<p><strong>ನರೇಗಲ್</strong>: ‘ನಾಡಪ್ರಭು ಕೆಂಪೇಗೌಡ ಅವರು ದೂರದೃಷ್ಟಿ, ನಿಷ್ಠೆ, ಪರಾಕ್ರಮ, ವೈಜ್ಞಾನಿಕ ಆಲೋಚನೆ ಹೊಂದಿದ್ದ ಉತ್ತಮ ಆಡಳಿಗಾರ ಆಗಿದ್ದರು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ ಬಿ. ನಿಡಶೇಶಿ ಹೇಳಿದರು.</p>.<p>ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ರಾಜಧಾನಿ ನಿರ್ಮಿಸಲು ಬೆಂಗಳೂರು ಪ್ರಶಸ್ತ ಸ್ಥಳವೆಂದು ಕೆಂಪೇಗೌಡರು ಆ ಕಾಲದಲ್ಲೇ ಯೋಚಿಸಿದ್ದರು. ಅದೇ ರೀತಿ ರಾಜಧಾನಿ ನಿರ್ಮಿಸಿದರು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದಿರುವುದನ್ನು ನೋಡಿದರೆ ಕೆಂಪೇಗೌಡರ ದೂರದೃಷ್ಟಿ ಅರ್ಥವಾಗುತ್ತದೆ’ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತಪ್ಪ ನೂಲ್ಕಿ, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<p><strong>ಕೆ.ಜಿ.ಎಸ್. ಸರ್ಕಾರಿ ಶಾಲೆ</strong>: ಇಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಶಿಕ್ಷಕ ಬಸವರಾಜ ಕುರಿ, ‘ನಾಡಿನ ಜನರ ಒಳಿತಿಗಾಗಿ, ತಮ್ಮ ಸ್ವಾರ್ಥ ಬಿಟ್ಟು ಅನೇಕ ಜನಪರ ಕಾರ್ಯಗಳನ್ನು ಮಾಡಿದ ನಾಡಿನ ಹೆಮ್ಮೆಯ ಪುತ್ರ ಕೆಂಪೇಗೌಡ’ ಎಂದರು.</p>.<p>‘ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಷ್ಟೇ ಅಲ್ಲದೆ ಉದ್ಯಾನ, ಶಿಕ್ಷಣ ಮೊದಲಾದ ರಂಗಗಳಲ್ಲಿ ಬೆಂಗಳೂರು ತನ್ನದೇ ಆದ ಹೆಸರು ಗಳಿಸಿದೆ. ಜನರು ಬದುಕಲು ಅನುಕೂಲವಾಗುವ ರೀತಿಯಲ್ಲಿ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ’ ಎಂದು ಹೇಳಿದರು.</p>.<p><strong>ಕೆ.ಜಿ.ಎಸ್. ಸರ್ಕಾರಿ ಶಾಲೆ:</strong> ಇಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಶಿಕ್ಷಕ ಬಸವರಾಜ ಕುರಿ ‘ನಾಡಿನ ಜನರ ಒಳಿತಿಗಾಗಿ ತಮ್ಮ ಸ್ವಾರ್ಥ ಬಿಟ್ಟು ಅನೇಕ ಜನಪರ ಕಾರ್ಯಗಳನ್ನು ಮಾಡಿದ ನಾಡಿನ ಹೆಮ್ಮೆಯ ಪುತ್ರ ಕೆಂಪೇಗೌಡ’ ಎಂದರು.</p><p>‘ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಷ್ಟೇ ಅಲ್ಲದೆ ಉದ್ಯಾನ ಶಿಕ್ಷಣ ಮೊದಲಾದ ರಂಗಗಳಲ್ಲಿ ಬೆಂಗಳೂರು ತನ್ನದೇ ಆದ ಹೆಸರು ಗಳಿಸಿದೆ. ಜನರು ಬದುಕಲು ಅನುಕೂಲವಾಗುವ ರೀತಿಯಲ್ಲಿ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ‘ನಾಡಪ್ರಭು ಕೆಂಪೇಗೌಡ ಅವರು ದೂರದೃಷ್ಟಿ, ನಿಷ್ಠೆ, ಪರಾಕ್ರಮ, ವೈಜ್ಞಾನಿಕ ಆಲೋಚನೆ ಹೊಂದಿದ್ದ ಉತ್ತಮ ಆಡಳಿಗಾರ ಆಗಿದ್ದರು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ ಬಿ. ನಿಡಶೇಶಿ ಹೇಳಿದರು.</p>.<p>ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ರಾಜಧಾನಿ ನಿರ್ಮಿಸಲು ಬೆಂಗಳೂರು ಪ್ರಶಸ್ತ ಸ್ಥಳವೆಂದು ಕೆಂಪೇಗೌಡರು ಆ ಕಾಲದಲ್ಲೇ ಯೋಚಿಸಿದ್ದರು. ಅದೇ ರೀತಿ ರಾಜಧಾನಿ ನಿರ್ಮಿಸಿದರು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದಿರುವುದನ್ನು ನೋಡಿದರೆ ಕೆಂಪೇಗೌಡರ ದೂರದೃಷ್ಟಿ ಅರ್ಥವಾಗುತ್ತದೆ’ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತಪ್ಪ ನೂಲ್ಕಿ, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<p><strong>ಕೆ.ಜಿ.ಎಸ್. ಸರ್ಕಾರಿ ಶಾಲೆ</strong>: ಇಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಶಿಕ್ಷಕ ಬಸವರಾಜ ಕುರಿ, ‘ನಾಡಿನ ಜನರ ಒಳಿತಿಗಾಗಿ, ತಮ್ಮ ಸ್ವಾರ್ಥ ಬಿಟ್ಟು ಅನೇಕ ಜನಪರ ಕಾರ್ಯಗಳನ್ನು ಮಾಡಿದ ನಾಡಿನ ಹೆಮ್ಮೆಯ ಪುತ್ರ ಕೆಂಪೇಗೌಡ’ ಎಂದರು.</p>.<p>‘ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಷ್ಟೇ ಅಲ್ಲದೆ ಉದ್ಯಾನ, ಶಿಕ್ಷಣ ಮೊದಲಾದ ರಂಗಗಳಲ್ಲಿ ಬೆಂಗಳೂರು ತನ್ನದೇ ಆದ ಹೆಸರು ಗಳಿಸಿದೆ. ಜನರು ಬದುಕಲು ಅನುಕೂಲವಾಗುವ ರೀತಿಯಲ್ಲಿ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ’ ಎಂದು ಹೇಳಿದರು.</p>.<p><strong>ಕೆ.ಜಿ.ಎಸ್. ಸರ್ಕಾರಿ ಶಾಲೆ:</strong> ಇಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಶಿಕ್ಷಕ ಬಸವರಾಜ ಕುರಿ ‘ನಾಡಿನ ಜನರ ಒಳಿತಿಗಾಗಿ ತಮ್ಮ ಸ್ವಾರ್ಥ ಬಿಟ್ಟು ಅನೇಕ ಜನಪರ ಕಾರ್ಯಗಳನ್ನು ಮಾಡಿದ ನಾಡಿನ ಹೆಮ್ಮೆಯ ಪುತ್ರ ಕೆಂಪೇಗೌಡ’ ಎಂದರು.</p><p>‘ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಷ್ಟೇ ಅಲ್ಲದೆ ಉದ್ಯಾನ ಶಿಕ್ಷಣ ಮೊದಲಾದ ರಂಗಗಳಲ್ಲಿ ಬೆಂಗಳೂರು ತನ್ನದೇ ಆದ ಹೆಸರು ಗಳಿಸಿದೆ. ಜನರು ಬದುಕಲು ಅನುಕೂಲವಾಗುವ ರೀತಿಯಲ್ಲಿ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>