‘ಗದಗ ಜಿಲ್ಲೆಯ ನರಗುಂದ ಭಾಗದಲ್ಲಿ ಕಳೆದ ವರ್ಷ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅಪಾರ ಅನುಭವವಿದೆ. ಹೀಗಾಗಿ ನೆರೆಯ ಭೀಕರತೆ, ಹಾನಿ ಮತ್ತು ಜನಸಾಮಾನ್ಯರಿಗೆ ಅದರಿಂದ ಉಂಟಾಗುವ ತೊಂದರೆಗಳ ಸಂಪೂರ್ಣ ಪರಿಕಲ್ಪನೆ ನಿಮಗಿದೆ. ಅಲ್ಲದೇ, ಕೋವಿಡ್-19 ಸೋಂಕಿನ ತೀವ್ರತೆಯ ಸಮಯದಲ್ಲಿ ಪ್ರವಾಹ ಬಂದರೆ, ಅಧಿಕಾರಿಗಳಿಗೆ ಪ್ರವಾಹದ ಸಂದಿಗ್ಧ ಪರಿಸ್ಥಿತಿ ಎದುರಿಸುವುದು ತುಂಬಾ ಕಷ್ಟವಾಗುತ್ತದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.