿದ್ದಾರೆ. ಆದರೂ, ಡಿ.ಕೆ.ಶಿವಕುಮಾರ್ ಅವರನ್ನು ‘ಸೇಫ್’ ಮಾಡಿದ್ದು ಅಂತ ಏಕೆ ಹೇಳ್ತೀರಾ? ಕಾನೂನಿನಲ್ಲಿ ಮಾಡಬಾರದು ಅಂತ ನಿಯಮ ಇದೆಯೇ? ವಿರೋಧ ಪಕ್ಷದವರಿಗೆ ಮಾಡಲು ಕೆಲಸ ಇಲ್ಲ. ಈ ಬಗ್ಗೆ ಹೆಚ್ಚು ಚರ್ಚೆ ಅನಗತ್ಯ’ ಎಂದರು.