<p><strong>ಮುಂಡರಗಿ</strong>: ‘ದೇಶ ರಕ್ಷಣೆಗೆ ನಮ್ಮ ಸೈನಿಕರು ನೀಡಿದ ಬಲಿದಾನ ಅಮರವಾಗಿದ್ದು, ಅವರ ತ್ಯಾಗ, ಬಲಿದಾನಗಳಿಂದ ದೇಶದ ಜನತೆ ಸುರಕ್ಷಿತವಾಗಿದ್ದಾರೆ. ದೇಶಕ್ಕೋಸ್ಕರ ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು’ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಾಸಪ್ಪ ಕಾಶಭೋವಿ ಹೇಳಿದರು.</p>.<p>ಮಾಜಿ ಸೈನಿಕರ ಸಂಘವು ಭಾನುವಾರ ಸಂಜೆ ತಾಲ್ಲೂಕಿನ ಡಂಬಳ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಕಚೇರಿಯ ಬಳಿ ಹಮ್ಮಿಕೊಂಡಿದ್ದ ಪುಲ್ವಾಮಾ ಹುತಾತ್ಮರ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಸುಭದ್ರತೆಗೆ ಧಕ್ಕೆ ತರುಲು ಪ್ರಯತ್ನಿಸುವವರನ್ನು ಸೆದೆ ಬಡಿಯುವ ಮೂಲಕ ನಮ್ಮ ಸೈನಿಕರು ದೇಶವನ್ನು ಸಂರಕ್ಷಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಮಾಜಿ ಸೈನಿಕರೆಲ್ಲ ಸೇರಿ ದೇಶದ ಏಕತೆ, ಅಖಂಡತೆ ಹಾಗೂ ಶಾಂತಿಗಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಸ್ಮರಣಾರ್ಥ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು. ‘ಭಾರತ ಮಾತಾ ಕಿ ಜೈ’, ‘ಒಂದೇ ಮಾತರಂ’, ‘ಜೈ ಜವಾನ್ ಜೈ ಕಿಸಾನ್’ ಘೋಷಣೆ ಕೂಗಿದರು.</p>.<p>ಮಾಜಿ ಸೈನಿಕರಾದ ರೈವಣಸಿದ್ದಯ್ಯ ಮುನವಳ್ಳಿಮಠ, ರಾಘವೇಂದ್ರ ಹಡಪದ, ಕೃಷ್ಣಾ ಕಟ್ಟೇಣ್ಣವರ, ಹನಮಂತಪ್ಪ ಮೇಗುರ, ಮಳ್ಳಪ್ಪ ಆದಮ್ಮನವರ, ಕಾಶಿಮಲಿ ಬೆನಕೊಪ್ಪ, ಭೀಮಪ್ಪ ಪೂಜಾರ, ಈರಪ್ಪ ಹೊಂಬಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ದೇಶ ರಕ್ಷಣೆಗೆ ನಮ್ಮ ಸೈನಿಕರು ನೀಡಿದ ಬಲಿದಾನ ಅಮರವಾಗಿದ್ದು, ಅವರ ತ್ಯಾಗ, ಬಲಿದಾನಗಳಿಂದ ದೇಶದ ಜನತೆ ಸುರಕ್ಷಿತವಾಗಿದ್ದಾರೆ. ದೇಶಕ್ಕೋಸ್ಕರ ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು’ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಾಸಪ್ಪ ಕಾಶಭೋವಿ ಹೇಳಿದರು.</p>.<p>ಮಾಜಿ ಸೈನಿಕರ ಸಂಘವು ಭಾನುವಾರ ಸಂಜೆ ತಾಲ್ಲೂಕಿನ ಡಂಬಳ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಕಚೇರಿಯ ಬಳಿ ಹಮ್ಮಿಕೊಂಡಿದ್ದ ಪುಲ್ವಾಮಾ ಹುತಾತ್ಮರ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಸುಭದ್ರತೆಗೆ ಧಕ್ಕೆ ತರುಲು ಪ್ರಯತ್ನಿಸುವವರನ್ನು ಸೆದೆ ಬಡಿಯುವ ಮೂಲಕ ನಮ್ಮ ಸೈನಿಕರು ದೇಶವನ್ನು ಸಂರಕ್ಷಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಮಾಜಿ ಸೈನಿಕರೆಲ್ಲ ಸೇರಿ ದೇಶದ ಏಕತೆ, ಅಖಂಡತೆ ಹಾಗೂ ಶಾಂತಿಗಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಸ್ಮರಣಾರ್ಥ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು. ‘ಭಾರತ ಮಾತಾ ಕಿ ಜೈ’, ‘ಒಂದೇ ಮಾತರಂ’, ‘ಜೈ ಜವಾನ್ ಜೈ ಕಿಸಾನ್’ ಘೋಷಣೆ ಕೂಗಿದರು.</p>.<p>ಮಾಜಿ ಸೈನಿಕರಾದ ರೈವಣಸಿದ್ದಯ್ಯ ಮುನವಳ್ಳಿಮಠ, ರಾಘವೇಂದ್ರ ಹಡಪದ, ಕೃಷ್ಣಾ ಕಟ್ಟೇಣ್ಣವರ, ಹನಮಂತಪ್ಪ ಮೇಗುರ, ಮಳ್ಳಪ್ಪ ಆದಮ್ಮನವರ, ಕಾಶಿಮಲಿ ಬೆನಕೊಪ್ಪ, ಭೀಮಪ್ಪ ಪೂಜಾರ, ಈರಪ್ಪ ಹೊಂಬಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>