<p><strong>ಮುಂಡರಗಿ:</strong> ‘ತಾಲ್ಲೂಕು ಕಸಾಪ ಸಮ್ಮೇಳನ ಆಯೋಜನೆ ಹಾಗೂ ಸಮ್ಮೇಳನ ಅಧ್ಯಕ್ಷರ ಆಯ್ಕೆ ವಿರೋಧಿಸಿ ಕೆಲವರು ವಿನಾಃಕಾರಣ ವಿರೋಧ ವ್ಯಕ್ತಪಡಿಸುತ್ತಿರುವುದು ಅಸಮಂಜಸ’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ನೂತನ ಕಸಾಪ ಭವನದಲ್ಲಿ ತಾಲ್ಲೂಕು ಕಸಾಪ ಘಟಕದ ಕಾರ್ಯಕಾರಿಣಿ ಮಂಡಳಿ ಸದಸ್ಯರು ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ನೂತನ ಕಸಾಪ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಧನ ಸಹಾಯ ಮಾಡಿದ ಅನ್ನದಾನೀಶ್ವರ ಸ್ವಾಮೀಜಿ ಆಶಯದಂತೆ ಸಾಹಿತ್ಯ ಸಮ್ಮೇಳನ ಹಾಗೂ ದಾನಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>ನಿಯಮಾನುಸಾರ ಕಸಾಪ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ರಚಿಸಲಾಗಿದ್ದು, ಪ್ರತಿ ಸಮುದಾಯದ ಸದಸ್ಯರನ್ನು ಒಳಗೊಂಡಿದೆ. ಸದಸ್ಯರ ಸಲಹೆಯಂತೆ ಕಾರ್ಯಚಟುವಟಿಕೆ ನಡೆಸಲಾಗುತ್ತಿದೆ. ಯಾವುದೇ ಏಕಪಕ್ಷೀಯ ನಿರ್ಣಯ ಕೈಗೊಳ್ಳುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಅನ್ನದಾನೀಶ್ವರ ಸ್ವಾಮೀಜಿ ಆಶಯದಂತೆ ಜ.29ರಂದು ಸಾಹಿತ್ಯ ಸಮ್ಮೇಳನ ಬದಲು ತಾಲ್ಲೂಕು ಕನ್ನಡ ಸಮಾವೇಶ ಹಾಗೂ ದಾನಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕಸಾಪ ಅಧ್ಯಕ್ಷ ಶಂಕರ ಕುಕನೂರ, ಮಾಜಿ ಅಧ್ಯಕ್ಷ ಎಸ್.ಬಿ. ಹಿರೇಮಠ, ಮಂಜುನಾಥ ಮುಧೋಳ, ವೀಣಾ ಪಾಟೀಲ, ಆನಂದ ರಾಮೇನಹಳ್ಳಿ, ಆರ್.ವೈ. ಪಾಟೀಲ, ಸುರೇಶ ಭಾವಿಹಳ್ಳಿ, ಸಿ.ಕೆ.ಗಣಪ್ಪನವರ, ಕೃಷ್ಣಾ ಸಾಹುಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ತಾಲ್ಲೂಕು ಕಸಾಪ ಸಮ್ಮೇಳನ ಆಯೋಜನೆ ಹಾಗೂ ಸಮ್ಮೇಳನ ಅಧ್ಯಕ್ಷರ ಆಯ್ಕೆ ವಿರೋಧಿಸಿ ಕೆಲವರು ವಿನಾಃಕಾರಣ ವಿರೋಧ ವ್ಯಕ್ತಪಡಿಸುತ್ತಿರುವುದು ಅಸಮಂಜಸ’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ನೂತನ ಕಸಾಪ ಭವನದಲ್ಲಿ ತಾಲ್ಲೂಕು ಕಸಾಪ ಘಟಕದ ಕಾರ್ಯಕಾರಿಣಿ ಮಂಡಳಿ ಸದಸ್ಯರು ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ನೂತನ ಕಸಾಪ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಧನ ಸಹಾಯ ಮಾಡಿದ ಅನ್ನದಾನೀಶ್ವರ ಸ್ವಾಮೀಜಿ ಆಶಯದಂತೆ ಸಾಹಿತ್ಯ ಸಮ್ಮೇಳನ ಹಾಗೂ ದಾನಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>ನಿಯಮಾನುಸಾರ ಕಸಾಪ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ರಚಿಸಲಾಗಿದ್ದು, ಪ್ರತಿ ಸಮುದಾಯದ ಸದಸ್ಯರನ್ನು ಒಳಗೊಂಡಿದೆ. ಸದಸ್ಯರ ಸಲಹೆಯಂತೆ ಕಾರ್ಯಚಟುವಟಿಕೆ ನಡೆಸಲಾಗುತ್ತಿದೆ. ಯಾವುದೇ ಏಕಪಕ್ಷೀಯ ನಿರ್ಣಯ ಕೈಗೊಳ್ಳುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಅನ್ನದಾನೀಶ್ವರ ಸ್ವಾಮೀಜಿ ಆಶಯದಂತೆ ಜ.29ರಂದು ಸಾಹಿತ್ಯ ಸಮ್ಮೇಳನ ಬದಲು ತಾಲ್ಲೂಕು ಕನ್ನಡ ಸಮಾವೇಶ ಹಾಗೂ ದಾನಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕಸಾಪ ಅಧ್ಯಕ್ಷ ಶಂಕರ ಕುಕನೂರ, ಮಾಜಿ ಅಧ್ಯಕ್ಷ ಎಸ್.ಬಿ. ಹಿರೇಮಠ, ಮಂಜುನಾಥ ಮುಧೋಳ, ವೀಣಾ ಪಾಟೀಲ, ಆನಂದ ರಾಮೇನಹಳ್ಳಿ, ಆರ್.ವೈ. ಪಾಟೀಲ, ಸುರೇಶ ಭಾವಿಹಳ್ಳಿ, ಸಿ.ಕೆ.ಗಣಪ್ಪನವರ, ಕೃಷ್ಣಾ ಸಾಹುಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>