ಸಾನ್ನಿಧ್ಯ ವಹಿಸಿದ್ದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸರ್ಕಾರ ಕೇಳಿದ್ದ ಆರು ತಿಂಗಳ ಗಡುವು ಸೆ.15ಕ್ಕೆ ಪೂರ್ಣಗೊಂಡಿದ್ದು, ಅಕ್ಟೋಬರ್ 1ರಿಂದ ಮತ್ತೆ ಸತ್ಯಾಗ್ರಹ ನಡೆಸಲು ಚಿಂತಿಸಲಾಗಿದೆ. ಆದರೆ, ಸತ್ಯಾಗ್ರಹ ಮಾಡಬಾರದು ಎಂದು ಸರ್ಕಾರದ ಭಾಗವಾಗಿರುವ ಸಮಾಜದ ಮುಖಂಡ ಸಿ.ಸಿ.ಪಾಟೀಲ ಮನವಿ ಮಾಡಿಕೊಂಡಿದ್ದರಿಂದ ಈ ಕುರಿತು ಹಿರಿಯರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಹೇಳಿದರು.