ರೈತರಿಗೆ ಉಚಿತವಾಗಿ ನೀರು ಹಾಗೂ ವಿದ್ಯುತ್ ದೊರೆಯುತ್ತದೆ. ಜೊತೆಗೆ ಸರ್ಕಾರದಿಂದ ಬೀಜ, ಗೊಬ್ಬರ ಹಾಗೂ ಮತ್ತಿತರ ಕೃಷಿ ಸಾಮಗ್ರಿಗಳು ರಿಯಾಯಿತಿ ದರದಲ್ಲಿ ದೊರೆಯುತ್ತವೆ. ಇಷ್ಟೆಲ್ಲ ಇದ್ದಾಗಲೂ ರೈತರು ಬರಗಾಲ ಬರಲಿ ಎಂದು ಆಶಿಸುತ್ತಿದ್ದಾರೆ ಎಂದು ಪಾಟೀಲರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಯನ್ನು ರೈತರೊಬ್ಬರೆ ತಿನ್ನುವುದಿಲ್ಲ. ಅದನ್ನು ದೇಶದ ಜನತೆಗೆ ನೀಡುತ್ತಾರೆ ಎನ್ನುವ ಸಾಮಾನ್ಯ ಜ್ಞಾನವಾದರೂ ಸಚಿವರಿಗೆ ಇರಬೇಕಿತ್ತು ಎಂದು ಸಚಿವರ ವಿರುದ್ಧ ಹರಿಹಾಯ್ದರು.