<p>ನರಗುಂದ: ‘ತಾಲ್ಲೂಕಿನ ಸುರಕೋಡ ನವಗ್ರಾಮದಲ್ಲಿ ಸ್ಮಶಾನದ ಕೊರತೆ ಇದ್ದು, ಇದಕ್ಕಾಗಿ ಗ್ರಾಮಸ್ಥರು ಶಾಸಕರ ಮೇಲೆ ಒತ್ತಡ ಹಾಕಬೇಕಿದೆ’ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಬಿ. ಕರಿಗೌಡ್ರ ಹೇಳಿದರು.</p>.<p>ಗ್ರಾಮದಲ್ಲಿ ಶನಿವಾರ ನಡೆದ ಲೋಕೋಪಯೋಗಿ ಇಲಾಖೆಯ ₹2.50 ಲಕ್ಷ ಮೊತ್ತದ ಸಿ.ಸಿ ರಸ್ತೆ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಳಜಿಯಿಂದ ಸುರಕೋಡ ಸ್ಥಳಾಂತರಗೊಂಡು ನವಗ್ರಾಮ ನಿರ್ಮಾಣವಾಗಿದೆ. ಇದಕ್ಕೆ ಮೂಲಸೌಕರ್ಯ ಸಿಗಬೇಕು. ಶಾಸಕ ಸಿ.ಸಿ. ಪಾಟೀಲ ಅವರ ಪ್ರಯತ್ನದಿಂದ ಸಿ.ಸಿ ರಸ್ತೆ ನಿರ್ಮಾಣ ಆಗುತ್ತಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವತ್ತ ಗುತ್ತಿಗೆದಾರರು ಗಮನಹರಿಸಬೇಕು’ ಎಂದರು.</p>.<p>‘ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು. ಅತಿಕ್ರಮಣವಾದ ಜಾಗ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಬೇಕು’ ಎಂದು ಹೇಳಿದರು.</p>.<p>ಎಸ್.ಕೆ.ಪಾಟೀಲ ಮಾತನಾಡಿ, ‘ಶಾಸಕ ಸಿ.ಸಿ. ಪಾಟೀಲರ ವಿಶೇಷ ಕಾಳಜಿಯಿಂದ ರಸ್ತೆ ನಿರ್ಮಾಣವಾಗುತ್ತಿದೆ. ಎಲ್ಲರೂ ಸಹಕಾರ ನೀಡಿ ನಿರ್ಮಿಸಿಕೊಳ್ಳಬೇಕು’ ಎಂದರು.</p>.<p>ಬಿಜೆಪಿ ಮುಖಂಡ ಜೆ.ಎ. ಮುಲ್ಲಾನವರ ಮಾತನಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಎಸ್. ಚಟ್ರಿ, ಮುತ್ತಯ್ಯ ಚಿಕ್ಕಮಠ, ರುದ್ರಗೌಡ ಆಡೂರ, ನಾಗನಗೌಡ ಬಳಗಾನೂರ, ಬಸನಗೌಡ ಲಿಂಗದಾಳ, ಪುಷ್ಪಾ ಪಿಡ್ಡಣ್ಣವರ, ಮಲರಡ್ಡಿ ಅಜರಡ್ಡಿ, ಪಿಡಿಒ ಎಚ್.ಎಸ್ ಚಟ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-23-1983192474</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ‘ತಾಲ್ಲೂಕಿನ ಸುರಕೋಡ ನವಗ್ರಾಮದಲ್ಲಿ ಸ್ಮಶಾನದ ಕೊರತೆ ಇದ್ದು, ಇದಕ್ಕಾಗಿ ಗ್ರಾಮಸ್ಥರು ಶಾಸಕರ ಮೇಲೆ ಒತ್ತಡ ಹಾಕಬೇಕಿದೆ’ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಬಿ. ಕರಿಗೌಡ್ರ ಹೇಳಿದರು.</p>.<p>ಗ್ರಾಮದಲ್ಲಿ ಶನಿವಾರ ನಡೆದ ಲೋಕೋಪಯೋಗಿ ಇಲಾಖೆಯ ₹2.50 ಲಕ್ಷ ಮೊತ್ತದ ಸಿ.ಸಿ ರಸ್ತೆ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಳಜಿಯಿಂದ ಸುರಕೋಡ ಸ್ಥಳಾಂತರಗೊಂಡು ನವಗ್ರಾಮ ನಿರ್ಮಾಣವಾಗಿದೆ. ಇದಕ್ಕೆ ಮೂಲಸೌಕರ್ಯ ಸಿಗಬೇಕು. ಶಾಸಕ ಸಿ.ಸಿ. ಪಾಟೀಲ ಅವರ ಪ್ರಯತ್ನದಿಂದ ಸಿ.ಸಿ ರಸ್ತೆ ನಿರ್ಮಾಣ ಆಗುತ್ತಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವತ್ತ ಗುತ್ತಿಗೆದಾರರು ಗಮನಹರಿಸಬೇಕು’ ಎಂದರು.</p>.<p>‘ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು. ಅತಿಕ್ರಮಣವಾದ ಜಾಗ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಬೇಕು’ ಎಂದು ಹೇಳಿದರು.</p>.<p>ಎಸ್.ಕೆ.ಪಾಟೀಲ ಮಾತನಾಡಿ, ‘ಶಾಸಕ ಸಿ.ಸಿ. ಪಾಟೀಲರ ವಿಶೇಷ ಕಾಳಜಿಯಿಂದ ರಸ್ತೆ ನಿರ್ಮಾಣವಾಗುತ್ತಿದೆ. ಎಲ್ಲರೂ ಸಹಕಾರ ನೀಡಿ ನಿರ್ಮಿಸಿಕೊಳ್ಳಬೇಕು’ ಎಂದರು.</p>.<p>ಬಿಜೆಪಿ ಮುಖಂಡ ಜೆ.ಎ. ಮುಲ್ಲಾನವರ ಮಾತನಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಎಸ್. ಚಟ್ರಿ, ಮುತ್ತಯ್ಯ ಚಿಕ್ಕಮಠ, ರುದ್ರಗೌಡ ಆಡೂರ, ನಾಗನಗೌಡ ಬಳಗಾನೂರ, ಬಸನಗೌಡ ಲಿಂಗದಾಳ, ಪುಷ್ಪಾ ಪಿಡ್ಡಣ್ಣವರ, ಮಲರಡ್ಡಿ ಅಜರಡ್ಡಿ, ಪಿಡಿಒ ಎಚ್.ಎಸ್ ಚಟ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-23-1983192474</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>