<p><strong>ಮುಂಡರಗಿ</strong>: ‘ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬ ಸೇರಿದಂತೆ ತಾಲ್ಲೂಕಿನಾದ್ಯಂತ ಜರುಗುವ ಎಲ್ಲ ಹಬ್ಬಗಳನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದದಿಂದ ಆಚರಿಸಬೇಕು. ಆ ಮೂಲಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು’ ಎಂದು ನೂತನ ಸಿಪಿಐ ಅಯ್ಯನಗೌಡ ಪಾಟೀಲ ತಿಳಿಸಿದರು.</p>.<p>ಬಕ್ರಿದ್ ಹಬ್ಬದ ಪ್ರಯುಕ್ತ ಮಂಗಳವಾರ ತಾಲ್ಲೂಕಿನ ಡಂಬಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಗತ್ತಿನಲ್ಲಿ ಪ್ರತಿಯೊಂದು ಧರ್ಮವು ಶಾಂತಿ ಹಾಗೂ ನೆಮ್ಮದಿಯನ್ನು ಬಯಸುತ್ತವೆ. ಶಾಂತಿಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸುವ್ಯವಸ್ಥೆಯನ್ನು ಪಾಲನೆ ಮಾಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.</p>.<p>ಸಿದ್ಧಪ್ಪ ಮಠದ, ಅಂಜುಮನ್ ಕಮಿಟಿ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ, ಬಸಪ್ಪ ಕೋತಂಬ್ರಿ, ಶಶಿಕಾಂತ ಬಂಡಿಹಾಳ, ಪೋಲಿಸ್ ಸಿಬ್ಬಂದಿ ಎಸ್.ಎಸ್.ಕೆಂಚಗಾರ, ಬಾಬುಜಾನ ಕಮ್ಮಾರ, ಎನ್.ಬಿ.ಪೂಜಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-732442378</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬ ಸೇರಿದಂತೆ ತಾಲ್ಲೂಕಿನಾದ್ಯಂತ ಜರುಗುವ ಎಲ್ಲ ಹಬ್ಬಗಳನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದದಿಂದ ಆಚರಿಸಬೇಕು. ಆ ಮೂಲಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು’ ಎಂದು ನೂತನ ಸಿಪಿಐ ಅಯ್ಯನಗೌಡ ಪಾಟೀಲ ತಿಳಿಸಿದರು.</p>.<p>ಬಕ್ರಿದ್ ಹಬ್ಬದ ಪ್ರಯುಕ್ತ ಮಂಗಳವಾರ ತಾಲ್ಲೂಕಿನ ಡಂಬಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಗತ್ತಿನಲ್ಲಿ ಪ್ರತಿಯೊಂದು ಧರ್ಮವು ಶಾಂತಿ ಹಾಗೂ ನೆಮ್ಮದಿಯನ್ನು ಬಯಸುತ್ತವೆ. ಶಾಂತಿಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸುವ್ಯವಸ್ಥೆಯನ್ನು ಪಾಲನೆ ಮಾಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.</p>.<p>ಸಿದ್ಧಪ್ಪ ಮಠದ, ಅಂಜುಮನ್ ಕಮಿಟಿ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ, ಬಸಪ್ಪ ಕೋತಂಬ್ರಿ, ಶಶಿಕಾಂತ ಬಂಡಿಹಾಳ, ಪೋಲಿಸ್ ಸಿಬ್ಬಂದಿ ಎಸ್.ಎಸ್.ಕೆಂಚಗಾರ, ಬಾಬುಜಾನ ಕಮ್ಮಾರ, ಎನ್.ಬಿ.ಪೂಜಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-732442378</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>