<p><strong>ನರಗುಂದ</strong>: ಮಧ್ಯವರ್ತಿಗಳ ಹಾವಳಿ ತಡೆಗಟ್ಟಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಮಾಡುವ ಗುರಿ ವಿಕಸಿತ ಭಾರತ ಯೋಜನೆಯದಾಗಿದೆ. ಈ ಯೋಜನೆಗೆ 2013 ರಲ್ಲಿ 33 ಸಾವಿರ ಕೋಟಿ ಅನುದಾನ ಇತ್ತು. 2025ರ ಹೊತ್ತಿಗೆ ₹ 2.86 ಲಕ್ಷ ಕೊಟಿ ಅನುದಾನವಿಟ್ಟು ವಿಕಸಿತ ಗ್ರಾಮದಿಂದ ವಿಕಸಿತ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯಾಜನೆಯಾಗಿದೆ ಎಂದು ಶಾಸಕ ಸಿ ಸಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಶಿರೋಳ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ಭಾರತೀಯ ಜನತಾ ಪಕ್ಷದ ನರಗುಂದ ಮಂಡಲದಿಂದ ಆಶ್ರಯದಲ್ಲಿ ಶುಕ್ರವಾರ ಸಂಜೆ ನಡೆದ ವಿಕಸಿತ ಭಾರತ ವ್ಹಿಬಿ ರಾಮ್ ಜಿ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.</p>.<p>ಇದರಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲದಂತಾಗಿದೆ. ಈಗಾಗಲೇ ಕಾನೂನಾಗಿ ರೂಪುಗೊಂಡಿದೆ. ಇದನ್ನು ಬೆಂಬಲಿಸಿ ಮತಕ್ಷೇತ್ರದಾಧ್ಯಂತ ಸಭೆ ಮಾಡುತ್ತೇವೆ ಎಂದರು. ಲೋಕಸಭೆಯಲ್ಲಿ ವ್ಹಿಬಿ ಜಿ ರಾಮ್ ಜಿ ಯೋಜನೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು, ಕಾನೂನು ಆಗಿ ರೂಪುಗೊಂಡಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಈ ಯೋಜನೆ ವಿರೋಧ ಮಾಡುತ್ತಿದೆ ಎಂದರು.</p>.<p>ವಿಬಿ ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಗೆ ಬಲ ನೀಡುವ ಮಹತ್ವದ ಹೆಜ್ಜೆಯಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಡಿಜಿಟಲ್ ಸೌಲಭ್ಯಗಳ ಮೂಲಕ ಗ್ರಾಮಗಳನ್ನು ಸ್ವಾವಲಂಬಿ ಮತ್ತು ಸಶಕ್ತವಾಗಿಸುವುದು ಇದರ ಮುಖ್ಯ ಉದ್ದೇಶ. ಈ ಗ್ರಾಮೀಣ-ನಗರ ಅಂತರವನ್ನು ಕಡಿಮೆ ಮಾಡಿ, ಸಮೃದ್ಧ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಶಾಸಕ ಪಾಟೀಲ ಹೇಳಿದರು.<br /> ನರಗುಂದ ಬಿಜೆಪಿ ಮಂಡಲ ಅಧ್ಯಕ್ಷ ನಾಗನಗೌಡ ತಿಮ್ಮನಗೌಡ್ರ ಮಾತನಾಡಿ, ಮಹಾತ್ಮಾ ಗಾಂಧಿಜಿ ಆತ್ಮದಲ್ಲಿನ ರಾಮನ ಹೆಸರನ್ನು ವ್ಜಿಬಿ ಜಿ ರಾಮ್ ಜಿ ಯೋಜನೆಗೆ ಇಡಲಾಗಿದೆ. ವಿಕಸಿತ ಭಾರತದ ನಿರ್ಮಾಣವೇ ಈ ಯೋಜನೆಯ ಮುಖ್ಯ ಗುರಿ ಆಗಿದೆ ಎಂದು ಹೇಳಿದರು.</p>.<p>ಚಂದ್ರು ದಂಡಿನ, ಪ್ರಕಾಶಗೌಡ ತಿರಕನಗೌಡ್ರ ಮಾತನಾಡಿದರು. ಸಭೆಯಲ್ಲಿ ನಿಂಗಣ್ಣ ಗಾಡಿ, ಅಜ್ಜಪ್ಪ ಹುಡೇದ, ನಿಂಗಣ್ಣ ಗಾಡಿ, ಶೇಖರಗೌಡ ಸಾಲಿಗೌಡ್ರ, ಪ್ರಕಾಶಗೌಡ ತಿರಕನಗೌಡ್ರ, ಉಮೇಶಗೌಡ ಪಾಟೀಲ, ಚಂದ್ರು ದಂಡಿನ, ನಿಂಗಪ್ಪ ಸೋಮಾಪೂರ, ಭೀಮಪ್ಪ ಹಾದಿಮನಿ, ತಮ್ಮಣ್ಣ ಮದುಗುಣಿಕಿ, ಹನುಮವ್ವ ಹಿರೇಮನಿ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ</strong>: ಮಧ್ಯವರ್ತಿಗಳ ಹಾವಳಿ ತಡೆಗಟ್ಟಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಮಾಡುವ ಗುರಿ ವಿಕಸಿತ ಭಾರತ ಯೋಜನೆಯದಾಗಿದೆ. ಈ ಯೋಜನೆಗೆ 2013 ರಲ್ಲಿ 33 ಸಾವಿರ ಕೋಟಿ ಅನುದಾನ ಇತ್ತು. 2025ರ ಹೊತ್ತಿಗೆ ₹ 2.86 ಲಕ್ಷ ಕೊಟಿ ಅನುದಾನವಿಟ್ಟು ವಿಕಸಿತ ಗ್ರಾಮದಿಂದ ವಿಕಸಿತ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯಾಜನೆಯಾಗಿದೆ ಎಂದು ಶಾಸಕ ಸಿ ಸಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಶಿರೋಳ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ಭಾರತೀಯ ಜನತಾ ಪಕ್ಷದ ನರಗುಂದ ಮಂಡಲದಿಂದ ಆಶ್ರಯದಲ್ಲಿ ಶುಕ್ರವಾರ ಸಂಜೆ ನಡೆದ ವಿಕಸಿತ ಭಾರತ ವ್ಹಿಬಿ ರಾಮ್ ಜಿ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.</p>.<p>ಇದರಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲದಂತಾಗಿದೆ. ಈಗಾಗಲೇ ಕಾನೂನಾಗಿ ರೂಪುಗೊಂಡಿದೆ. ಇದನ್ನು ಬೆಂಬಲಿಸಿ ಮತಕ್ಷೇತ್ರದಾಧ್ಯಂತ ಸಭೆ ಮಾಡುತ್ತೇವೆ ಎಂದರು. ಲೋಕಸಭೆಯಲ್ಲಿ ವ್ಹಿಬಿ ಜಿ ರಾಮ್ ಜಿ ಯೋಜನೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು, ಕಾನೂನು ಆಗಿ ರೂಪುಗೊಂಡಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಈ ಯೋಜನೆ ವಿರೋಧ ಮಾಡುತ್ತಿದೆ ಎಂದರು.</p>.<p>ವಿಬಿ ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಗೆ ಬಲ ನೀಡುವ ಮಹತ್ವದ ಹೆಜ್ಜೆಯಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಡಿಜಿಟಲ್ ಸೌಲಭ್ಯಗಳ ಮೂಲಕ ಗ್ರಾಮಗಳನ್ನು ಸ್ವಾವಲಂಬಿ ಮತ್ತು ಸಶಕ್ತವಾಗಿಸುವುದು ಇದರ ಮುಖ್ಯ ಉದ್ದೇಶ. ಈ ಗ್ರಾಮೀಣ-ನಗರ ಅಂತರವನ್ನು ಕಡಿಮೆ ಮಾಡಿ, ಸಮೃದ್ಧ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಶಾಸಕ ಪಾಟೀಲ ಹೇಳಿದರು.<br /> ನರಗುಂದ ಬಿಜೆಪಿ ಮಂಡಲ ಅಧ್ಯಕ್ಷ ನಾಗನಗೌಡ ತಿಮ್ಮನಗೌಡ್ರ ಮಾತನಾಡಿ, ಮಹಾತ್ಮಾ ಗಾಂಧಿಜಿ ಆತ್ಮದಲ್ಲಿನ ರಾಮನ ಹೆಸರನ್ನು ವ್ಜಿಬಿ ಜಿ ರಾಮ್ ಜಿ ಯೋಜನೆಗೆ ಇಡಲಾಗಿದೆ. ವಿಕಸಿತ ಭಾರತದ ನಿರ್ಮಾಣವೇ ಈ ಯೋಜನೆಯ ಮುಖ್ಯ ಗುರಿ ಆಗಿದೆ ಎಂದು ಹೇಳಿದರು.</p>.<p>ಚಂದ್ರು ದಂಡಿನ, ಪ್ರಕಾಶಗೌಡ ತಿರಕನಗೌಡ್ರ ಮಾತನಾಡಿದರು. ಸಭೆಯಲ್ಲಿ ನಿಂಗಣ್ಣ ಗಾಡಿ, ಅಜ್ಜಪ್ಪ ಹುಡೇದ, ನಿಂಗಣ್ಣ ಗಾಡಿ, ಶೇಖರಗೌಡ ಸಾಲಿಗೌಡ್ರ, ಪ್ರಕಾಶಗೌಡ ತಿರಕನಗೌಡ್ರ, ಉಮೇಶಗೌಡ ಪಾಟೀಲ, ಚಂದ್ರು ದಂಡಿನ, ನಿಂಗಪ್ಪ ಸೋಮಾಪೂರ, ಭೀಮಪ್ಪ ಹಾದಿಮನಿ, ತಮ್ಮಣ್ಣ ಮದುಗುಣಿಕಿ, ಹನುಮವ್ವ ಹಿರೇಮನಿ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>