ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಡರಗಿ: ಕಾಯಕಲ್ಪಕ್ಕೆ ಕಾದಿರುವ ಪ್ರವಾಸಿ ತಾಣಗಳು

ಐತಿಹಾಸಿಕ, ಧಾರ್ಮಿಕ ಹಾಗೂ ಪ್ರಾಕೃತಿಕ ತಾಣಗಳಿಗೆ ಮೂಲಸೌಕರ್ಯಗಳ ಕೊರತೆ
Published : 1 ಜುಲೈ 2024, 6:01 IST
Last Updated : 1 ಜುಲೈ 2024, 6:01 IST
ಫಾಲೋ ಮಾಡಿ
Comments
ನಿರ್ಲಕ್ಷ್ಯಕ್ಕೆ ಒಳಗಾಗಿರುವ ಮುಂಡರಗಿ ತಾಲ್ಲೂಕಿನ ಗುಮ್ಮಗೋಳ ಗ್ರಾಮದ ಅದ್ಭುತ ಶಿಲ್ಪಕಲಾ ವೈಭವ ಹೊಂದಿರುವ ಗೋಣಿಬಸವೇಶ್ವರ ದೇವಸ್ಥಾನ
ನಿರ್ಲಕ್ಷ್ಯಕ್ಕೆ ಒಳಗಾಗಿರುವ ಮುಂಡರಗಿ ತಾಲ್ಲೂಕಿನ ಗುಮ್ಮಗೋಳ ಗ್ರಾಮದ ಅದ್ಭುತ ಶಿಲ್ಪಕಲಾ ವೈಭವ ಹೊಂದಿರುವ ಗೋಣಿಬಸವೇಶ್ವರ ದೇವಸ್ಥಾನ
ಮುಂಡರಗಿ ತಾಲ್ಲೂಕಿನ ಗುಮ್ಮಗೋಳ ಗ್ರಾಮದ ಗೋಣಿಬಸವೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಶುದ್ಧವಾದ ನೀರಿನಿಂದ ತುಂಬಿರುವ ಸುಂದರ ಕಲ್ಯಾಣಿ
ಮುಂಡರಗಿ ತಾಲ್ಲೂಕಿನ ಗುಮ್ಮಗೋಳ ಗ್ರಾಮದ ಗೋಣಿಬಸವೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಶುದ್ಧವಾದ ನೀರಿನಿಂದ ತುಂಬಿರುವ ಸುಂದರ ಕಲ್ಯಾಣಿ
ಶಿಂಗಟಾಲೂರ ದೇವಸ್ಥಾನ ಅಭಿವೃದ್ಧಿಗೆ ಸಚಿವ ಎಚ್.ಕೆ.ಪಾಟೀಲರು ಈಚೆಗೆ ₹1 ಕೋಟಿ ಅನುದಾನ ನೀಡಿದ್ದು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಅದೇರೀತಿ ಕಾಲಕಾಲಕ್ಕೆ ಇಲ್ಲಿಯ ಶಾಸಕರು ಸಂಸದರು ಸ್ಥಳೀಯ ಆಡಳಿತ ಮಂಡಳಿಗಳು ಅನುದಾನ ನೀಡಿವೆ.
ಕೆ.ವಿ.ಹಂಚಿನಾಳ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ ಶಿಂಗಟಾಲೂರ
ಕಪ್ಪತ್ತಗುಡ್ಡದಲ್ಲಿ ರೋಪ್ ವೇ ಸೇರಿದಂತೆ ವಿವಿಧ ಜನಾಕರ್ಷಣೀಯ ಯೋಜನೆಗಳನ್ನು ರೂಪಿಸುವ ಕುರಿತಂತೆ ಪ್ರವಾಸೋದ್ಯಮ ಇಲಾಖೆಯು ಸಮೀಕ್ಷೆ ಮಾಡಿಕೊಂಡು ಹೋಗಿದೆ. ಅರಣ್ಯ ಇಲಾಖೆಯು ಈ ಕುರಿತು ಸಮಗ್ರ ಪ್ರಸ್ತಾವನೆಯನ್ನು ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಿದೆ
ವೀರೇಂದ್ರ ಮರಿಬಸಣ್ಣವರ ಆರ್‌ಎಫ್‌ಒ ಮುಂಡರಗಿ
ಗೋಣಿಬಸವೇಶ್ವರ ದೇವಸ್ಥಾನವು ನೀರಾವರಿ ಹಿನ್ನೀರಿನಲ್ಲಿ ಮುಳುಗಡೆಯಾಗಲಿದ್ದು ಅದನ್ಮು ಯಥಾರೀತಿ ಸ್ಥಳಾಂತರಿಸಬೇಕು ಅಥವಾ ಅದಕ್ಕೆ ಬೃಹತ್ ತಡೆಗೋಡೆ ನಿರ್ಮಿಸಿ ದೇವಸ್ಥಾನವನ್ನು ಸಂರಕ್ಷಿಸಬೇಕು
ಹನುಮಂತ ಬೆಂಡಿಕಾಯಿ ಗುಮ್ಮಗೋಳ ಗ್ರಾಮಸ್ಥ
ಸ್ವಾತಂತ್ರ್ಯ ಹೋರಾಟಗಾರ ಮಂಡಗೈ ಭೀಮರಾಯರ ವಂಶಜರು ಕನಕಪ್ಪನ ಗುಡ್ಡದ ಮೇಲೆ ನಿರ್ಮಿಸಿರುವ ಕಲ್ಲಿನ ಕೋಟೆಯು ಶಿಥಿಲಾವಸ್ಥೆಯಲ್ಲಿದ್ದು ಅದನ್ನು ಪುರಾತತ್ವ ಇಲಾಖೆ ಸಂರಕ್ಷಿಸಬೇಕು
ವಿ.ಎಲ್.ನಾಡಗೌಡ ಭೀಮರಾಯ ವಂಶಜರು ಮುಂಡರಗಿ
ಮುಳಗಡೆ ಭೀತಿಯಲ್ಲಿರುವ ದೇವಸ್ಥಾನಗಳು
ತಾಲ್ಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಪ್ರಾಚೀನ ಹಾಗೂ ಅದ್ಭುತ ಶಿಲ್ಪಕಲಾ ವೈಭವ ಒಳಗೊಂಡಿರುವ ಗೋಣಿಬಸವೇಶ್ವರ ದೇವಸ್ಥಾನವಿದೆ. ಬೃಹತ್ ಕಲ್ಲಿನ ಗೋಪುರ ದೇವಸ್ಥಾನದ ಪ್ರಾಂಗಣದಲ್ಲಿ ಶುದ್ಧವಾದ ನೀರಿನಿಂದ ತುಂಬಿರುವ ಕಲ್ಯಾಣಿ ಸುಂದರ ಕೆತ್ತನೆ ಮೊದಲಾದವುಗಳನ್ನು ದೇವಸ್ಥಾನ ಹೊಂದಿದೆ. ಆದರೆ ಅಲ್ಲಿಯೂ ಮೂಲಸೌಲಭ್ಯಗಳ ಕೊರತೆ ಎದ್ದು ಕಾಣುತ್ತಲಿದೆ. ಜೊತೆಗೆ ಅದಕ್ಕೆ ದೊರೆಯಬೇಕಾದ ಪ್ರಚಾರ ದೊರೆಯದೇ ಇರುವ ಕಾರಣ ಅದು ನಾಡಿನ ಜನತೆಗೆ ಅಪರಿಚಿತವಾಗಿದೆ. ಅದೇರೀತಿ ತಾಲ್ಲೂಕಿನ ಬಿದರಳ್ಳಿ ಗ್ರಾಮದ ಪ್ರಾಚೀನ ಕಾಲದ ಸೋಮೇಶ್ವರ ದೇವಸ್ಥಾನ ರೇಣುಕಾಂಬಾ ದೇವಸ್ಥಾನಗಳು ವಿಠಲಾಪುರ ಗ್ರಾಮದಲ್ಲಿರುವ ಪ್ರಾಚೀನ ರಸಲಿಂಗ ದೇವಸ್ಥಾನಗಳು ಆಕರ್ಷಕವಾಗಿದ್ದು ಅಲ್ಲಿಯೂ ಮೂಲಸೌಲಭ್ಯಗಳಿಲ್ಲ. ಜತೆಗೆ ಈ ಎಲ್ಲ ದೇವಸ್ಥಾನಗಳು ಶಿಂಗಟಾಲೂರ ನೀರಾವರಿ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾಗಲಿವೆ.
ಮಾನವ ಹಸ್ತಕ್ಷೇಪ ಬೇಡ
ಕಪ್ಪತ್ತಗುಡ್ಡವು ಉತ್ತರ ಕರ್ನಾಟಕದ ಸಹ್ಯಾದ್ರಿಯಾಗಿದ್ದು ಅದನ್ನು ಯಥಾರೀತಿ ಮುಂದಿನ ತಲೆಮಾರಿಗೆ ಒಪ್ಪಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎನ್ನುತ್ತಾರೆ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ. ಕಪ್ಪತ್ತಗುಡ್ಡವು ಪ್ರವಾಸಿತಾಣ ವ್ಯಾಪ್ತಿಗೆ ಒಳಪಟ್ಟರೆ ಅದು ಅರಣ್ಯ ನಾಶ ಹಾಗೂ ಪರಿಸರ ಮಾಲಿನ್ಯಕ್ಕೆ ರಹದಾರಿ ಮಾಡಿಕೊಟ್ಟಂತಾಗುತ್ತದೆ. ಪರಿಸರ ಸೂಕ್ಷ್ಮ ವಲಯಗಳು ಮಾನವನ ಹಸ್ತಕ್ಷೇಪದಿಂದ ದೂರವಿದ್ದಷ್ಟು ಒಳಿತು. ಕಪ್ಪತ್ತಗುಡ್ಡವನ್ನು ಪ್ರವಾಸಿತಾಣವನ್ನಾಗಿ ಮಾಡಿದರೆ ಅಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತದೆ. ಪ್ಲಾಸ್ಟಿಕ್ ಹಾಗೂ ಮತ್ತಿತರ ವಸ್ತುಗಳ ಬಳಕೆ ಹೆಚ್ಚಾಗುತ್ತದೆ. ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಹಾಗೂ ವನ್ಯಜೀವಿಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಕಪ್ಪತ್ತಗುಡ್ಡವನ್ನು ಯಥಾರೀತಿ ಕಾಯ್ದುಕೊಳ್ಳಬೇಕು ಎನ್ನುತ್ತಾರೆ ಅವರು.
ಪ್ರವಾಸಿಗರ ನೆಚ್ಚಿನ ತಾಣ
ತಾಲ್ಲೂಕಿನ ಶಿಂಗಟಾಲೂರ ಗ್ರಾಮದ ಬಳಿ ಕಪ್ಪತ್ತಗುಡ್ಡದ ಗಿರಿಸಾಲಿನಲ್ಲಿ ಸುಪ್ರಸಿದ್ಧ ವೀರಭದ್ರೇಶ್ವರ ದೇವಸ್ಥಾನವಿದ್ದು ದೇವಸ್ಥಾನ ಟ್ರಸ್ಟ್‌ ಕಮಿಟಿ ಉಸ್ತುವಾರಿ ನೋಡಿಕೊಳ್ಳುತ್ತಲಿದೆ. ಸರ್ಕಾರ ಹಾಗೂ ಭಕ್ತಾದಿಗಳ ನೆರವಿನಿಂದ ಯಾತ್ರಾರ್ಥಿಗಳಿಗೆ ನಿತ್ಯ ಉಚಿತ ಪ್ರಸಾದ ವಿತರಣೆ ವಸತಿ ವ್ಯವಸ್ಥೆ ದೂರದ ಪಟ್ಟಣಗಳಿಂದ ವಾಹನ ಸೌಲಭ್ಯ ಹೋಟೆಲ್ ಸ್ನಾನಘಟ್ಟ ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹೀಗಾಗಿ ನಿತ್ಯ ಇಲ್ಲಿಗೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈಚೆಗೆ ದೇವಸ್ಥಾನದ ಮುಂಭಾಗದಲ್ಲಿ ಸುಂದರವಾದ ಉದ್ಯಾನ ನಿರ್ಮಿಸಲಾಗಿದ್ದು ಅಲ್ಲಿ ಸಿಮೆಂಟ್‌ನಿಂದ ನಿರ್ಮಿಸಿರುವ ವಿವಿಧ ಪೌರಾಣಿಕ ಐತಿಹಾಸಿಕ ಮಹತ್ವ ಸಾರುವ ಸಂಗತಿಗಳನ್ನು ಗೊಂಬೆ ರೂಪದಲ್ಲಿ ನಿರ್ಮಿಸಲಾಗಿದೆ. ದೇವಸ್ಥಾನದ ಮುಂದೆ ತುಂಗಭದ್ರಾ ನದಿ ಹರಿಯುತ್ತಿದ್ದು ನದಿ ಮಧ್ಯದಲ್ಲಿರುವ ನಡುಗಡ್ಡೆಯಲ್ಲಿ ನವಿಲುಧಾಮ ಹಾಗೂ ಮೊಸಳೆ ಪಾರ್ಕ್ ತೂಗು ಸೇತುವೆ ನಿರ್ಮಿಸುವ ಯೋಜನೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅವುಗಳನ್ನು ನಿರ್ಮಿಸಿಕೊಡಬೇಕು ಎಂದು ಟ್ರಸ್ಟ್‌ ಕಮಿಟಿ ಅಧ್ಯಕ್ಷ ಕೆ.ವಿ.ಹಂಚಿನಾಳ ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲರಲ್ಲಿ ಈಚೆಗೆ ಮನವಿ ಮಾಡಿಕೊಂಡಿದ್ದರು. ತಕ್ಷಣ ಸ್ಪಂದಿಸಿದ ಎಚ್.ಕೆ.ಪಾಟೀಲರು ದೇವಸ್ಥಾನದ ಅಭಿವೃದ್ಧಿಗೆ ₹1 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT