<p><strong>ಮುಂಡರಗಿ:</strong> ಮಹಾಶಿವರಾತ್ರಿಯಂದು ಭಾನುವಾರ ದುಷ್ಕರ್ಮಿಗಳಿಂದ ಭಗ್ನಗೊಂಡಿದ್ದ ತಾಲ್ಲೂಕಿನ ಶಿಂಗಟಾಲೂರ ಗ್ರಾಮದ ರಾಮಲಿಂಗೇಶ್ವರ ದೇವಾಲಯಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಶಿವರಾತ್ರಿಯಂದೇ ದುಷ್ಕರ್ಮಿಗಳು ಪುರಾತನ ಕಾಲದ ಶಿವಲಿಂಗ, ನಂದಿ, ಹೊನ್ನತ್ತೆಮ್ಮ ಮೂರ್ತಿಗಳನ್ನು ಭಗ್ನಗೊಳಿಸಿರುವುದು ಹಿಂದುಗಳಲ್ಲಿ ತೀವ್ರ ಆಕ್ರೋಶ ಮೂಡಿಸಿದೆ ಎಂದು ತಿಳಿಸಿದರು.</p>.<p>ಶಿಂಗಟಾಲೂರ ಗ್ರಾಮವು ಸೌಹಾರ್ದತೆಗೆ ಹೆಸರಾಗಿದ್ದು, ಇಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ದುಷ್ಕರ್ಮಿಗಳು ವಿಗ್ರಹ ಧ್ವಂಸದಂತಹ ಹೀನ ಕೃತ್ಯವೆಸಗಿದ್ದಾರೆ. ಅಂತಹ ದುಷ್ಟರನ್ನು ತ್ವರಿತವಾಗಿ ಬಂಧಿಸದಿದ್ದಲ್ಲಿ ನಾಡಿನಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅತಂಕ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಈ ಕುರಿತು ವಿಶೇಷ ಗಮನ ಹರಿಸಬೇಕು. ಭಗ್ನಗೊಂಡಿರುವ ವಿಗ್ರಹಳು ಹಾಗೂ ರಾಮಲಿಂಗೇಶ್ವರ ದೇವಾಲಯದ ಜಿರ್ಣೋದ್ಧಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.</p>.<p>ಪೊಲೀಸ್ ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸದಿದ್ದರೆ ನಾಡಿನಾದ್ಯಂತ ಇಂತಹ ಹೀನ ಕೃತ್ಯಗಳ ಮರುಕಳಿಸಲಿವೆ ಎಂದರು.</p>.<p>ಗ್ರಾಮ ಪಮಚಾಯಿತಿ ಅಧ್ಯಕ್ಷ ಸುನೀಲ ನೀರಲಗಿ, ಮುಖಂಡರಾದ ಗುಡದೀರಯ್ಯ ನವಲಿಹಿರೆಮಠ, ಬಸವರಾಜ ಬಿಳಿಮಗ್ಗದ, ಪ್ರಶಾಂತ ಗುಡದಪ್ಪನವರ, ಆನಂದಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಹಣಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ಮಹಾಶಿವರಾತ್ರಿಯಂದು ಭಾನುವಾರ ದುಷ್ಕರ್ಮಿಗಳಿಂದ ಭಗ್ನಗೊಂಡಿದ್ದ ತಾಲ್ಲೂಕಿನ ಶಿಂಗಟಾಲೂರ ಗ್ರಾಮದ ರಾಮಲಿಂಗೇಶ್ವರ ದೇವಾಲಯಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಶಿವರಾತ್ರಿಯಂದೇ ದುಷ್ಕರ್ಮಿಗಳು ಪುರಾತನ ಕಾಲದ ಶಿವಲಿಂಗ, ನಂದಿ, ಹೊನ್ನತ್ತೆಮ್ಮ ಮೂರ್ತಿಗಳನ್ನು ಭಗ್ನಗೊಳಿಸಿರುವುದು ಹಿಂದುಗಳಲ್ಲಿ ತೀವ್ರ ಆಕ್ರೋಶ ಮೂಡಿಸಿದೆ ಎಂದು ತಿಳಿಸಿದರು.</p>.<p>ಶಿಂಗಟಾಲೂರ ಗ್ರಾಮವು ಸೌಹಾರ್ದತೆಗೆ ಹೆಸರಾಗಿದ್ದು, ಇಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ದುಷ್ಕರ್ಮಿಗಳು ವಿಗ್ರಹ ಧ್ವಂಸದಂತಹ ಹೀನ ಕೃತ್ಯವೆಸಗಿದ್ದಾರೆ. ಅಂತಹ ದುಷ್ಟರನ್ನು ತ್ವರಿತವಾಗಿ ಬಂಧಿಸದಿದ್ದಲ್ಲಿ ನಾಡಿನಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅತಂಕ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಈ ಕುರಿತು ವಿಶೇಷ ಗಮನ ಹರಿಸಬೇಕು. ಭಗ್ನಗೊಂಡಿರುವ ವಿಗ್ರಹಳು ಹಾಗೂ ರಾಮಲಿಂಗೇಶ್ವರ ದೇವಾಲಯದ ಜಿರ್ಣೋದ್ಧಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.</p>.<p>ಪೊಲೀಸ್ ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸದಿದ್ದರೆ ನಾಡಿನಾದ್ಯಂತ ಇಂತಹ ಹೀನ ಕೃತ್ಯಗಳ ಮರುಕಳಿಸಲಿವೆ ಎಂದರು.</p>.<p>ಗ್ರಾಮ ಪಮಚಾಯಿತಿ ಅಧ್ಯಕ್ಷ ಸುನೀಲ ನೀರಲಗಿ, ಮುಖಂಡರಾದ ಗುಡದೀರಯ್ಯ ನವಲಿಹಿರೆಮಠ, ಬಸವರಾಜ ಬಿಳಿಮಗ್ಗದ, ಪ್ರಶಾಂತ ಗುಡದಪ್ಪನವರ, ಆನಂದಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಹಣಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>