<p><strong>ಮುಂಡರಗಿ:</strong> ‘ಮನುಷ್ಯ ಸದಾ ಗುರುಪೂಜೆ ಹಾಗೂ ಸತ್ಕಾರ್ಯ ಮಾಡುತ್ತ ತಮ್ಮ ಜನ್ಮವನ್ಮು ಸಾರ್ಥಕ ಪಡಿಸಿಕೊಳ್ಳಬೇಕು’ ಎಂದು ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಸಂಸ್ಕೃತ ಪಾಠಶಾಲೆಯಿಂದ ಆರಂಭವಾದ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಂಸ್ಥೆ ಇಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಭಕ್ತರಲ್ಲಿ ಸಂತಸ ಮೂಡಿಸಿದೆ’ ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್. ಗುಡಿಮನಿ ಮಾತನಾಡಿ, ‘ಅನ್ನದಾನೀಶ್ವರ ಮಠ ಶತಮಾನದಿಂದ ನಾಡಿನ ಬಡ ಮಕ್ಕಳಿಗೆ ಅನ್ನ, ಆಶ್ರಯ ಹಾಗೂ ಅಕ್ಷರ ದಾಸೋಹ ನೀಡುತ್ತಿದೆ’ ಎಂದರು.</p>.<p>ಹೊಳಲಿನ ಚನ್ನಬಸವ ದೇವರು, ಆರ್.ಎಲ್. ಪೊಲೀಸ್ಪಾಟೀಲ ಮಾತನಾಡಿದರು. ಈ ವೇಳೆ ಭಕ್ತಿ ಸೇವೆ ವಹಿಸಿಕೊಂಡ ಲೀಲಾಕ್ಷಿ ಜಗ್ಗಿನ, ವೀರಯ್ಯ ಮುದುಗಲ್ಲಮಠ, ರಾಖೇಶ ಹಳ್ಳಿಗುಡಿ ಅವರನ್ನು ಸನ್ಮಾನಿಸಲಾಯಿತು.</p>.<p>ಚನ್ನವೀರಯ್ಯ ಹಿರೇಮಠ ಪ್ರಾರ್ಥನೆ ಹಾಡಿದರು. ಶ್ವೇತಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. <br /> ಎಂ.ಜಿ. ಗಚ್ಚಣ್ಣವರ, ಎಸ್.ಬಿ. ಹಿರೇಮಠ, ಎಸ್.ಎನ್. ಡೊಣ್ಣಿ, ಎಸ್.ಸಿ. ಚಕ್ಕಡಿಮಠ, ಎಂ.ಎಸ್. ಶಿವಶೆಟ್ಟಿ, ಬಿ.ಜಿ. ಜವಳಿ, ವೀರನಗೌಡ ಗುಡದಪ್ಪನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಮನುಷ್ಯ ಸದಾ ಗುರುಪೂಜೆ ಹಾಗೂ ಸತ್ಕಾರ್ಯ ಮಾಡುತ್ತ ತಮ್ಮ ಜನ್ಮವನ್ಮು ಸಾರ್ಥಕ ಪಡಿಸಿಕೊಳ್ಳಬೇಕು’ ಎಂದು ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಸಂಸ್ಕೃತ ಪಾಠಶಾಲೆಯಿಂದ ಆರಂಭವಾದ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಂಸ್ಥೆ ಇಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಭಕ್ತರಲ್ಲಿ ಸಂತಸ ಮೂಡಿಸಿದೆ’ ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್. ಗುಡಿಮನಿ ಮಾತನಾಡಿ, ‘ಅನ್ನದಾನೀಶ್ವರ ಮಠ ಶತಮಾನದಿಂದ ನಾಡಿನ ಬಡ ಮಕ್ಕಳಿಗೆ ಅನ್ನ, ಆಶ್ರಯ ಹಾಗೂ ಅಕ್ಷರ ದಾಸೋಹ ನೀಡುತ್ತಿದೆ’ ಎಂದರು.</p>.<p>ಹೊಳಲಿನ ಚನ್ನಬಸವ ದೇವರು, ಆರ್.ಎಲ್. ಪೊಲೀಸ್ಪಾಟೀಲ ಮಾತನಾಡಿದರು. ಈ ವೇಳೆ ಭಕ್ತಿ ಸೇವೆ ವಹಿಸಿಕೊಂಡ ಲೀಲಾಕ್ಷಿ ಜಗ್ಗಿನ, ವೀರಯ್ಯ ಮುದುಗಲ್ಲಮಠ, ರಾಖೇಶ ಹಳ್ಳಿಗುಡಿ ಅವರನ್ನು ಸನ್ಮಾನಿಸಲಾಯಿತು.</p>.<p>ಚನ್ನವೀರಯ್ಯ ಹಿರೇಮಠ ಪ್ರಾರ್ಥನೆ ಹಾಡಿದರು. ಶ್ವೇತಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. <br /> ಎಂ.ಜಿ. ಗಚ್ಚಣ್ಣವರ, ಎಸ್.ಬಿ. ಹಿರೇಮಠ, ಎಸ್.ಎನ್. ಡೊಣ್ಣಿ, ಎಸ್.ಸಿ. ಚಕ್ಕಡಿಮಠ, ಎಂ.ಎಸ್. ಶಿವಶೆಟ್ಟಿ, ಬಿ.ಜಿ. ಜವಳಿ, ವೀರನಗೌಡ ಗುಡದಪ್ಪನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>