‘ಜಿನ್ನಿಂಗ್ ಫ್ಯಾಕ್ಟರಿ, ಶೇಂಗಾ ಮಿಲ್, ಎಪಿಎಂಸಿ ಉಗ್ರಾಣ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನಿವಾಸಗಳು, ಪ್ರವಾಸಿ ಮಂದಿರ, ಕೆಎಸ್ಆರ್ಟಿಸಿ ಸಿಬ್ಬಂದಿ ನಿವಾಸಗಳು, ಕಲ್ಯಾಣ ಮಂಟಪಗಳು ಸೇರಿದಂತೆ ಮತ್ತಿತರ ಮೂಲಗಳಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಕರ ಬರಬೇಕಾಗಿದೆ. ಇದಕ್ಕಾಗಿ ಸಿಬ್ಬಂದಿ ಪ್ರತಿದಿನ ಸಂಬಂಧಿಸಿದವರನ್ನು ಭೇಟಿ ಆಗುತ್ತಿದ್ದಾರೆ. ಕಾರಣ ಎಲ್ಲರೂ ಸರಿಯಾದ ಸಮಯಕ್ಕೆ ಸರಿಯಾಗಿ ಕರ ತುಂಬಿ ಊರಿನ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ತಿಳಿಸಿದರು.