ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಮುಂದುವರಿದಿರುವ ಮಧ್ಯೆಯೇ, ಡ್ಯಾನಿಶ್ ಅಲಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್ ಗುರುವಾರ ಸಭೆ ಸೇರಿ ಚರ್ಚೆ ನಡೆಸಿದರು. ‘ಸಮನ್ವಯ ಸಮಿತಿ’ ರಚನೆಯಾದ ಬಳಿಕ ಖಾತೆ ಹಂಚಿಕೆ ಮತ್ತು ಸಂಪುಟ ವಿಸ್ತರಣೆ ಕುರಿತು ತೀರ್ಮಾನಕ್ಕೆ ಬರುವ ಬಗ್ಗೆಯೂ ಚರ್ಚೆ ನಡೆದಿದೆ.