<p><strong>ನರಗುಂದ:</strong> ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇದನ್ನು ಜಾರಿಗೊಳಿಸದೇ ರಾಜ್ಯ ಸರ್ಕಾರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಶುಕ್ರವಾರ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದ ಸದಸ್ಯರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಮುತ್ತು ಸುರಕೋಡ, ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇದನ್ನು ಜಾರಿ ಮಾಡದೇ ಸಚಿವ ಸಂಪುಟದಲ್ಲಿ ಅನುಮೋದನೆಯಾಗಿರುವ 56,432 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಖಂಡನೀಯ ಎಂದರು.</p>.<p>ಹಳೆ ಮೀಸಲಾತಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ. ಇದರಿಂದ ನಮ್ಮ ಮಾದಿಗ ಮತ್ತು ಸಂಬಂಧಿತ ಸಮುದಾಯದ ವಿದ್ಯಾರ್ಥಿಗಳಿಗೆ ಬಹು ದೊಡ್ಡ ಅನ್ಯಾಯವಾಗಲಿದೆ. ಯಾವುದೇ ಕಾರಣದಿಂದಲೂ ಒಳಮೀಸಲಾತಿ ಪಡೆಯದೆ ಹೋದರೆ ಘೋರ ನರಕಯಾತನೆ ಅನುಭವಿಸಬೇಕಾಗುತ್ತದೆ. ಈಗ ಈ ಸರ್ಕಾರದ ಧೋರಣೆ ನೋಡಿದಾಗ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದೆ. ಇದನ್ನು ಸಹಿಸುವುದಿಲ್ಲ.<br /> ಒಂದು ವೇಳೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.</p>.<p>ಇದೇ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಪರಶುರಾಮ ಕಲಾಲರಿಗೆ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ವಸಂತ ಜೋಗಣ್ಣವರ, ದತ್ತಾತ್ರೇಯ ಜೋಗಣ್ಣವರ, ಮಹಾಂತೇಶ ಪೂಜಾರ, ವಿಜಯ ಹೊಸಮನಿ, ಗೋಪಾಲ ದ್ಯಾವಣ್ಣವರ, ಮೈಲಾರಪ್ಪ ಹಿರೇಮನಿ, ನಾಗಪ್ಪ. ಮೂಗನೂರ, ವೆಂಕಟೇಶ್ ಕಾನಪೇಠ, ಅಶೋಕ ಮಾದರ, ಗುರುನಾಥ್ ಕೆಂಗರಕರ, ಮಂಜುನಾಥ್ ಅರಕೇರಿ, ಪ್ರಶಾಂತ ತಡಸಿ ಸೇರಿದಂತೆ ಮಾದಿಗ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇದನ್ನು ಜಾರಿಗೊಳಿಸದೇ ರಾಜ್ಯ ಸರ್ಕಾರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಶುಕ್ರವಾರ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದ ಸದಸ್ಯರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಮುತ್ತು ಸುರಕೋಡ, ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇದನ್ನು ಜಾರಿ ಮಾಡದೇ ಸಚಿವ ಸಂಪುಟದಲ್ಲಿ ಅನುಮೋದನೆಯಾಗಿರುವ 56,432 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಖಂಡನೀಯ ಎಂದರು.</p>.<p>ಹಳೆ ಮೀಸಲಾತಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ. ಇದರಿಂದ ನಮ್ಮ ಮಾದಿಗ ಮತ್ತು ಸಂಬಂಧಿತ ಸಮುದಾಯದ ವಿದ್ಯಾರ್ಥಿಗಳಿಗೆ ಬಹು ದೊಡ್ಡ ಅನ್ಯಾಯವಾಗಲಿದೆ. ಯಾವುದೇ ಕಾರಣದಿಂದಲೂ ಒಳಮೀಸಲಾತಿ ಪಡೆಯದೆ ಹೋದರೆ ಘೋರ ನರಕಯಾತನೆ ಅನುಭವಿಸಬೇಕಾಗುತ್ತದೆ. ಈಗ ಈ ಸರ್ಕಾರದ ಧೋರಣೆ ನೋಡಿದಾಗ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದೆ. ಇದನ್ನು ಸಹಿಸುವುದಿಲ್ಲ.<br /> ಒಂದು ವೇಳೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.</p>.<p>ಇದೇ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಪರಶುರಾಮ ಕಲಾಲರಿಗೆ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ವಸಂತ ಜೋಗಣ್ಣವರ, ದತ್ತಾತ್ರೇಯ ಜೋಗಣ್ಣವರ, ಮಹಾಂತೇಶ ಪೂಜಾರ, ವಿಜಯ ಹೊಸಮನಿ, ಗೋಪಾಲ ದ್ಯಾವಣ್ಣವರ, ಮೈಲಾರಪ್ಪ ಹಿರೇಮನಿ, ನಾಗಪ್ಪ. ಮೂಗನೂರ, ವೆಂಕಟೇಶ್ ಕಾನಪೇಠ, ಅಶೋಕ ಮಾದರ, ಗುರುನಾಥ್ ಕೆಂಗರಕರ, ಮಂಜುನಾಥ್ ಅರಕೇರಿ, ಪ್ರಶಾಂತ ತಡಸಿ ಸೇರಿದಂತೆ ಮಾದಿಗ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>