<p><strong>ಮುಂಡರಗಿ</strong>: ‘ಮಕ್ಕಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಪರಿಸ್ಥಿತಿ ತಿಳಿಸಲು ಅಸಮರ್ಥರು. ಪಾಲಕರು ಮಕ್ಕಳ ಅಸಹಜ ವರ್ತನೆ ಗುರುತಿಸಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಕೊಡಿಸಬೇಕು’ ಎಂದು ವೈದ್ಯ ಡಾ.ಲಕ್ಷ್ಮಣ ಪೂಜಾರ ತಿಳಿಸಿದರು.</p>.<p>ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲೈಪ್ ಕೇರ್ ಆಸ್ಪತ್ರೆ ಹಾಗೂ ನಳಂದ ಹೊಟೆಲ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳ ವೈದ್ಯ ಡಾ.ಗೊಣೇಶ ಮೇವುಂಡಿ, ಮುಖ್ಯ ಶಿಕ್ಷಕ ನಿಂಗು ಸೊಲಗಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ದಂಡಿನ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಬಿ.ಎಚ್. ಹಲವಾಗಲಿ ಸ್ವಾಗತಿಸಿದರು. ಪಿ.ಎಂ. ಲಾಂಡೆ ನಿರೂಪಿಸಿದರು. ಎಂ.ಆರ್. ಗುಗ್ಗರಿ ವಂದಿಸಿದರು.</p>.<p>ಜಗದೀಶ ಸಂಗಟಿ, ಡಾ.ಪ್ರಶಾಂತ, ಸೇತುರಾಮಾಚಾರ್ಯ ಕಟ್ಟಿ, ಬಸವರಾಜ ತಿಗರಿ, ರಂಗಪ್ಪ ಮೇಟಿ, ಸಿದ್ದರಾಮಗೌಡ ಪಾಟೀಲ, ಯಲ್ಲಪ್ಪ ಅಬ್ಬಿಗೇರಿ, ಅಶೋಕ ಕೋಳಿ, ವಿಠಲ ಜಂಬಿಗಿ, ಪರಮೇಶ ದಂಡಿನ, ಜಿತೇಂದ್ರ ಬಾಗಳಿ, ಪ್ರಭಾವತಿ ಗಾಡದ, ಶಿವಲೀಲಾ ಅಬ್ಬಿಗೇರಿ, ಬಸವರಾಜ ಹೆಬಲಿ, ಲಕ್ಷ್ಮಣ ಸಂಗಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ಮಕ್ಕಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಪರಿಸ್ಥಿತಿ ತಿಳಿಸಲು ಅಸಮರ್ಥರು. ಪಾಲಕರು ಮಕ್ಕಳ ಅಸಹಜ ವರ್ತನೆ ಗುರುತಿಸಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಕೊಡಿಸಬೇಕು’ ಎಂದು ವೈದ್ಯ ಡಾ.ಲಕ್ಷ್ಮಣ ಪೂಜಾರ ತಿಳಿಸಿದರು.</p>.<p>ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲೈಪ್ ಕೇರ್ ಆಸ್ಪತ್ರೆ ಹಾಗೂ ನಳಂದ ಹೊಟೆಲ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳ ವೈದ್ಯ ಡಾ.ಗೊಣೇಶ ಮೇವುಂಡಿ, ಮುಖ್ಯ ಶಿಕ್ಷಕ ನಿಂಗು ಸೊಲಗಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ದಂಡಿನ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಬಿ.ಎಚ್. ಹಲವಾಗಲಿ ಸ್ವಾಗತಿಸಿದರು. ಪಿ.ಎಂ. ಲಾಂಡೆ ನಿರೂಪಿಸಿದರು. ಎಂ.ಆರ್. ಗುಗ್ಗರಿ ವಂದಿಸಿದರು.</p>.<p>ಜಗದೀಶ ಸಂಗಟಿ, ಡಾ.ಪ್ರಶಾಂತ, ಸೇತುರಾಮಾಚಾರ್ಯ ಕಟ್ಟಿ, ಬಸವರಾಜ ತಿಗರಿ, ರಂಗಪ್ಪ ಮೇಟಿ, ಸಿದ್ದರಾಮಗೌಡ ಪಾಟೀಲ, ಯಲ್ಲಪ್ಪ ಅಬ್ಬಿಗೇರಿ, ಅಶೋಕ ಕೋಳಿ, ವಿಠಲ ಜಂಬಿಗಿ, ಪರಮೇಶ ದಂಡಿನ, ಜಿತೇಂದ್ರ ಬಾಗಳಿ, ಪ್ರಭಾವತಿ ಗಾಡದ, ಶಿವಲೀಲಾ ಅಬ್ಬಿಗೇರಿ, ಬಸವರಾಜ ಹೆಬಲಿ, ಲಕ್ಷ್ಮಣ ಸಂಗಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>