<p>ಮುಂಡರಗಿ: 'ಕಸಾಪ ನೂತನ ಭವನ ನಿರ್ಮಾಣ ಸೇರಿದಂತೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಈವರೆಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಹಿತ್ಯಾಸಕ್ತರ ಗೌರವಕ್ಕೆ ಪಾತ್ರವಾಗಿದೆ. ಕಸಾಪ ವತಿಯಿಂದ ಸದ್ಯದಲ್ಲಿಯೇ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗುವುದು' ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕಸಾಪ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಸಾಪ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಬೇಸಿಗೆ ಶಿಬಿರ ಮುಗಿದ ನಂತರ ತಾಲ್ಲೂಕು ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗುವುದು. ತಾಲ್ಲೂಕಿನ ಎಲ್ಲ ಸಾಹಿತಿಗಳು ಹಾಗೂ ಅವರು ರಚಿಸಿರುವ ಗ್ರಂಥಗಳ ಪರಿಚಯ ಕುರಿತು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಅನ್ನದಾನೀಶ್ವರ ಸ್ವಾಮೀಜಿ ಅವರ ನೆರವು ಹಾಗೂ ಮಾರ್ಗದರ್ಶನದಲ್ಲಿ ಸುಸಜ್ಜಿತ ಕಸಾಪ ಭವನ ನಿರ್ಮಾಣಗೊಂಡಿದ್ದು, ಅಲ್ಪ, ಸ್ವಲ್ಪ ಕೆಲಸ ಕಾರ್ಯಗಳು ಉಳಿದುಕೊಂಡಿವೆ. ಸಾಹಿತ್ಯ ಭವನದಲ್ಲಿ ಅನ್ನದಾನೀಶ್ವರ ಸ್ವಾಮೀಜಿ ರಚಿಸಿರುವ ನೂರಾರು ಗ್ರಂಥಗಳನ್ನು ಸಂಗ್ರಹಿಸಿ ಓದುಗರಿಗೆ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ಕಸಾಪ ಕಾರ್ಯದರ್ಶಿ ಮಂಜುನಾಥ ಮುಧೋಳ ಮಾತನಾಡಿ, ಸಾಹಿತ್ಯ ಭವನ ನಿರ್ಮಾಣಕ್ಕೆ ₹ 25,000 ದೇಣಿಗೆ ನೀಡಿದವರ ಫೋಟೊ ಹಾಕಲು ಕ್ರಮ ವಹಿಸಲಾಗಿದೆ. ಇನ್ನುಳಿದ ಕೆಲಸ ಕಾರ್ಯಗಳಿಗೆ ಸಾಹಿತ್ಯಾಭಿಮಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.</p>.<p>ಕಸಾಪ ಉಪಾಧ್ಯಕ್ಷ ಶಂಕರ ಕುಕನೂರ, ಕೋಶಾದ್ಯಕ್ಷ ನಾಗೇಶ ಹುಬ್ಬಳ್ಳಿ, ಸದಸ್ಯರಾದ ಎಸ್.ಬಿ.ಹಿರೇಮಠ, ಸುರೇಶ ಭಾವಿಹಳ್ಳಿ, ಎನ್.ಎನ್.ಕಲಕೇರಿ, ಆರ್.ವೈ.ಪಾಟೀಲ, ಸಿ.ಕೆ.ಗಣಪ್ಪನವರ, ಐ.ಕೆ.ಮುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-23-1239636015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: 'ಕಸಾಪ ನೂತನ ಭವನ ನಿರ್ಮಾಣ ಸೇರಿದಂತೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಈವರೆಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಹಿತ್ಯಾಸಕ್ತರ ಗೌರವಕ್ಕೆ ಪಾತ್ರವಾಗಿದೆ. ಕಸಾಪ ವತಿಯಿಂದ ಸದ್ಯದಲ್ಲಿಯೇ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗುವುದು' ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕಸಾಪ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಸಾಪ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಬೇಸಿಗೆ ಶಿಬಿರ ಮುಗಿದ ನಂತರ ತಾಲ್ಲೂಕು ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗುವುದು. ತಾಲ್ಲೂಕಿನ ಎಲ್ಲ ಸಾಹಿತಿಗಳು ಹಾಗೂ ಅವರು ರಚಿಸಿರುವ ಗ್ರಂಥಗಳ ಪರಿಚಯ ಕುರಿತು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಅನ್ನದಾನೀಶ್ವರ ಸ್ವಾಮೀಜಿ ಅವರ ನೆರವು ಹಾಗೂ ಮಾರ್ಗದರ್ಶನದಲ್ಲಿ ಸುಸಜ್ಜಿತ ಕಸಾಪ ಭವನ ನಿರ್ಮಾಣಗೊಂಡಿದ್ದು, ಅಲ್ಪ, ಸ್ವಲ್ಪ ಕೆಲಸ ಕಾರ್ಯಗಳು ಉಳಿದುಕೊಂಡಿವೆ. ಸಾಹಿತ್ಯ ಭವನದಲ್ಲಿ ಅನ್ನದಾನೀಶ್ವರ ಸ್ವಾಮೀಜಿ ರಚಿಸಿರುವ ನೂರಾರು ಗ್ರಂಥಗಳನ್ನು ಸಂಗ್ರಹಿಸಿ ಓದುಗರಿಗೆ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ಕಸಾಪ ಕಾರ್ಯದರ್ಶಿ ಮಂಜುನಾಥ ಮುಧೋಳ ಮಾತನಾಡಿ, ಸಾಹಿತ್ಯ ಭವನ ನಿರ್ಮಾಣಕ್ಕೆ ₹ 25,000 ದೇಣಿಗೆ ನೀಡಿದವರ ಫೋಟೊ ಹಾಕಲು ಕ್ರಮ ವಹಿಸಲಾಗಿದೆ. ಇನ್ನುಳಿದ ಕೆಲಸ ಕಾರ್ಯಗಳಿಗೆ ಸಾಹಿತ್ಯಾಭಿಮಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.</p>.<p>ಕಸಾಪ ಉಪಾಧ್ಯಕ್ಷ ಶಂಕರ ಕುಕನೂರ, ಕೋಶಾದ್ಯಕ್ಷ ನಾಗೇಶ ಹುಬ್ಬಳ್ಳಿ, ಸದಸ್ಯರಾದ ಎಸ್.ಬಿ.ಹಿರೇಮಠ, ಸುರೇಶ ಭಾವಿಹಳ್ಳಿ, ಎನ್.ಎನ್.ಕಲಕೇರಿ, ಆರ್.ವೈ.ಪಾಟೀಲ, ಸಿ.ಕೆ.ಗಣಪ್ಪನವರ, ಐ.ಕೆ.ಮುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-23-1239636015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>