<p><strong>ಮುಂಡರಗಿ:</strong> ‘ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುವ ಸಂದರ್ಭಗಳಲ್ಲಿ ಅಡೆತಡೆಗಳು ಬರುತ್ತವೆ. ಅವೆಲ್ಲವನ್ನು ಮೆಟ್ಟಿ ನಿಂತು ಪ್ರಾಮಾಣಿಕತೆಯಿಂದ ಸೇವೆ ಮಾಡಿದರೆ ನಾವು ನಿರೀಕ್ಷಿಸಿದ ಫಲ ಖಂಡಿತಾ ದೊರೆಯುತ್ತದೆ’ ಎಂದು ಡಿ.ವೈ.ಎಸ್.ಪಿ. ವೆಂಕಟಪ್ಪ ನಾಯಕ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಶತಮಾನೋತ್ಸವದ ಸಮಾರೋಪ, ಸಿಬ್ಬಂದಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸ್ವಸ್ಥ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ನಮ್ಮ ಮಠ, ಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತವೆ. ಎಲ್ಲ ವರ್ಗದ ಮಕ್ಕಳಿಗೆ ಉಚಿತ ಅನ್ನ, ಆಶ್ರಯ ಹಾಗೂ ಜ್ಞಾನ ನೀಡುವ ಮೂಲಕ ನಮ್ಮ ಮಠಗಳು ಬಹುದೊಡ್ಡ ಕ್ರಾಂತಿ ಮಾಡಿದವು’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ನಿವೃತ್ತ ಪ್ರಾಚಾರ್ಯ ಡಿ.ಸಿ.ಮಠದ ಮಾತನಾಡಿ, ‘ಹಿಂದುಳಿದ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಈ ಭಾಗದ ಮಕ್ಕಳ ಬದುಕಿಗೆ ಅನ್ನದಾನೀಶ್ವರ ಮಠವು ಬೆಳಕು ನೀಡಿದೆ. ವಿದ್ಯಾ ಸಮಿತಿಯು ಶತಮಾನೋತ್ಸವ ಆಚರಿಸುವ ಮೂಲಕ ಎಲ್ಲರಲ್ಲಿ ಹರ್ಷ ಮೂಡಿಸಿದೆ’ ಎಂದು ತಿಳಿಸಿದರು.</p>.<p>ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ನಾವು ಎಷ್ಟೇ ಎತ್ತರಕ್ಕೆ ಬೆಳೆದರೂ ನಾವು ಕಲಿತ ಶಾಲೆ ಹಾಗೂ ನಮಗೆ ಕಲಿಸಿದ ಗುರುಗಳನ್ನು ಮರೆಯಬಾರದು. ಸದಾ ನಮ್ಮ ಕೈಲಾದಷ್ಟು ಸಮಾಜ ಸೇವೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.<br /> ಆರ್.ಎಚ್.ಜಂಣವಾರಿ ಕಾರ್ಯಕ್ರಮ ನಿರೂಪಿಸಿದರು. ಆಡಳಿತಾಧಕಾರಿ ಬಿ.ಜಿ.ಜವಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪುಶ್ರೀ ಕಣವಿ ವಂದಿಸಿದರು.</p>.<p>ಶ್ರೀಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಮಹಾಸ್ವಾಮಿಜಿ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ಬಳೂಟಗಿಯ ಶಿವಕುಮಾರ ದೇವರು, ವಿದ್ಯಾ ಸಮಿತಿಯ ಕಾರ್ಯದರ್ಶಿ ಆರ್.ಆರ್.ಹೆಗ್ಡಾಳ, ಕೆ.ವಿ.ಹಂಚಿನಾಳ, ಯು.ಸಿ.ಹಂಪಿಮಠ, ಸಿ.ಎಸ್.ಅರಸನಾಳ, ವೀರನಗೌಡ ಗುಡದಪ್ಪನವರ, ಅನ್ನದಾನಿ ಮೇಟಿ, ಎಸ್.ಬಿ.ಹಿರೇಮಠ, ಡಿ.ಸಿ.ಮಠದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುವ ಸಂದರ್ಭಗಳಲ್ಲಿ ಅಡೆತಡೆಗಳು ಬರುತ್ತವೆ. ಅವೆಲ್ಲವನ್ನು ಮೆಟ್ಟಿ ನಿಂತು ಪ್ರಾಮಾಣಿಕತೆಯಿಂದ ಸೇವೆ ಮಾಡಿದರೆ ನಾವು ನಿರೀಕ್ಷಿಸಿದ ಫಲ ಖಂಡಿತಾ ದೊರೆಯುತ್ತದೆ’ ಎಂದು ಡಿ.ವೈ.ಎಸ್.ಪಿ. ವೆಂಕಟಪ್ಪ ನಾಯಕ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಶತಮಾನೋತ್ಸವದ ಸಮಾರೋಪ, ಸಿಬ್ಬಂದಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸ್ವಸ್ಥ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ನಮ್ಮ ಮಠ, ಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತವೆ. ಎಲ್ಲ ವರ್ಗದ ಮಕ್ಕಳಿಗೆ ಉಚಿತ ಅನ್ನ, ಆಶ್ರಯ ಹಾಗೂ ಜ್ಞಾನ ನೀಡುವ ಮೂಲಕ ನಮ್ಮ ಮಠಗಳು ಬಹುದೊಡ್ಡ ಕ್ರಾಂತಿ ಮಾಡಿದವು’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ನಿವೃತ್ತ ಪ್ರಾಚಾರ್ಯ ಡಿ.ಸಿ.ಮಠದ ಮಾತನಾಡಿ, ‘ಹಿಂದುಳಿದ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಈ ಭಾಗದ ಮಕ್ಕಳ ಬದುಕಿಗೆ ಅನ್ನದಾನೀಶ್ವರ ಮಠವು ಬೆಳಕು ನೀಡಿದೆ. ವಿದ್ಯಾ ಸಮಿತಿಯು ಶತಮಾನೋತ್ಸವ ಆಚರಿಸುವ ಮೂಲಕ ಎಲ್ಲರಲ್ಲಿ ಹರ್ಷ ಮೂಡಿಸಿದೆ’ ಎಂದು ತಿಳಿಸಿದರು.</p>.<p>ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ನಾವು ಎಷ್ಟೇ ಎತ್ತರಕ್ಕೆ ಬೆಳೆದರೂ ನಾವು ಕಲಿತ ಶಾಲೆ ಹಾಗೂ ನಮಗೆ ಕಲಿಸಿದ ಗುರುಗಳನ್ನು ಮರೆಯಬಾರದು. ಸದಾ ನಮ್ಮ ಕೈಲಾದಷ್ಟು ಸಮಾಜ ಸೇವೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.<br /> ಆರ್.ಎಚ್.ಜಂಣವಾರಿ ಕಾರ್ಯಕ್ರಮ ನಿರೂಪಿಸಿದರು. ಆಡಳಿತಾಧಕಾರಿ ಬಿ.ಜಿ.ಜವಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪುಶ್ರೀ ಕಣವಿ ವಂದಿಸಿದರು.</p>.<p>ಶ್ರೀಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಮಹಾಸ್ವಾಮಿಜಿ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ಬಳೂಟಗಿಯ ಶಿವಕುಮಾರ ದೇವರು, ವಿದ್ಯಾ ಸಮಿತಿಯ ಕಾರ್ಯದರ್ಶಿ ಆರ್.ಆರ್.ಹೆಗ್ಡಾಳ, ಕೆ.ವಿ.ಹಂಚಿನಾಳ, ಯು.ಸಿ.ಹಂಪಿಮಠ, ಸಿ.ಎಸ್.ಅರಸನಾಳ, ವೀರನಗೌಡ ಗುಡದಪ್ಪನವರ, ಅನ್ನದಾನಿ ಮೇಟಿ, ಎಸ್.ಬಿ.ಹಿರೇಮಠ, ಡಿ.ಸಿ.ಮಠದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>