<p><strong>ಮುಂಡರಗಿ</strong>: ‘ಹಿಂದೂ ಧರ್ಮವು ಸರ್ವರನ್ನು ಸಮಾನವಾಗಿ ಕಾಣುತ್ತದೆ. ಅದನ್ನು ಸಹಿಸದ ಕೆಲವರು ಜನರಲ್ಲಿ ಗೊಂದಲ ಸೃಷ್ಟಿಸಿ ಹಿಂದೂ ಧರ್ಮವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಸಮಾನತೆ ಹಾಗೂ ಸಾಮರಸ್ಯ ಮೂಡಿಸುವುದು ಹಿಂದೂ ಸಮಾವೇಶದ ಮೂಲ ಉದ್ದೇಶವಾಗಿವೆ’ ಎಂದು ವಿಜಯಪುರದ ಕೇಶರಟ್ಟಿ ಸೋಮಲಿಂಗ ಸ್ವಾಮೀಜಿ ಹೇಳಿದರು.</p>.<p>ಗದಗದಲ್ಲಿ ಮೇ 31ರಂದು ನಡೆಯುವಬಸವಾದಿ ಶಿವಶರಣರ ಬೃಹತ್ ಹಿಂದೂಸಮಾವೇಶದ ಕರಪತ್ರಗಳನ್ನು ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಬಸವಣ್ಣನವರ ಸಮಾನತೆಯ ಆಶಯದ ತಳಹದಿಯ ಮೇಲೆ ಹಿಂದೂ ಸಮಾವೇಶ ಕೈಗೊಳ್ಳಲಾಗಿದ್ದು, ಧರ್ಮವನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾವೇಶದ ಆಶಯವನ್ನು ಅರ್ಥ ಮಾಡಿಕೊಳ್ಳದೆ ಕೆಲವರು ವಿನಾಕಾರಣ ವಿರೋಧಿಸುತ್ತಿರುವುದು ಸಮಂಜಸವಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸಾಧು, ಸಂತರು, ಶರಣರು, ಮಹಾತ್ಮರು ಹಿಂದೂ ಧರ್ಮದ ಅವಿಭಾಜ್ಯ ಅಂಗವಾಗಿದ್ದು, ಧರ್ಮವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನೇರಿಯ ಅದೃಷ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಹಿಂದೂ ಸಮಾವೇಶ ಏರ್ಪಡಿಸಲಾಗಿದೆ’ ಎಂದರು.</p>.<p>‘ಸಮಾವೇಶದಲ್ಲಿ ನಾಡಿನ ವಿವಿಧ ಭಾಗಗಳ 300ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಳ್ಳುತ್ತಿದ್ದಾರೆ. ಸಮಾವೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.</p>.<p>ಯುವ ಮುಖಂಡ ರವಿಕಾಂತ ಅಂಗಡಿ ಮಾತನಾಡಿ, ‘ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ್ದು, ಅದು ಬಹುಸಂಸ್ಕೃತಿಯ ನಾಡಾಗಿದೆ. ಹೀಗಾಗಿ ಯಾವ ಭೇದ ಭಾವ ಇಲ್ಲದೆ ಹಿಂದೂ ಧರ್ಮದ ಎಲ್ಲ ಸಮು ದಾಯದ ಸಹಕಾರದೊಂದಿಗೆ ಸಮಾವೇಶ ಆಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಮುಖಂಡರಾದ ಸುಭಾಷ ಗುಡಿಮನಿ, ಬೆನಕರಾಜ ಪೂಜಾರ, ವಸಂತ ನಾಯಕ, ಪರಮೇಶ ನಾಯಕ, ಫಕ್ಕೀರಪ್ಪ ನಾಯಕ, ವೆಂಕಟೇಶ ಗುಡಿಮನಿ, ಸುರೇಶ ಲಮಾಣಿ, ಕುರಪ್ಪ ನಾಯಕ, ಬಸವರಾಜ ಕರಿಯವರ, ಚನ್ನಪ್ಪ ಮುರುಡಿ, ತುಕಾರಾಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-23-1577703496</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ಹಿಂದೂ ಧರ್ಮವು ಸರ್ವರನ್ನು ಸಮಾನವಾಗಿ ಕಾಣುತ್ತದೆ. ಅದನ್ನು ಸಹಿಸದ ಕೆಲವರು ಜನರಲ್ಲಿ ಗೊಂದಲ ಸೃಷ್ಟಿಸಿ ಹಿಂದೂ ಧರ್ಮವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಸಮಾನತೆ ಹಾಗೂ ಸಾಮರಸ್ಯ ಮೂಡಿಸುವುದು ಹಿಂದೂ ಸಮಾವೇಶದ ಮೂಲ ಉದ್ದೇಶವಾಗಿವೆ’ ಎಂದು ವಿಜಯಪುರದ ಕೇಶರಟ್ಟಿ ಸೋಮಲಿಂಗ ಸ್ವಾಮೀಜಿ ಹೇಳಿದರು.</p>.<p>ಗದಗದಲ್ಲಿ ಮೇ 31ರಂದು ನಡೆಯುವಬಸವಾದಿ ಶಿವಶರಣರ ಬೃಹತ್ ಹಿಂದೂಸಮಾವೇಶದ ಕರಪತ್ರಗಳನ್ನು ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಬಸವಣ್ಣನವರ ಸಮಾನತೆಯ ಆಶಯದ ತಳಹದಿಯ ಮೇಲೆ ಹಿಂದೂ ಸಮಾವೇಶ ಕೈಗೊಳ್ಳಲಾಗಿದ್ದು, ಧರ್ಮವನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾವೇಶದ ಆಶಯವನ್ನು ಅರ್ಥ ಮಾಡಿಕೊಳ್ಳದೆ ಕೆಲವರು ವಿನಾಕಾರಣ ವಿರೋಧಿಸುತ್ತಿರುವುದು ಸಮಂಜಸವಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸಾಧು, ಸಂತರು, ಶರಣರು, ಮಹಾತ್ಮರು ಹಿಂದೂ ಧರ್ಮದ ಅವಿಭಾಜ್ಯ ಅಂಗವಾಗಿದ್ದು, ಧರ್ಮವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನೇರಿಯ ಅದೃಷ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಹಿಂದೂ ಸಮಾವೇಶ ಏರ್ಪಡಿಸಲಾಗಿದೆ’ ಎಂದರು.</p>.<p>‘ಸಮಾವೇಶದಲ್ಲಿ ನಾಡಿನ ವಿವಿಧ ಭಾಗಗಳ 300ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಳ್ಳುತ್ತಿದ್ದಾರೆ. ಸಮಾವೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.</p>.<p>ಯುವ ಮುಖಂಡ ರವಿಕಾಂತ ಅಂಗಡಿ ಮಾತನಾಡಿ, ‘ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ್ದು, ಅದು ಬಹುಸಂಸ್ಕೃತಿಯ ನಾಡಾಗಿದೆ. ಹೀಗಾಗಿ ಯಾವ ಭೇದ ಭಾವ ಇಲ್ಲದೆ ಹಿಂದೂ ಧರ್ಮದ ಎಲ್ಲ ಸಮು ದಾಯದ ಸಹಕಾರದೊಂದಿಗೆ ಸಮಾವೇಶ ಆಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಮುಖಂಡರಾದ ಸುಭಾಷ ಗುಡಿಮನಿ, ಬೆನಕರಾಜ ಪೂಜಾರ, ವಸಂತ ನಾಯಕ, ಪರಮೇಶ ನಾಯಕ, ಫಕ್ಕೀರಪ್ಪ ನಾಯಕ, ವೆಂಕಟೇಶ ಗುಡಿಮನಿ, ಸುರೇಶ ಲಮಾಣಿ, ಕುರಪ್ಪ ನಾಯಕ, ಬಸವರಾಜ ಕರಿಯವರ, ಚನ್ನಪ್ಪ ಮುರುಡಿ, ತುಕಾರಾಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-23-1577703496</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>