<p>ಮುಂಡರಗಿ: ನೂತನ ರೈಲು ಮಾರ್ಗ ಮಂಜೂರಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಹಾಗೂ ನೂತನ ರೈಲು ಮಾರ್ಗ ಜಂಟಿ ಹೋರಾಟ ಕ್ರಿಯಾ ಸಮಿತಿ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್ ಕೆ.ರಾಧಾ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆಯ ಸಂಚಾಲಕ ಬಸವರಾಜ ನವಲಗುಂದ ಮಾತನಾಡಿ, 'ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳದಿರುವುದು ತುಂಬಾ ದುರ್ದೈವದ ಸಂಗತಿ’ ಎಂದು ವಿಷಾದಿಸಿದರು.</p>.<p>ಪುರಸಭೆ ವ್ಯಾಪ್ತಿಯ ಬಡ ಜನರಿಗೆ ಆಶ್ರಯ ಮನೆ ನಿರ್ಮಿಸಲು ಕಳೆದ ಏಂಟು ವರ್ಷಗಳ ಹಿಂದೆ 25 ಎಕರೆ ಜಮೀನು ಖರೀದಿಸಲಾಗಿದ್ದು, ಇಲ್ಲಿಯವರೆಗೂ ಮನೆಗಳನ್ನು ನಿರ್ಮಿಸಿಕೊಡದೆ ಸರ್ಕಾರ ಬಡ ಜನತೆಯನ್ನು ವಂಚಿಸುತ್ತಲಿದೆ’ ಎಂದು ಆರೋಪಿಸಿದರು.</p>.<p>ಕೊಪ್ಪಳ-ಮುಂಡರಗಿ-ಶಿಗ್ಗಾಂವಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಬೇಕು. ಪಟ್ಟಣದಲ್ಲಿ ಅಂಚೆ ಕಚೇರಿ ನಿರ್ಮಿಸಲು ವಿಶಾಲವಾದ ನಿವೇಶನ ಖರೀದಿಸಲಾಗಿದೆ. ಇದುವರೆಗೂ ಅಂಚೆ ಕಚೇರಿಯು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕೂಡಲೇ ಅಂಚೆ ಕಚೇರಿ ಕಟ್ಟಡ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.</p>.<p>ಪಟ್ಟಣದ ಕನಕರಾಯನ ಗುಡ್ಡವನ್ನು ಪ್ರವಾಸಿ ತಾಣವನ್ನಾಗಿ ನಿರ್ಮಾಣ ಮಾಡಬೇಕು. ಕಪ್ಪತಗುಡ್ಡವನ್ನು ಅಭಿವೃದ್ಧಿ ಪಡಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮೇ.22ರಂದು ವಾರಣಾಸಿ ಚಲೋ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ದ್ರುವಕುಮಾರ ಹೂಗಾರ, ರವಿಗೌಡ ಪಾಟೀಲ, ಹನುಮಂತ ಬಚ್ಚೇನಹಳ್ಳಿ, ಜಗದೀಶ ಕಂಚಗಾರ, ಮೈನುದ್ದಿನ ಗರಡಿಮನಿ, ರೇವಣೆಪ್ಪ ಸೈದರ, ಮೈಲಪ್ಪ ದೊಡ್ಡಮನಿ, ಬಸಪ್ಪ ಬಚ್ಚೇನಹಳ್ಳಿ, ಪಾರ್ವತೆವ್ವ ದೊಡ್ಡಮನಿ, ಚಂದ್ರು ಪೂಜಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-23-1219297107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ನೂತನ ರೈಲು ಮಾರ್ಗ ಮಂಜೂರಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಹಾಗೂ ನೂತನ ರೈಲು ಮಾರ್ಗ ಜಂಟಿ ಹೋರಾಟ ಕ್ರಿಯಾ ಸಮಿತಿ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್ ಕೆ.ರಾಧಾ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆಯ ಸಂಚಾಲಕ ಬಸವರಾಜ ನವಲಗುಂದ ಮಾತನಾಡಿ, 'ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳದಿರುವುದು ತುಂಬಾ ದುರ್ದೈವದ ಸಂಗತಿ’ ಎಂದು ವಿಷಾದಿಸಿದರು.</p>.<p>ಪುರಸಭೆ ವ್ಯಾಪ್ತಿಯ ಬಡ ಜನರಿಗೆ ಆಶ್ರಯ ಮನೆ ನಿರ್ಮಿಸಲು ಕಳೆದ ಏಂಟು ವರ್ಷಗಳ ಹಿಂದೆ 25 ಎಕರೆ ಜಮೀನು ಖರೀದಿಸಲಾಗಿದ್ದು, ಇಲ್ಲಿಯವರೆಗೂ ಮನೆಗಳನ್ನು ನಿರ್ಮಿಸಿಕೊಡದೆ ಸರ್ಕಾರ ಬಡ ಜನತೆಯನ್ನು ವಂಚಿಸುತ್ತಲಿದೆ’ ಎಂದು ಆರೋಪಿಸಿದರು.</p>.<p>ಕೊಪ್ಪಳ-ಮುಂಡರಗಿ-ಶಿಗ್ಗಾಂವಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಬೇಕು. ಪಟ್ಟಣದಲ್ಲಿ ಅಂಚೆ ಕಚೇರಿ ನಿರ್ಮಿಸಲು ವಿಶಾಲವಾದ ನಿವೇಶನ ಖರೀದಿಸಲಾಗಿದೆ. ಇದುವರೆಗೂ ಅಂಚೆ ಕಚೇರಿಯು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕೂಡಲೇ ಅಂಚೆ ಕಚೇರಿ ಕಟ್ಟಡ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.</p>.<p>ಪಟ್ಟಣದ ಕನಕರಾಯನ ಗುಡ್ಡವನ್ನು ಪ್ರವಾಸಿ ತಾಣವನ್ನಾಗಿ ನಿರ್ಮಾಣ ಮಾಡಬೇಕು. ಕಪ್ಪತಗುಡ್ಡವನ್ನು ಅಭಿವೃದ್ಧಿ ಪಡಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮೇ.22ರಂದು ವಾರಣಾಸಿ ಚಲೋ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ದ್ರುವಕುಮಾರ ಹೂಗಾರ, ರವಿಗೌಡ ಪಾಟೀಲ, ಹನುಮಂತ ಬಚ್ಚೇನಹಳ್ಳಿ, ಜಗದೀಶ ಕಂಚಗಾರ, ಮೈನುದ್ದಿನ ಗರಡಿಮನಿ, ರೇವಣೆಪ್ಪ ಸೈದರ, ಮೈಲಪ್ಪ ದೊಡ್ಡಮನಿ, ಬಸಪ್ಪ ಬಚ್ಚೇನಹಳ್ಳಿ, ಪಾರ್ವತೆವ್ವ ದೊಡ್ಡಮನಿ, ಚಂದ್ರು ಪೂಜಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-23-1219297107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>