<p><strong>ಮುಂಡರಗಿ: ‘ಇ</strong>ತ್ತೀಚಿನ ದಿನಗಳಲ್ಲಿ ಹಲವು ಕಾಯಿಲೆಗಳು ತೀವ್ರವಾಗಿ ಹರಡುತಿದ್ದು, ಅವುಗಳ ವಿರುದ್ಧ ಹೋರಾಡಬೇಕಿದೆ. ಕುಟುಂಬದ ಆರೋಗ್ಯದ ಜೊತೆಗೆ ಸಮುದಾಯದ ಆರೋಗ್ಯಕ್ಕೂ ಮಹತ್ವ ನೀಡಬೇಕು’ ಎಂದು ಹಿರಿಯ ವೈದ್ಯ ಅನ್ನದಾನಿ ಮೇಟಿ ತಿಳಿಸಿದರು.</p>.<p>ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ಮಾಸಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಹೆಚ್.ಎಲ್.ಗಿರಡ್ಡಿ ಮಾತನಾಡಿ, ‘ಸಾರ್ವಜನಿಕರಿಗೆ ವಿಶೇಷ ಆರೋಗ್ಯ ಸೇವೆ ನೀಡುವುದರ ಜೊತೆಗೆ ಕೇಂದ್ರ ಸರ್ಕಾರವು ಮಲೇರಿಯಾ ನಿರ್ಮೂಲನೆ ಮಾಡಲು ಪ್ರಯತ್ನಿಸುತ್ತಿದೆ. ನಾವು ಸರ್ಕಾರದ ಕೆಲಸಗಳಿಗೆ ಕೈಜೋಡಿಸಬೇಕು’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮಣ ಪೂಜಾರ ಮಾತನಾಡಿ, ‘ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಮಲೇರಿಯಾ ರೋಗ ನಿಯಂತ್ರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಲೇರಿಯಾ ರೋಗ ನಿರ್ಮೂಲನೆಗೆ ಸಹಕರಿಸಬೇಕು’ ಎಂದರು.</p>.<p>ಡಾ.ಚಂದ್ರಕಾಂತ ಇಟಗಿ, ಅನ್ನಪೂರ್ಣ ಶೆಟ್ಟರ ಮಾತನಾಡಿದರು. ರೇಶ್ಮಾ ಹುಬ್ಬಳ್ಳಿ, ಎಸ್.ಎಲ್.ಕೋರಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಸ್.ಸಜ್ಜನರ, ಪಿ.ವಿ.ಬಿದರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ: ‘ಇ</strong>ತ್ತೀಚಿನ ದಿನಗಳಲ್ಲಿ ಹಲವು ಕಾಯಿಲೆಗಳು ತೀವ್ರವಾಗಿ ಹರಡುತಿದ್ದು, ಅವುಗಳ ವಿರುದ್ಧ ಹೋರಾಡಬೇಕಿದೆ. ಕುಟುಂಬದ ಆರೋಗ್ಯದ ಜೊತೆಗೆ ಸಮುದಾಯದ ಆರೋಗ್ಯಕ್ಕೂ ಮಹತ್ವ ನೀಡಬೇಕು’ ಎಂದು ಹಿರಿಯ ವೈದ್ಯ ಅನ್ನದಾನಿ ಮೇಟಿ ತಿಳಿಸಿದರು.</p>.<p>ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ಮಾಸಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಹೆಚ್.ಎಲ್.ಗಿರಡ್ಡಿ ಮಾತನಾಡಿ, ‘ಸಾರ್ವಜನಿಕರಿಗೆ ವಿಶೇಷ ಆರೋಗ್ಯ ಸೇವೆ ನೀಡುವುದರ ಜೊತೆಗೆ ಕೇಂದ್ರ ಸರ್ಕಾರವು ಮಲೇರಿಯಾ ನಿರ್ಮೂಲನೆ ಮಾಡಲು ಪ್ರಯತ್ನಿಸುತ್ತಿದೆ. ನಾವು ಸರ್ಕಾರದ ಕೆಲಸಗಳಿಗೆ ಕೈಜೋಡಿಸಬೇಕು’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮಣ ಪೂಜಾರ ಮಾತನಾಡಿ, ‘ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಮಲೇರಿಯಾ ರೋಗ ನಿಯಂತ್ರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಲೇರಿಯಾ ರೋಗ ನಿರ್ಮೂಲನೆಗೆ ಸಹಕರಿಸಬೇಕು’ ಎಂದರು.</p>.<p>ಡಾ.ಚಂದ್ರಕಾಂತ ಇಟಗಿ, ಅನ್ನಪೂರ್ಣ ಶೆಟ್ಟರ ಮಾತನಾಡಿದರು. ರೇಶ್ಮಾ ಹುಬ್ಬಳ್ಳಿ, ಎಸ್.ಎಲ್.ಕೋರಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಸ್.ಸಜ್ಜನರ, ಪಿ.ವಿ.ಬಿದರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>