<p><strong>ಲಕ್ಕುಂಡಿ:</strong> ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆಯ ನಿಯಮದಂತೆ ರಾಜ್ಯ ಸರ್ಕಾರ ಶೇ 40 ಪಾಲನ್ನು ಭರಿಸಬೇಕಿದೆ. ಆದರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿವಾಗಿರುವ ಕಾರಣಕ್ಕೆ ಈ ಯೋಜನೆಯನ್ನು ವಿರೋಧಿಸುತ್ತಿದೆ’ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು.</p>.<p>ಇಲ್ಲಿಯ ವಿರುಪಾಕ್ಷೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಲಕ್ಕುಂಡಿ ಬಿಜೆಪಿ ಮಂಡಲದ ವತಿಯಿಂದ ನಡೆದ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕೇಂದ್ರ ಸರ್ಕಾರದ ಈ ಕಾಯಿದೆಯನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂಬುದು ಗೊತ್ತಿದ್ದರೂ ವಿನಾಕಾರಣ ವಿರೋಧಿಸುತ್ತಿರುವುದು ಅವರ ಹತಾಶೆ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಈ ಯೋಜನೆಗೆ 20 ಸಲ ಹೆಸರು ಬದಲಾವಣೆ ಮಾಡಿದ್ದನ್ನು ಜನರು ಇನ್ನೂ ಮರೆತಿಲ್ಲ’ ಎಂದರು.</p>.<p>‘ಈ ಕಾಯ್ದೆಯಲ್ಲಿ ಕಾರ್ಮಿಕರಿಗೆ ಹೆಚ್ಚು ಕೂಲಿ ಜತೆ ನಿಗದಿತ ಸಮಯಕ್ಕೆ ಕೂಲಿ ಮೊತ್ತ ಖಾತೆಗೆ ಜಮೆಯಾಗುತ್ತದೆ. 9 ದಿನಗಳ ಒಳಗಾಗಿ ಜಮೆಯಾಗದಿದ್ದರೆ ಬಡ್ಡಿ ಹಾಕಿ ಕೊಡಲಾಗುತ್ತಿದೆ. ಕೇಂದ್ರ ಸರ್ಕಾರವು ಈ ಯೋಜನೆಗೆ ₹90 ಸಾವಿರ ಕೋಟಿಗೆ ಅನುದಾನ ನೀಡಲಿದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರ ಸರ್ಕಾರ ₹8 ಲಕ್ಷ ಕೋಟಿ ಸಾಲದಲ್ಲಿದೆ. ಗ್ಯಾರಂಟಿ ಯೋಜನೆಗೆ ಹಣ ಕ್ರೋಡೀಕರಣಗೊಳಿಸಲು ಸಾಧ್ಯವಾಗದೇ, ಕೇಂದ್ರದ ಇಂತಹ ಜನಪರ ಯೋಜನೆಗಳ ಬಗ್ಗೆ ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ. ಹಾಗಾಗಿ, ಬಿಜೆಪಿ ಕಾರ್ಯಕರ್ತರು ಜನರ ಮನೆ ಮನೆಗೆ ತೆರಳಿ ಈ ಯೋಜನೆ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡ ವಸಂತ ಮೇಟಿ ಮಾತನಾಡಿ, ‘ಬಿಜೆಪಿ ಸಾಧನೆಯನ್ನು ಸಹಿಸಲಾರದೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಾತ್ಮ ಗಾಂಧಿ ಹೆಸರಿನ ಮೇಲೆ ರಾಜಕಾರಣ ಮಾಡುತ್ತಿದೆ’ ಎಂದು ದೂರಿದರು.</p>.<p>ಬಿಜೆಪಿ ಮುಖಂಡ ದತ್ತಣ್ಣ ಜೋಶಿ ಮಾತನಾಡಿ, ‘ವಿಬಿ ಜಿ ರಾಮ್ ಜಿ ಕಾಯ್ದೆಯು ಕಾರ್ಮಿಕರಿಗೆ 125 ದಿನಗಳ ಕೆಲಸ ಒದಗಿಸಲಿದೆ. ಗ್ರಾಮೀಣ ಜನರ ಉಪ ಜೀವನಕ್ಕೆ ಆರ್ಥಿಕವಾಗಿ ಸಹಾಯವಾಗಲಿದೆ’ ಎಂದರು.</p>.<p>ಲಕ್ಕುಂಡಿ ಬಿಜೆಪಿ ಮಂಡಲದ ಅಧ್ಯಕ್ಷ ಪ್ರಕಾಶ ಅರಹುಣಶಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶರಣಪ್ಪ ಕುದರಿ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಬಿ.ಕಲಕೇರಿ, ಬಿಜೆಪಿ ಯುವನಾಯಕ ಉಮೇಶಗೌಡ ಪಾಟೀಲ, ಪ್ರದೀಪ ನವಲಗುಂದ, ಅಶೋಕ ಬೂದಿಹಾಳ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಫಕ್ಕೀರಮ್ಮ ಬೇಲೇರಿ ವೇದಿಕೆಯಲ್ಲಿದ್ದರು.</p>.<p>ಪ್ರಲ್ಹಾದ ಹೊಸಳ್ಳಿ ನಿರೂಪಿಸಿದರು. ಮರಿಯಪ್ಪ ವಡ್ಡರ ವಂದಿಸಿದರು. ಅತ್ತಿಮಬ್ಬೆ ಮಹಾದ್ವಾರದಿಂದ ವಿರುಪಾಕ್ಷೇಶ್ವರ ದೇವಸ್ಥಾನವರೆಗೂ ಪಾದಯಾತ್ರೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಕುಂಡಿ:</strong> ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆಯ ನಿಯಮದಂತೆ ರಾಜ್ಯ ಸರ್ಕಾರ ಶೇ 40 ಪಾಲನ್ನು ಭರಿಸಬೇಕಿದೆ. ಆದರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿವಾಗಿರುವ ಕಾರಣಕ್ಕೆ ಈ ಯೋಜನೆಯನ್ನು ವಿರೋಧಿಸುತ್ತಿದೆ’ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು.</p>.<p>ಇಲ್ಲಿಯ ವಿರುಪಾಕ್ಷೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಲಕ್ಕುಂಡಿ ಬಿಜೆಪಿ ಮಂಡಲದ ವತಿಯಿಂದ ನಡೆದ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕೇಂದ್ರ ಸರ್ಕಾರದ ಈ ಕಾಯಿದೆಯನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂಬುದು ಗೊತ್ತಿದ್ದರೂ ವಿನಾಕಾರಣ ವಿರೋಧಿಸುತ್ತಿರುವುದು ಅವರ ಹತಾಶೆ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಈ ಯೋಜನೆಗೆ 20 ಸಲ ಹೆಸರು ಬದಲಾವಣೆ ಮಾಡಿದ್ದನ್ನು ಜನರು ಇನ್ನೂ ಮರೆತಿಲ್ಲ’ ಎಂದರು.</p>.<p>‘ಈ ಕಾಯ್ದೆಯಲ್ಲಿ ಕಾರ್ಮಿಕರಿಗೆ ಹೆಚ್ಚು ಕೂಲಿ ಜತೆ ನಿಗದಿತ ಸಮಯಕ್ಕೆ ಕೂಲಿ ಮೊತ್ತ ಖಾತೆಗೆ ಜಮೆಯಾಗುತ್ತದೆ. 9 ದಿನಗಳ ಒಳಗಾಗಿ ಜಮೆಯಾಗದಿದ್ದರೆ ಬಡ್ಡಿ ಹಾಕಿ ಕೊಡಲಾಗುತ್ತಿದೆ. ಕೇಂದ್ರ ಸರ್ಕಾರವು ಈ ಯೋಜನೆಗೆ ₹90 ಸಾವಿರ ಕೋಟಿಗೆ ಅನುದಾನ ನೀಡಲಿದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರ ಸರ್ಕಾರ ₹8 ಲಕ್ಷ ಕೋಟಿ ಸಾಲದಲ್ಲಿದೆ. ಗ್ಯಾರಂಟಿ ಯೋಜನೆಗೆ ಹಣ ಕ್ರೋಡೀಕರಣಗೊಳಿಸಲು ಸಾಧ್ಯವಾಗದೇ, ಕೇಂದ್ರದ ಇಂತಹ ಜನಪರ ಯೋಜನೆಗಳ ಬಗ್ಗೆ ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ. ಹಾಗಾಗಿ, ಬಿಜೆಪಿ ಕಾರ್ಯಕರ್ತರು ಜನರ ಮನೆ ಮನೆಗೆ ತೆರಳಿ ಈ ಯೋಜನೆ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡ ವಸಂತ ಮೇಟಿ ಮಾತನಾಡಿ, ‘ಬಿಜೆಪಿ ಸಾಧನೆಯನ್ನು ಸಹಿಸಲಾರದೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಾತ್ಮ ಗಾಂಧಿ ಹೆಸರಿನ ಮೇಲೆ ರಾಜಕಾರಣ ಮಾಡುತ್ತಿದೆ’ ಎಂದು ದೂರಿದರು.</p>.<p>ಬಿಜೆಪಿ ಮುಖಂಡ ದತ್ತಣ್ಣ ಜೋಶಿ ಮಾತನಾಡಿ, ‘ವಿಬಿ ಜಿ ರಾಮ್ ಜಿ ಕಾಯ್ದೆಯು ಕಾರ್ಮಿಕರಿಗೆ 125 ದಿನಗಳ ಕೆಲಸ ಒದಗಿಸಲಿದೆ. ಗ್ರಾಮೀಣ ಜನರ ಉಪ ಜೀವನಕ್ಕೆ ಆರ್ಥಿಕವಾಗಿ ಸಹಾಯವಾಗಲಿದೆ’ ಎಂದರು.</p>.<p>ಲಕ್ಕುಂಡಿ ಬಿಜೆಪಿ ಮಂಡಲದ ಅಧ್ಯಕ್ಷ ಪ್ರಕಾಶ ಅರಹುಣಶಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶರಣಪ್ಪ ಕುದರಿ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಬಿ.ಕಲಕೇರಿ, ಬಿಜೆಪಿ ಯುವನಾಯಕ ಉಮೇಶಗೌಡ ಪಾಟೀಲ, ಪ್ರದೀಪ ನವಲಗುಂದ, ಅಶೋಕ ಬೂದಿಹಾಳ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಫಕ್ಕೀರಮ್ಮ ಬೇಲೇರಿ ವೇದಿಕೆಯಲ್ಲಿದ್ದರು.</p>.<p>ಪ್ರಲ್ಹಾದ ಹೊಸಳ್ಳಿ ನಿರೂಪಿಸಿದರು. ಮರಿಯಪ್ಪ ವಡ್ಡರ ವಂದಿಸಿದರು. ಅತ್ತಿಮಬ್ಬೆ ಮಹಾದ್ವಾರದಿಂದ ವಿರುಪಾಕ್ಷೇಶ್ವರ ದೇವಸ್ಥಾನವರೆಗೂ ಪಾದಯಾತ್ರೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>