<p><strong>ಮುಂಡರಗಿ:</strong> ’ವಿದ್ಯಾರ್ಥಿ ಜೀವನದಲ್ಲಿ ಪಿಯುಸಿಯು ಒಂದು ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅದ್ಯಯನ ಮಾಡಬೇಕು. ಇಂದು ನೀವು ಮಾಡುವ ಶ್ರಮವು ಮುಂದೆ ಫಲ ನೀಡಲಿದೆ' ಎಂದು ಶಾಸಕ ಡಾ.ಚಂದ್ರು ಲಮಾಣಿ ತಿಳಿಸಿದರು.</p><p>ಪಟ್ಟಣದ ಸರ್ಕಾರಿ ಪಿ.ಯು. ಈಚೆಗೆ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಮಯ ಎಲ್ಲರಿಗೂ ಅತ್ಯಮೂಲ್ಯವಾಗಿದ್ದು, ಕಳೆದು ಹೋದ ಸಮಯ ಎಂದಿಗೂ ಮರಳಿ ಬಾರದು. ಸಮಯವನ್ನು ಸದ್ಬಳಕೆ ಮಾಡಿಕೊಳ್ಳುವವರು ಜೀವನದಲ್ಲಿ ಏನನ್ನಾದರೂ ಸಾಧಿಸುತ್ತಾರೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.</p>.<p>ಕಾಲೇಜು ಕಾರ್ಯಕಾರಿ ಸಮಿತಿ ಸದಸ್ಯ ಕೊಟ್ರೇಶ ಅಂಗಡಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ಪಷ್ಠ ಗುರಿಯನ್ನು ಹೊಂದಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕರು ಕಾಲೇಜಿನ ಎಲ್ಲ ಅಗತ್ಯಗಳನ್ನು ಪೂರೈಸಿದ್ದಾರೆ. ವಿದ್ಯಾರ್ಥಿಗಳು ಚನ್ನಾಗಿ ಅದ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಚಾರ್ಯ ಫಕೀರಸಾಬ ಕಲಕೇರಿ ಅವರು ಕಾಲೇಜು ವಾರ್ಷಿಕ ವರದಿ ವಾಚಿಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾತಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಟಿ.ಮಂಜುನಾಥ ಸರ್ವರನ್ನು ಸ್ವಾಗತಿಸಿದರು. ಎ.ಎಂ.ಗೌಡರ ಕಾರ್ಯಕ್ರಮ ನಿರೂಪಿಸಿದರು.</p>.<p>ನಾಗೇಶ ಹುಬ್ಬಳ್ಳಿ, ವಿ.ಎಂ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಹಣಜಿ, ಮಂಜುನಾಥ ಮುಧೋಳ, ಮಹೇಶ ನಾಗರಹಳ್ಳಿ, ಪ್ರಶಾಂತ ಗುಡದಪ್ಪನವರ, ಮೈಲಾರಪ್ಪ ಕಲಕೇರಿ, ಪವಿತ್ರಾ ಕಲ್ಲಕುಟಿಗರ, ಅರುಣಾ ಪಾಟೀಲ, ಪುಷ್ಪಾ ಉಕ್ಕಲಿ, ಮಾರುತಿ ನಾಗರಹಳ್ಳಿ, ವೈ.ಎಚ್.ಬಚೇನಹಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ’ವಿದ್ಯಾರ್ಥಿ ಜೀವನದಲ್ಲಿ ಪಿಯುಸಿಯು ಒಂದು ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅದ್ಯಯನ ಮಾಡಬೇಕು. ಇಂದು ನೀವು ಮಾಡುವ ಶ್ರಮವು ಮುಂದೆ ಫಲ ನೀಡಲಿದೆ' ಎಂದು ಶಾಸಕ ಡಾ.ಚಂದ್ರು ಲಮಾಣಿ ತಿಳಿಸಿದರು.</p><p>ಪಟ್ಟಣದ ಸರ್ಕಾರಿ ಪಿ.ಯು. ಈಚೆಗೆ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಮಯ ಎಲ್ಲರಿಗೂ ಅತ್ಯಮೂಲ್ಯವಾಗಿದ್ದು, ಕಳೆದು ಹೋದ ಸಮಯ ಎಂದಿಗೂ ಮರಳಿ ಬಾರದು. ಸಮಯವನ್ನು ಸದ್ಬಳಕೆ ಮಾಡಿಕೊಳ್ಳುವವರು ಜೀವನದಲ್ಲಿ ಏನನ್ನಾದರೂ ಸಾಧಿಸುತ್ತಾರೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.</p>.<p>ಕಾಲೇಜು ಕಾರ್ಯಕಾರಿ ಸಮಿತಿ ಸದಸ್ಯ ಕೊಟ್ರೇಶ ಅಂಗಡಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ಪಷ್ಠ ಗುರಿಯನ್ನು ಹೊಂದಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕರು ಕಾಲೇಜಿನ ಎಲ್ಲ ಅಗತ್ಯಗಳನ್ನು ಪೂರೈಸಿದ್ದಾರೆ. ವಿದ್ಯಾರ್ಥಿಗಳು ಚನ್ನಾಗಿ ಅದ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಚಾರ್ಯ ಫಕೀರಸಾಬ ಕಲಕೇರಿ ಅವರು ಕಾಲೇಜು ವಾರ್ಷಿಕ ವರದಿ ವಾಚಿಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾತಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಟಿ.ಮಂಜುನಾಥ ಸರ್ವರನ್ನು ಸ್ವಾಗತಿಸಿದರು. ಎ.ಎಂ.ಗೌಡರ ಕಾರ್ಯಕ್ರಮ ನಿರೂಪಿಸಿದರು.</p>.<p>ನಾಗೇಶ ಹುಬ್ಬಳ್ಳಿ, ವಿ.ಎಂ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಹಣಜಿ, ಮಂಜುನಾಥ ಮುಧೋಳ, ಮಹೇಶ ನಾಗರಹಳ್ಳಿ, ಪ್ರಶಾಂತ ಗುಡದಪ್ಪನವರ, ಮೈಲಾರಪ್ಪ ಕಲಕೇರಿ, ಪವಿತ್ರಾ ಕಲ್ಲಕುಟಿಗರ, ಅರುಣಾ ಪಾಟೀಲ, ಪುಷ್ಪಾ ಉಕ್ಕಲಿ, ಮಾರುತಿ ನಾಗರಹಳ್ಳಿ, ವೈ.ಎಚ್.ಬಚೇನಹಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>