ಶಿಂಗಟಾಲೂರ ದೇವಸ್ಥಾನ ಅಭಿವೃದ್ಧಿಗೆ ಸಚಿವ ಎಚ್.ಕೆ.ಪಾಟೀಲರು ಈಚೆಗೆ ₹1 ಕೋಟಿ ಅನುದಾನ ನೀಡಿದ್ದು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಅದೇರೀತಿ ಕಾಲಕಾಲಕ್ಕೆ ಇಲ್ಲಿಯ ಶಾಸಕರು ಸಂಸದರು ಸ್ಥಳೀಯ ಆಡಳಿತ ಮಂಡಳಿಗಳು ಅನುದಾನ ನೀಡಿವೆ.ಕೆ.ವಿ.ಹಂಚಿನಾಳ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶಿಂಗಟಾಲೂರ
ಕಪ್ಪತ್ತಗುಡ್ಡದಲ್ಲಿ ರೋಪ್ ವೇ ಸೇರಿದಂತೆ ವಿವಿಧ ಜನಾಕರ್ಷಣೀಯ ಯೋಜನೆಗಳನ್ನು ರೂಪಿಸುವ ಕುರಿತಂತೆ ಪ್ರವಾಸೋದ್ಯಮ ಇಲಾಖೆಯು ಸಮೀಕ್ಷೆ ಮಾಡಿಕೊಂಡು ಹೋಗಿದೆ. ಅರಣ್ಯ ಇಲಾಖೆಯು ಈ ಕುರಿತು ಸಮಗ್ರ ಪ್ರಸ್ತಾವನೆಯನ್ನು ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಿದೆವೀರೇಂದ್ರ ಮರಿಬಸಣ್ಣವರ ಆರ್ಎಫ್ಒ ಮುಂಡರಗಿ
ಗೋಣಿಬಸವೇಶ್ವರ ದೇವಸ್ಥಾನವು ನೀರಾವರಿ ಹಿನ್ನೀರಿನಲ್ಲಿ ಮುಳುಗಡೆಯಾಗಲಿದ್ದು ಅದನ್ಮು ಯಥಾರೀತಿ ಸ್ಥಳಾಂತರಿಸಬೇಕು ಅಥವಾ ಅದಕ್ಕೆ ಬೃಹತ್ ತಡೆಗೋಡೆ ನಿರ್ಮಿಸಿ ದೇವಸ್ಥಾನವನ್ನು ಸಂರಕ್ಷಿಸಬೇಕುಹನುಮಂತ ಬೆಂಡಿಕಾಯಿ ಗುಮ್ಮಗೋಳ ಗ್ರಾಮಸ್ಥ
ಸ್ವಾತಂತ್ರ್ಯ ಹೋರಾಟಗಾರ ಮಂಡಗೈ ಭೀಮರಾಯರ ವಂಶಜರು ಕನಕಪ್ಪನ ಗುಡ್ಡದ ಮೇಲೆ ನಿರ್ಮಿಸಿರುವ ಕಲ್ಲಿನ ಕೋಟೆಯು ಶಿಥಿಲಾವಸ್ಥೆಯಲ್ಲಿದ್ದು ಅದನ್ನು ಪುರಾತತ್ವ ಇಲಾಖೆ ಸಂರಕ್ಷಿಸಬೇಕುವಿ.ಎಲ್.ನಾಡಗೌಡ ಭೀಮರಾಯ ವಂಶಜರು ಮುಂಡರಗಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.