<p><strong>ಗದಗ:</strong> ಶಾಸಕ ಸಿ.ಸಿ.ಪಾಟೀಲ ಅವರು ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗದಗ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ₹3.93 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.</p>.<p>ಗದಗ ತಾಲ್ಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ₹37.80 ಲಕ್ಷದ ಕಾಮಗಾರಿಗಳು, ಚಿಕ್ಕಹಂದಿಗೋಳ ಗ್ರಾಮದಲ್ಲಿ ₹32.80 ಲಕ್ಷದ ಕಾಮಗಾರಿಗಳು, ಬೆಳಹೋಡ ಗ್ರಾಮದಲ್ಲಿ ₹65 ಲಕ್ಷದ ಕಾಮಗಾರಿಗಳು, ಮದಗಾನೂರ ಗ್ರಾಮದಲ್ಲಿ ₹2.57 ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇವುಗಳಲ್ಲಿ ಕೆಲವು ಕಾಮಗಾರಿಗಳು ಲೋಕಾರ್ಪಣೆಗೊಂಡರೆ, ಇನ್ನು ಕೆಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಲೋಕೋಪಯೋಗಿ ಇಲಾಖೆಯಿಂದ ಶ್ಯಾಗೋಟಿ ಗ್ರಾಮದಲ್ಲಿ ₹32.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪ್ರೌಢಶಾಲೆಯ ಎರಡು ಕೊಠಡಿಗಳ ಉದ್ಘಾಟನೆ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹5 ಲಕ್ಷ ವೆಚ್ಚದ ಅನ್ನದಾನೇಶ್ವರ ಸಮುದಾಯ ಭವನ ಉದ್ಘಾಟಿಸಿದರು.</p>.<p>ಚಿಕ್ಕಹಂದಿಗೋಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹27.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಉದ್ಘಾಟನೆ, ಸಂಸದರ ನಿಧಿಯಿಂದ ₹5 ಲಕ್ಷ ವೆಚ್ಚದ ವೀರಭದ್ರೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಬೆಳಹೋಡ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ₹65 ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು.</p>.<p>ಮದಗಾನೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹27.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಉದ್ಘಾಟಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ಚಿಕ್ಕಹಂದಿಗೋಳ -ಬೆಳಹೋಡ–ಮದಗಾನೂರ ರಸ್ತೆಯಲ್ಲಿ ₹2 ಕೋಟಿ ವೆಚ್ಚದ ಸೇತುವೆ ನಿರ್ಮಾಣ (ಮದಗಾನೂರ ಹತ್ತಿರ) ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ರಾಷ್ಟ್ರೀಯ ಹೆದ್ದಾರಿ 63ರಿಂದ ಚಿಕ್ಕಹಂದಿಗೋಳ -ಬೆಳಹೋಡ –ಮದಗಾನೂರ ರಸ್ತೆ ಸುಧಾರಣೆಯ ₹30 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಹಿರಿಯರು, ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಅಧಿಕಾರಿಗಳು ಇದ್ದರು.</p>.<div><blockquote>ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡಿರುವ ವಿವಿಧ ಯೋಜನೆಗಳು ಕ್ಷೇತ್ರದ ಶೈಕ್ಷಣಿಕ ಸಾಮಾಜಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಲಿವೆ.</blockquote><span class="attribution">– ಸಿ.ಸಿ.ಪಾಟೀಲ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಶಾಸಕ ಸಿ.ಸಿ.ಪಾಟೀಲ ಅವರು ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗದಗ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ₹3.93 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.</p>.<p>ಗದಗ ತಾಲ್ಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ₹37.80 ಲಕ್ಷದ ಕಾಮಗಾರಿಗಳು, ಚಿಕ್ಕಹಂದಿಗೋಳ ಗ್ರಾಮದಲ್ಲಿ ₹32.80 ಲಕ್ಷದ ಕಾಮಗಾರಿಗಳು, ಬೆಳಹೋಡ ಗ್ರಾಮದಲ್ಲಿ ₹65 ಲಕ್ಷದ ಕಾಮಗಾರಿಗಳು, ಮದಗಾನೂರ ಗ್ರಾಮದಲ್ಲಿ ₹2.57 ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇವುಗಳಲ್ಲಿ ಕೆಲವು ಕಾಮಗಾರಿಗಳು ಲೋಕಾರ್ಪಣೆಗೊಂಡರೆ, ಇನ್ನು ಕೆಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಲೋಕೋಪಯೋಗಿ ಇಲಾಖೆಯಿಂದ ಶ್ಯಾಗೋಟಿ ಗ್ರಾಮದಲ್ಲಿ ₹32.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪ್ರೌಢಶಾಲೆಯ ಎರಡು ಕೊಠಡಿಗಳ ಉದ್ಘಾಟನೆ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹5 ಲಕ್ಷ ವೆಚ್ಚದ ಅನ್ನದಾನೇಶ್ವರ ಸಮುದಾಯ ಭವನ ಉದ್ಘಾಟಿಸಿದರು.</p>.<p>ಚಿಕ್ಕಹಂದಿಗೋಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹27.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಉದ್ಘಾಟನೆ, ಸಂಸದರ ನಿಧಿಯಿಂದ ₹5 ಲಕ್ಷ ವೆಚ್ಚದ ವೀರಭದ್ರೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಬೆಳಹೋಡ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ₹65 ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು.</p>.<p>ಮದಗಾನೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹27.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಉದ್ಘಾಟಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ಚಿಕ್ಕಹಂದಿಗೋಳ -ಬೆಳಹೋಡ–ಮದಗಾನೂರ ರಸ್ತೆಯಲ್ಲಿ ₹2 ಕೋಟಿ ವೆಚ್ಚದ ಸೇತುವೆ ನಿರ್ಮಾಣ (ಮದಗಾನೂರ ಹತ್ತಿರ) ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ರಾಷ್ಟ್ರೀಯ ಹೆದ್ದಾರಿ 63ರಿಂದ ಚಿಕ್ಕಹಂದಿಗೋಳ -ಬೆಳಹೋಡ –ಮದಗಾನೂರ ರಸ್ತೆ ಸುಧಾರಣೆಯ ₹30 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಹಿರಿಯರು, ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಅಧಿಕಾರಿಗಳು ಇದ್ದರು.</p>.<div><blockquote>ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡಿರುವ ವಿವಿಧ ಯೋಜನೆಗಳು ಕ್ಷೇತ್ರದ ಶೈಕ್ಷಣಿಕ ಸಾಮಾಜಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಲಿವೆ.</blockquote><span class="attribution">– ಸಿ.ಸಿ.ಪಾಟೀಲ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>