<p><strong>ಮುಳಗುಂದ:</strong> ಸಮೀಪದ ಸೊರಟೂರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿರುವ ಡಿಪಿಎಪಿ ಇಂಗ್ಲಿಷ್ ಮಾಧ್ಯಮ ಶಾಲೆಯು ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಅಸುರಕ್ಷತೆ ನಡುವೆ ವಿದ್ಯಾರ್ಥಿಗಳ ಕಲಿಕೆ ಮುಂದುವರಿದಿದೆ.</p>.<p>1ರಿಂದ 7ನೇ ತರಗತಿವರೆಗೆ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು, ಅವರಿಗೆ ಮೂಲಸೌಲಭ್ಯಗಳು ಇಲ್ಲದಾಗಿದೆ. ಶಾಲೆಯು ಹಳೆ ಕಟ್ಟಡದಲ್ಲಿದ್ದು, ಮೆಟ್ಟಿಲು ಇರುವ ಜಾಗದಲ್ಲಿ ಸುರಕ್ಷತೆ ಗೋಡೆ (ಗ್ರಿಲ್) ಕಿತ್ತು ಹೋಗಿದೆ. ಮೇಲಿನ ಮಹಡಿಯಲ್ಲಿರುವ ಕೊಠಡಿಗಳಿಗೆ ವಿದ್ಯಾರ್ಥಿಗಳು ಭಯದಲ್ಲೇ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಿ ಮೂರು ವರ್ಷ ಕಳೆದಿದ್ದು, ಇದುವರೆಗೂ ಬಳಕೆಯಾಗಿಲ್ಲ. ಕೊಳವೆಬಾವಿ ನೀರನ್ನೇ ದಿನನಿತ್ಯ ವಿದ್ಯಾರ್ಥಿಗಳು ಕುಡಿಯಲು ಬಳಸುತ್ತಿದ್ದಾರೆ. ಶಾಲೆಯ ಅಕ್ಕಪಕ್ಕದ ಜಾಗದಲ್ಲಿ ಕಸ ಬೆಳೆದು ಕಲುಷಿತ ವಾತಾವರಣ ನಿರ್ಮಾಣವಾಗಿದೆ.</p>.<p>ಶಾಲಾ ಕೊಠಡಿ ಹಳೆದಾದ ಕಾರಣ ಮಳೆಗಾಲದಲ್ಲಿ ಚಾವಣಿ ಸೋರುತ್ತಿವೆ. ಶಾಲೆಯ ಆವರಣದಲ್ಲಿ ಹೈಮಾಸ್ಕ್ ವಿದ್ಯುತ್ ಕಂಬವಿದ್ದು, ಈಚೆಗೆ ಮುರಿದು ಬಿದ್ದಿದೆ. ಇದುವರೆಗೂ ಈ ಕುರಿತು ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಶಾಲೆಯಲ್ಲಿ ಪ್ರತ್ಯೇಕ ಶೌಚಾಲಯಗಳಿಲ್ಲ, ಇರುವ ಒಂದು ಶೌಚಾಲಯ ನಿರಂತರವಾಗಿ ಬೀಗ ಹಾಕಿರುತ್ತದೆ. ವಿದ್ಯಾರ್ಥಿಗಳು ಬಯಲಿನಲ್ಲಿಯೇ ಮೂತ್ರ ಮೂಸರ್ಜನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಅವಲತ್ತುಕೊಂಡರು.</p>.<p>‘ಪಾಲಕರು ಹಲವು ಬಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ಮುಖ್ಯ ಶಿಕ್ಷಕರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಸೌಲಭ್ಯಗಳು ಮರೀಚಿಕೆಯಾಗುತ್ತಿವೆಯೇ ಹೊರತು ಅಭಿವೃದ್ಧಿ ಶೂನ್ಯವಾಗಿದೆ. ಶಾಲೆ ಅಭಿವೃದ್ಧಿ ಸಮಿತಿಯೂ ಈ ಕುರಿತು ಕ್ರಮ ವಹಿಸುತ್ತಿಲ್ಲ’ ಎಂದು ಜೈ ಕರ್ನಾಟಕ ಸಂಘಟನೆಯ ಗದಗ ತಾಲ್ಲೂಕು ಅಧ್ಯಕ್ಷ ಇಮಾಮಸಾಬ ಮಜ್ಜೂರ ಆರೋಪಿಸಿದರು.</p>.<p>ಗ್ರಾಮೀಣ ಭಾಗದ ಶಾಲೆ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕಬೇಕು. ಆದರೆ ಶಾಲೆ ಅಭಿವೃದ್ಧಿ ಅನುದಾನ ಇಲ್ಲಿ ಸದ್ಭಳಿಕೆ ಆಗುತ್ತಿಲ್ಲ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ಸೌಲಭ್ಯ ಒದಗಿಸಲು ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ. </p>.<div><blockquote>ಡಿಪಿಇಪಿ ಶಾಲೆ ನೂತನ ಕಟ್ಟಡ ಸಿದ್ದವಾಗಿದ್ದು ಶೌಚಾಲಯದ ಸೆಪ್ಟಿಕ್ ಟ್ಯಾಂಕ್ ನಿರ್ಮಿಸದ ಕಾರಣ ಇನ್ನೂ ಉದ್ಘಾಟನೆಯಾಗಿಲ್ಲ. ಹಳೇ ಕಟ್ಟಡ ದುರಸ್ತಿ ಮಾಡದ ಕಾರಣ ತೊಂದರೆ ಆಗುತ್ತಿದೆ</blockquote><span class="attribution"> ನೀಲವ್ವ ಮಾ.ಮಾದಣ್ಣವರ, ಎಸ್ಡಿಎಂಸಿ ಅಧ್ಯಕ್ಷರು ಡಿಪಿಇಪಿ ಶಾಲೆ ಸೊರಟೂರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಗುಂದ:</strong> ಸಮೀಪದ ಸೊರಟೂರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿರುವ ಡಿಪಿಎಪಿ ಇಂಗ್ಲಿಷ್ ಮಾಧ್ಯಮ ಶಾಲೆಯು ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಅಸುರಕ್ಷತೆ ನಡುವೆ ವಿದ್ಯಾರ್ಥಿಗಳ ಕಲಿಕೆ ಮುಂದುವರಿದಿದೆ.</p>.<p>1ರಿಂದ 7ನೇ ತರಗತಿವರೆಗೆ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು, ಅವರಿಗೆ ಮೂಲಸೌಲಭ್ಯಗಳು ಇಲ್ಲದಾಗಿದೆ. ಶಾಲೆಯು ಹಳೆ ಕಟ್ಟಡದಲ್ಲಿದ್ದು, ಮೆಟ್ಟಿಲು ಇರುವ ಜಾಗದಲ್ಲಿ ಸುರಕ್ಷತೆ ಗೋಡೆ (ಗ್ರಿಲ್) ಕಿತ್ತು ಹೋಗಿದೆ. ಮೇಲಿನ ಮಹಡಿಯಲ್ಲಿರುವ ಕೊಠಡಿಗಳಿಗೆ ವಿದ್ಯಾರ್ಥಿಗಳು ಭಯದಲ್ಲೇ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಿ ಮೂರು ವರ್ಷ ಕಳೆದಿದ್ದು, ಇದುವರೆಗೂ ಬಳಕೆಯಾಗಿಲ್ಲ. ಕೊಳವೆಬಾವಿ ನೀರನ್ನೇ ದಿನನಿತ್ಯ ವಿದ್ಯಾರ್ಥಿಗಳು ಕುಡಿಯಲು ಬಳಸುತ್ತಿದ್ದಾರೆ. ಶಾಲೆಯ ಅಕ್ಕಪಕ್ಕದ ಜಾಗದಲ್ಲಿ ಕಸ ಬೆಳೆದು ಕಲುಷಿತ ವಾತಾವರಣ ನಿರ್ಮಾಣವಾಗಿದೆ.</p>.<p>ಶಾಲಾ ಕೊಠಡಿ ಹಳೆದಾದ ಕಾರಣ ಮಳೆಗಾಲದಲ್ಲಿ ಚಾವಣಿ ಸೋರುತ್ತಿವೆ. ಶಾಲೆಯ ಆವರಣದಲ್ಲಿ ಹೈಮಾಸ್ಕ್ ವಿದ್ಯುತ್ ಕಂಬವಿದ್ದು, ಈಚೆಗೆ ಮುರಿದು ಬಿದ್ದಿದೆ. ಇದುವರೆಗೂ ಈ ಕುರಿತು ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಶಾಲೆಯಲ್ಲಿ ಪ್ರತ್ಯೇಕ ಶೌಚಾಲಯಗಳಿಲ್ಲ, ಇರುವ ಒಂದು ಶೌಚಾಲಯ ನಿರಂತರವಾಗಿ ಬೀಗ ಹಾಕಿರುತ್ತದೆ. ವಿದ್ಯಾರ್ಥಿಗಳು ಬಯಲಿನಲ್ಲಿಯೇ ಮೂತ್ರ ಮೂಸರ್ಜನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಅವಲತ್ತುಕೊಂಡರು.</p>.<p>‘ಪಾಲಕರು ಹಲವು ಬಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ಮುಖ್ಯ ಶಿಕ್ಷಕರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಸೌಲಭ್ಯಗಳು ಮರೀಚಿಕೆಯಾಗುತ್ತಿವೆಯೇ ಹೊರತು ಅಭಿವೃದ್ಧಿ ಶೂನ್ಯವಾಗಿದೆ. ಶಾಲೆ ಅಭಿವೃದ್ಧಿ ಸಮಿತಿಯೂ ಈ ಕುರಿತು ಕ್ರಮ ವಹಿಸುತ್ತಿಲ್ಲ’ ಎಂದು ಜೈ ಕರ್ನಾಟಕ ಸಂಘಟನೆಯ ಗದಗ ತಾಲ್ಲೂಕು ಅಧ್ಯಕ್ಷ ಇಮಾಮಸಾಬ ಮಜ್ಜೂರ ಆರೋಪಿಸಿದರು.</p>.<p>ಗ್ರಾಮೀಣ ಭಾಗದ ಶಾಲೆ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕಬೇಕು. ಆದರೆ ಶಾಲೆ ಅಭಿವೃದ್ಧಿ ಅನುದಾನ ಇಲ್ಲಿ ಸದ್ಭಳಿಕೆ ಆಗುತ್ತಿಲ್ಲ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ಸೌಲಭ್ಯ ಒದಗಿಸಲು ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ. </p>.<div><blockquote>ಡಿಪಿಇಪಿ ಶಾಲೆ ನೂತನ ಕಟ್ಟಡ ಸಿದ್ದವಾಗಿದ್ದು ಶೌಚಾಲಯದ ಸೆಪ್ಟಿಕ್ ಟ್ಯಾಂಕ್ ನಿರ್ಮಿಸದ ಕಾರಣ ಇನ್ನೂ ಉದ್ಘಾಟನೆಯಾಗಿಲ್ಲ. ಹಳೇ ಕಟ್ಟಡ ದುರಸ್ತಿ ಮಾಡದ ಕಾರಣ ತೊಂದರೆ ಆಗುತ್ತಿದೆ</blockquote><span class="attribution"> ನೀಲವ್ವ ಮಾ.ಮಾದಣ್ಣವರ, ಎಸ್ಡಿಎಂಸಿ ಅಧ್ಯಕ್ಷರು ಡಿಪಿಇಪಿ ಶಾಲೆ ಸೊರಟೂರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>