<p><strong>ಮುಂಡರಗಿ</strong>: ವಿವಿಧ ಕೃಷಿ ಸೌಲಭ್ಯಗಳ ವಿತರಣೆಯಲ್ಲಿ ಇಲ್ಲಿಯ ಕೃಷಿ ಅಧಿಕಾರಿಗಳು ತಾರತಮ್ಯ ಎಸಗುತ್ತಿದ್ದಾರೆ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರು ಶುಕ್ರವಾರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.</p>.<p>ಶಿರಹಟ್ಟಿ ಮತಕ್ಷೇತ್ರವು ರೋಣ ಹಾಗೂ ಮುಂಡರಗಿ ತಾಲ್ಲೂಕುಗಳಿಗೆ ಹಂಚಿ ಹೋಗಿದ್ದು, ಕೃಷಿ ಅಧಿಕಾರಿಗಳು ಮುಂಡರಗಿ ತಾಲ್ಲೂಕನ್ನು ಅಲಕ್ಷಿಸುತ್ತಿದ್ದಾರೆ. ಇದರಿಂದ ತಾಲ್ಲೂಕಿನ ಬಡ ಕೃಷಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಡ ರೈತರ ಮೇಲಾಗುವ ಅನ್ಯಾಯವನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ರೈತರಿಗೆ ವಿತರಿಸಲು ಒಟ್ಟು 42 ಹಸುಗಳು ಮಂಜೂರಾಗಿದ್ದವು. ಅವೆಲ್ಲವುಗಳನ್ನು ಕೇವಲ ರೋಣ ಮತಕ್ಷೇತ್ರಕ್ಕೆ ವಿತರಿಸಲಾಗಿದ್ದು, ಈ ಭಾಗದ ರೈತರಿಗೆ ಒಂದೂ ಹಸವುವನ್ನು ವಿತರಿಸಿಲ್ಲ. ಕಳೆದ ಎರಡು ವರ್ಷಗಳಿಂದ ಈ ಭಾಗರ ರೈತರಿಗೆ ಹಸುಗಳನ್ನು ವಿತರಿಸದೆ ಇರುವುದರಿಂದ ಇಲ್ಲಿಯ ರೈತರಿಗೆ ಅನ್ಯಾಯವಾಗಿದ್ದು, ಅದಕ್ಕೆ ಅಧಿಕಾರಿಗಳ ಮಲತಾಯಿ ಧೋರಣೆಯೇ ಕಾರಣವಾಗಿದೆ. ಇಂತಹ ತಾರತಮ್ಯವನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿದರು.</p>.<p>ಕೃಷಿಹೊಂಡ ನಿರ್ಮಾಣದಲ್ಲಿಯೂ ಈ ಭಾಗದ ರೈತರಿಗೆ ಕೃಷಿ ಅಧಿಕಾರಿಗಳು ಅನ್ಯಾಯ ಎಸಗಿದ್ದು, ಒಟ್ಟು 52 ಕ್ಷೃಷಿ ಹೊಂಡಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿತ್ತು. ಅದರಲ್ಲಿ 26ಕೃಷಿಹೊಂಡಗಳು ಈ ಭಾಗದ ರೈತರಿಗೆ ದೊರೆಯಬೇಕಿತ್ತು. ಆದರೆ ಇಲ್ಲಿಯ ಅಧಿಕಾರಿಗಳು ಅಷ್ಟೂ ಕೃಷಿಹೊಂಡಗಳನ್ನು ರೋಣ ಮತಕ್ಷೇತ್ರಕ್ಕೆ ನೀಡಿದ್ದು, ಇಲ್ಲಿಯ ಕೃಷಿಕರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶಿರಹಟ್ಟಿ ಮತಕ್ಷೇತ್ರವು ಅರೆಮಲೆನಾಡು ಪ್ರದೇಶವಾಗಿದ್ದು, ಕೃಷಿಕರಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದ ಕಳೆದ ಅಧಿವೇಶನದಲ್ಲಿ ಸಾಕಷ್ಟು ಕೃಷಿಹೊಂಡಗಳನ್ನು ಮಂಜೂರು ಮಾಡಿಸಿಕೊಳ್ಳಲಾಗಿತ್ತು. ಆದರೆ ನಮ್ಮ ಕ್ಷೇತ್ರಕ್ಕೆ ಕೃಷಿಹೊಂಡ ವಿತರಿಸದಿರುವುದು ಅಧಿಕಾರಿಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ತಿಳಿಸಿದರು.</p>.<p>ಒಂದು ವಾರದೊಳಗಾಗಿ ಅರ್ಜಿ ಸಲ್ಲಿಸಿದ ಇಲ್ಲಿಯ ಅರ್ಹ ರೈತರಿಗೆ ಹಸುಗಳನ್ನು ವಿತರಿಸಬೇಕು ಹಾಗೂ ಕೃಷಿಹೊಂಡ ನಿರ್ಮಿಸಿಕೊಡಬೇಕು. ಇಲ್ಲದಿದ್ದರೆ ರೈತರು ಕೃಷಿ ಅಧಿಕಾರಿಗಳ ಮನೆಯ ಮುಂದೆ ಧರಣಿ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.</p>.<p>ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಬಸವರಾಜ ಬಿಳಿಮಗ್ಗದ, ರವಿಗೌಡ ಪಾಟೀಲ, ಸುನೀಲರಡ್ಡಿ ನೀರಲಗಿ, ರವಿ ಲಮಾಣಿ, ಪವನ ಮೇಟಿ, ರಾಜಶೇಖರ ರಡ್ಡಿ, ಶಿವಕುಮಾರ ಕುರಿ, ಶಂಕರ ಉಳ್ಳಾಗಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ವಿವಿಧ ಕೃಷಿ ಸೌಲಭ್ಯಗಳ ವಿತರಣೆಯಲ್ಲಿ ಇಲ್ಲಿಯ ಕೃಷಿ ಅಧಿಕಾರಿಗಳು ತಾರತಮ್ಯ ಎಸಗುತ್ತಿದ್ದಾರೆ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರು ಶುಕ್ರವಾರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.</p>.<p>ಶಿರಹಟ್ಟಿ ಮತಕ್ಷೇತ್ರವು ರೋಣ ಹಾಗೂ ಮುಂಡರಗಿ ತಾಲ್ಲೂಕುಗಳಿಗೆ ಹಂಚಿ ಹೋಗಿದ್ದು, ಕೃಷಿ ಅಧಿಕಾರಿಗಳು ಮುಂಡರಗಿ ತಾಲ್ಲೂಕನ್ನು ಅಲಕ್ಷಿಸುತ್ತಿದ್ದಾರೆ. ಇದರಿಂದ ತಾಲ್ಲೂಕಿನ ಬಡ ಕೃಷಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಡ ರೈತರ ಮೇಲಾಗುವ ಅನ್ಯಾಯವನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ರೈತರಿಗೆ ವಿತರಿಸಲು ಒಟ್ಟು 42 ಹಸುಗಳು ಮಂಜೂರಾಗಿದ್ದವು. ಅವೆಲ್ಲವುಗಳನ್ನು ಕೇವಲ ರೋಣ ಮತಕ್ಷೇತ್ರಕ್ಕೆ ವಿತರಿಸಲಾಗಿದ್ದು, ಈ ಭಾಗದ ರೈತರಿಗೆ ಒಂದೂ ಹಸವುವನ್ನು ವಿತರಿಸಿಲ್ಲ. ಕಳೆದ ಎರಡು ವರ್ಷಗಳಿಂದ ಈ ಭಾಗರ ರೈತರಿಗೆ ಹಸುಗಳನ್ನು ವಿತರಿಸದೆ ಇರುವುದರಿಂದ ಇಲ್ಲಿಯ ರೈತರಿಗೆ ಅನ್ಯಾಯವಾಗಿದ್ದು, ಅದಕ್ಕೆ ಅಧಿಕಾರಿಗಳ ಮಲತಾಯಿ ಧೋರಣೆಯೇ ಕಾರಣವಾಗಿದೆ. ಇಂತಹ ತಾರತಮ್ಯವನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿದರು.</p>.<p>ಕೃಷಿಹೊಂಡ ನಿರ್ಮಾಣದಲ್ಲಿಯೂ ಈ ಭಾಗದ ರೈತರಿಗೆ ಕೃಷಿ ಅಧಿಕಾರಿಗಳು ಅನ್ಯಾಯ ಎಸಗಿದ್ದು, ಒಟ್ಟು 52 ಕ್ಷೃಷಿ ಹೊಂಡಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿತ್ತು. ಅದರಲ್ಲಿ 26ಕೃಷಿಹೊಂಡಗಳು ಈ ಭಾಗದ ರೈತರಿಗೆ ದೊರೆಯಬೇಕಿತ್ತು. ಆದರೆ ಇಲ್ಲಿಯ ಅಧಿಕಾರಿಗಳು ಅಷ್ಟೂ ಕೃಷಿಹೊಂಡಗಳನ್ನು ರೋಣ ಮತಕ್ಷೇತ್ರಕ್ಕೆ ನೀಡಿದ್ದು, ಇಲ್ಲಿಯ ಕೃಷಿಕರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶಿರಹಟ್ಟಿ ಮತಕ್ಷೇತ್ರವು ಅರೆಮಲೆನಾಡು ಪ್ರದೇಶವಾಗಿದ್ದು, ಕೃಷಿಕರಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದ ಕಳೆದ ಅಧಿವೇಶನದಲ್ಲಿ ಸಾಕಷ್ಟು ಕೃಷಿಹೊಂಡಗಳನ್ನು ಮಂಜೂರು ಮಾಡಿಸಿಕೊಳ್ಳಲಾಗಿತ್ತು. ಆದರೆ ನಮ್ಮ ಕ್ಷೇತ್ರಕ್ಕೆ ಕೃಷಿಹೊಂಡ ವಿತರಿಸದಿರುವುದು ಅಧಿಕಾರಿಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ತಿಳಿಸಿದರು.</p>.<p>ಒಂದು ವಾರದೊಳಗಾಗಿ ಅರ್ಜಿ ಸಲ್ಲಿಸಿದ ಇಲ್ಲಿಯ ಅರ್ಹ ರೈತರಿಗೆ ಹಸುಗಳನ್ನು ವಿತರಿಸಬೇಕು ಹಾಗೂ ಕೃಷಿಹೊಂಡ ನಿರ್ಮಿಸಿಕೊಡಬೇಕು. ಇಲ್ಲದಿದ್ದರೆ ರೈತರು ಕೃಷಿ ಅಧಿಕಾರಿಗಳ ಮನೆಯ ಮುಂದೆ ಧರಣಿ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.</p>.<p>ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಬಸವರಾಜ ಬಿಳಿಮಗ್ಗದ, ರವಿಗೌಡ ಪಾಟೀಲ, ಸುನೀಲರಡ್ಡಿ ನೀರಲಗಿ, ರವಿ ಲಮಾಣಿ, ಪವನ ಮೇಟಿ, ರಾಜಶೇಖರ ರಡ್ಡಿ, ಶಿವಕುಮಾರ ಕುರಿ, ಶಂಕರ ಉಳ್ಳಾಗಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>