<p>ಮುಂಡರಗಿ: ‘ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜದಲ್ಲಿ ಮನೆ ಮಾಡಿದ್ದ ಜಾತಿ ಪದ್ಧತಿ ನಿರ್ಮೂಲನೆಗೆ ಶ್ರಮಿಸಿದ ಮಹಾನ್ ನಾಯಕರಾಗಿದ್ದು, ಸಮಾನತೆಯ ಜೊತೆಗೆ ಅವರು ಪ್ರತಿಪಾದಿಸಿದ ತತ್ವಾದರ್ಶಗಳನ್ನು ನಾವೆಲ್ಲ ಆಚರಣೆಗೆ ತರಬೇಕು’ ಎಂದು ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್. ಹೇಳಿದರು.</p>.<p>ತಾಲ್ಲೂಕು ಆಡಳಿತವು ಸೋಮವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಹಿಂದೆ ಮೇಲು, ಕೀಳುಗಳೆಂಬ ಅನಿಷ್ಟ ಪದ್ಧತಿಯು ನಮ್ಮ ಸಮಾಜವನ್ನು ನಾಶ ಮಾಡುತ್ತಿತ್ತು. ಬಸವಾದಿ ಶರಣರು ಮಹಾಮನೆ ಹಾಗೂ ಅನುಭವ ಮಂಟಪಗಳ ಮೂಲಕ ಎಲ್ಲರಿಗೂ ಸಮಾನ ಸ್ಥಾನಮಾನ ನೀಡಿದರು. ಆ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದರು ಎಂದು ತಿಳಿಸಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಮಾತನಾಡಿ, ಎಲ್ಲರನ್ನೂ ಒಳಗೊಳ್ಳುವ ಸಮಾಜದಲ್ಲಿ ಸದಾ ಶಾಂತಿ ತುಂಬಿರುತ್ತದೆ. ಈ ಸತ್ಯವನ್ನು ಮನಗಂಡಿದ್ದ ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ ಮೂಡಿಸಲು ಶ್ರಮಿಸಿದರು. ಅವರು ಸಮಾಜದ ದಾರಿದೀಪಗಳಾಗಿದ್ದಾರೆ ಎಂದು ತಿಳಿಸಿದರು.</p>.<p>ಮುಖಂಡರಾದ ಪ್ರಹ್ಲಾದ ಹೊಸಮನಿ, ನಾಗರಾಜ ಹೊಂಬಳಗಟ್ಟಿ, ರಾಜಾಭಕ್ಷಿ ಬೆಟಗೇರಿ, ವಿ.ಎಸ್.ಗಟ್ಟಿ, ಚಂದ್ರಶೇಖರ ಪೂಜಾರ, ಅಶ್ವಿನಿ ಗೌಡರ, ರವಿ ಪಾಟೀಲ, ನಬಿಸಾಬ ಕೆಲೂರ ಮತ್ತಿತರರು ಮಾತನಾಡಿದರು. ಉಪತಹಶೀಲ್ದಾರ್ ಸಿ.ಕೆ.ಬಳೂಟಗಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.</p>.<p>ತಾಲ್ಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ರಾಮಣ್ಣ ಕೋಳಿ, ಯಲ್ಲಪ್ಪ ಹೊಂಬಳಗಟ್ಡಿ, ದ್ರುವಕುಮಾರ ಹೂಗಾರ, ನಿಂಗಪ್ಪ ಭಂಡಾರಿ, ಮಲ್ಲೇಶ ಹರಿಜನ, ಗೌರಿಶಂಕರ ಸಜ್ಜನರ, ಐ.ಎಸ್.ದೊಡ್ಡಮನಿ, ಶ್ರೀಕಾಂತ ತಳವಾರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-23-1038334242</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ‘ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜದಲ್ಲಿ ಮನೆ ಮಾಡಿದ್ದ ಜಾತಿ ಪದ್ಧತಿ ನಿರ್ಮೂಲನೆಗೆ ಶ್ರಮಿಸಿದ ಮಹಾನ್ ನಾಯಕರಾಗಿದ್ದು, ಸಮಾನತೆಯ ಜೊತೆಗೆ ಅವರು ಪ್ರತಿಪಾದಿಸಿದ ತತ್ವಾದರ್ಶಗಳನ್ನು ನಾವೆಲ್ಲ ಆಚರಣೆಗೆ ತರಬೇಕು’ ಎಂದು ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್. ಹೇಳಿದರು.</p>.<p>ತಾಲ್ಲೂಕು ಆಡಳಿತವು ಸೋಮವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಹಿಂದೆ ಮೇಲು, ಕೀಳುಗಳೆಂಬ ಅನಿಷ್ಟ ಪದ್ಧತಿಯು ನಮ್ಮ ಸಮಾಜವನ್ನು ನಾಶ ಮಾಡುತ್ತಿತ್ತು. ಬಸವಾದಿ ಶರಣರು ಮಹಾಮನೆ ಹಾಗೂ ಅನುಭವ ಮಂಟಪಗಳ ಮೂಲಕ ಎಲ್ಲರಿಗೂ ಸಮಾನ ಸ್ಥಾನಮಾನ ನೀಡಿದರು. ಆ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದರು ಎಂದು ತಿಳಿಸಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಮಾತನಾಡಿ, ಎಲ್ಲರನ್ನೂ ಒಳಗೊಳ್ಳುವ ಸಮಾಜದಲ್ಲಿ ಸದಾ ಶಾಂತಿ ತುಂಬಿರುತ್ತದೆ. ಈ ಸತ್ಯವನ್ನು ಮನಗಂಡಿದ್ದ ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ ಮೂಡಿಸಲು ಶ್ರಮಿಸಿದರು. ಅವರು ಸಮಾಜದ ದಾರಿದೀಪಗಳಾಗಿದ್ದಾರೆ ಎಂದು ತಿಳಿಸಿದರು.</p>.<p>ಮುಖಂಡರಾದ ಪ್ರಹ್ಲಾದ ಹೊಸಮನಿ, ನಾಗರಾಜ ಹೊಂಬಳಗಟ್ಟಿ, ರಾಜಾಭಕ್ಷಿ ಬೆಟಗೇರಿ, ವಿ.ಎಸ್.ಗಟ್ಟಿ, ಚಂದ್ರಶೇಖರ ಪೂಜಾರ, ಅಶ್ವಿನಿ ಗೌಡರ, ರವಿ ಪಾಟೀಲ, ನಬಿಸಾಬ ಕೆಲೂರ ಮತ್ತಿತರರು ಮಾತನಾಡಿದರು. ಉಪತಹಶೀಲ್ದಾರ್ ಸಿ.ಕೆ.ಬಳೂಟಗಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.</p>.<p>ತಾಲ್ಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ರಾಮಣ್ಣ ಕೋಳಿ, ಯಲ್ಲಪ್ಪ ಹೊಂಬಳಗಟ್ಡಿ, ದ್ರುವಕುಮಾರ ಹೂಗಾರ, ನಿಂಗಪ್ಪ ಭಂಡಾರಿ, ಮಲ್ಲೇಶ ಹರಿಜನ, ಗೌರಿಶಂಕರ ಸಜ್ಜನರ, ಐ.ಎಸ್.ದೊಡ್ಡಮನಿ, ಶ್ರೀಕಾಂತ ತಳವಾರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-23-1038334242</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>