<p><strong>ನರಗುಂದ:</strong> ಮುಂಗಾರು ಮಳೆಯಿಂದಾಗಿ ಬೆಣ್ಣೆ ಹಳ್ಳ ತನ್ನ ರೌದ್ರ ನರ್ತನ ತೋರುವ ಮೂಲಕ ತಾಲ್ಲೂಕಿನ 7 ಹಳ್ಳಿಗಳ ಗ್ರಾಮಸ್ಥರನ್ನು ಗುರುವಾರ ಆತಂಕಕ್ಕೆ ದೂಡಿದೆ.</p>.<p>ಬುಧವಾರ ರಾತ್ರಿ ಹಾಗೂ ಗುರುವಾರ ಸಂಜೆ ಸುರಿದ ಮಳೆಯ ನೀರು ಮನೆ, ಶಾಲೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಜನರು ಮನೆ ತೊರೆದು ನೆರೆಹೊರೆಯವರ ಮನೆಯಲ್ಲಿ ಬೀಡು ಬಿಡುವಂತಾಗಿದೆ.</p>.<p><strong>ರಸ್ತೆ ಸಂಚಾರ ಬಂದ್:</strong> ಬೆಣ್ಣೆ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಬಳಿಯ ಸೇತುವೆ ಮುಳುಗಿದೆ. ಇದರಿಂದ ನರಗುಂದ-ರೋಣ ಮಾರ್ಗ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.</p>.<p>ತಾಲ್ಲೂಕಿನ ಕುರ್ಲಗೇರಿ ಬಳಿ ಬೆಣ್ಣೆಹಳ್ಳ ಸೇತುವೆ ಮೇಲೆ ಹರಿಯುತ್ತಿರುವ ಕಾರಣ ನರಗುಂದ-ಗದಗ ಒಳಮಾರ್ಗ ಬಂದ್ ಆಗಿದೆ. ತಾಲ್ಲೂಕಿನ ಖಾನಾಪುರ ಬಳಿ ಬೆಣ್ಣೆಹಳ್ಳ ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಶಿರೋಳ-ಹದ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ತಾಲ್ಲೂಕಿನ ಸುರಕೋಡ ಗ್ರಾಮದ ಬಳಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ಗ್ರಾಮ ನಡುಗಡ್ಡೆಯಾಗಿ ಹೊರಗಿನ ಸಂಪರ್ಕ ಕಳೆದುಕೊಂಡಿದೆ.</p>.<p>ತಾಲ್ಲೂಕಿನ ಕುರ್ಲಗೇರಿಯಲ್ಲಿ ಪ್ರಾಥಮಿಕ ಶಾಲೆ ಹಾಗೂ ಮನೆಗಳಿಗೆ ಬೆಣ್ಣೆ ಹಳ್ಳದ ನೀರು ನುಗ್ಗಿ ಆತಂಕ ಸೃಷ್ಟಿಸಿದೆ.</p>.<p><strong>7 ಗ್ರಾಮಗಳಿಗೆ ಆತಂಕ:</strong> ಬೆಣ್ಣೆ ಹಳ್ಳದ ಪ್ರವಾಹದಿಂದ ಸುರಕೋಡ, ಕುರ್ಲಗೇರಿ, ಗಂಗಾಪುರ, ಖಾನಾಪುರ, ಹದಲಿ, ಬನಹಟ್ಟಿ, ಮೂಗನೂರ ಗ್ರಾಮಗಳ ಜನರು ತೀವ್ರ ಆತಂಕಗೊಂಡಿದ್ದಾರೆ. ಕುರ್ಲಗೇರಿ, ಸುರಕೋಡ ಗ್ರಾಮಗಳು ಸ್ಥಳಾಂತರಗೊಂಡಿವೆ. ಆದರೆ, ಜನರು ಸಂಪೂರ್ಣ ಸ್ಥಳಾಂತರಗೊಳ್ಳದ ಪರಿಣಾಮ ಹಳ್ಳದ ಸಮೀಪವಿರುವ ಮನೆಗಳಿಗೆ ನೀರು ನುಗ್ಗಿ ತೊಂದರೆ ಅನುಭವಿಸುವಂತಾಗಿದೆ.</p>.<p><strong>ಬೆಳೆ ಹಾನಿ:</strong> ರೈತರು ಮುಂಗಾರು ಬಿತ್ತನೆ ಮಾಡಿದ್ದು, ಬೆಣ್ಣೆ ಹಳ್ಳಕ್ಕೆ ಸಮೀಪವಿರುವ ಜಮೀನುಗಳಲ್ಲಿನ ಹೆಸರು, ಮೆಕ್ಕೆಜೋಳದ ಬೆಳೆ ಹಾನಿಯಾಗಿದೆ. ಒಟ್ಟಾರೆ 700 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರವಾಹಪೀಡಿತ ಗ್ರಾಮಗಳಿಗೆ ತಹಶೀಲ್ದಾರ್ ಶ್ರೀಶೈಲ ತಳವಾರ, ತಾಲ್ಲೂಕು ಪಂಚಾಯಿತಿ ಇಒ ಎಸ್.ಕೆ.ಇನಾಂದಾರ, ಬಿಇಒ ಗುರುನಾಥ ಹೂಗಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರೇಣುಕಾ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.</p>.<p><strong>ಜಿಲ್ಲಾಧಿಕಾರಿ ಭೇಟಿ:</strong> ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ ಸುರಕೋಡ, ಕುರ್ಲಗೇರಿ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದ ಪರಿಸ್ಥಿತಿ ಪರಿಶೀಲಿಸಿದರು.</p>.<p>ಜನರಿಗೆ ತೊಂದರೆಯಾಗದಂತೆ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ದತೆ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಜನರ ಸ್ಥಳಾಂತರಕ್ಕೆ ತುರ್ತು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಎಲ್ಲೋ ಮಳೆಯಾದ ಪರಿಣಾಮ ಬೆಣ್ಣೆಹಳ್ಳದ ಪ್ರವಾಹ ಬಂದಿದೆ. ಇದು ನಮ್ಮನ್ನು ತೀವ್ರ ಕಷ್ಟಕ್ಕೆ ದೂಡಿದ್ದು, ಬೆಣ್ಣೆ ಹಳ್ಳದಿಂದ ತೊಂದರೆಯಾಗದಂತೆ ಶಾಶ್ವತ ಪರಿಹಾರದ ಅಗತ್ಯವಿದೆ’ ಎಂದು ಕುರ್ಲಗೇರಿ ಗ್ರಾಮ ನಿವಾಸಿ ಯಲ್ಲಪ್ಪ ಚಲುವಣ್ಣವರ ತಿಳಿಸಿದರು.</p>.<div><blockquote>ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಲಾಗಿದ್ದು ಯಾವುದೇ ಹಾನಿಯಾಗಿಲ್ಲ. ಪ್ರವಾಹ ಪೀಡಿತ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ</blockquote><span class="attribution"> ಶ್ರೀಶೈಲ ತಳವಾರ ನರಗುಂದ ತಹಶೀಲ್ದಾರ್</span></div>.<div><blockquote>ಬೆಣ್ಣೆ ಹಳ್ಳದ ಪ್ರವಾಹದಿಂದ ಅಂದಾಜು 700 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಕುರಿತು ನಂತರ ಸಮೀಕ್ಷೆ ಮಾಡಲಾಗುವುದು </blockquote><span class="attribution">ಮಂಜುನಾಥ್ ಜನಮಟ್ಟಿ ಕೃಷಿ ಸಹಾಯಕ ನಿರ್ದೇಶಕ ನರಗುಂದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಮುಂಗಾರು ಮಳೆಯಿಂದಾಗಿ ಬೆಣ್ಣೆ ಹಳ್ಳ ತನ್ನ ರೌದ್ರ ನರ್ತನ ತೋರುವ ಮೂಲಕ ತಾಲ್ಲೂಕಿನ 7 ಹಳ್ಳಿಗಳ ಗ್ರಾಮಸ್ಥರನ್ನು ಗುರುವಾರ ಆತಂಕಕ್ಕೆ ದೂಡಿದೆ.</p>.<p>ಬುಧವಾರ ರಾತ್ರಿ ಹಾಗೂ ಗುರುವಾರ ಸಂಜೆ ಸುರಿದ ಮಳೆಯ ನೀರು ಮನೆ, ಶಾಲೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಜನರು ಮನೆ ತೊರೆದು ನೆರೆಹೊರೆಯವರ ಮನೆಯಲ್ಲಿ ಬೀಡು ಬಿಡುವಂತಾಗಿದೆ.</p>.<p><strong>ರಸ್ತೆ ಸಂಚಾರ ಬಂದ್:</strong> ಬೆಣ್ಣೆ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಬಳಿಯ ಸೇತುವೆ ಮುಳುಗಿದೆ. ಇದರಿಂದ ನರಗುಂದ-ರೋಣ ಮಾರ್ಗ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.</p>.<p>ತಾಲ್ಲೂಕಿನ ಕುರ್ಲಗೇರಿ ಬಳಿ ಬೆಣ್ಣೆಹಳ್ಳ ಸೇತುವೆ ಮೇಲೆ ಹರಿಯುತ್ತಿರುವ ಕಾರಣ ನರಗುಂದ-ಗದಗ ಒಳಮಾರ್ಗ ಬಂದ್ ಆಗಿದೆ. ತಾಲ್ಲೂಕಿನ ಖಾನಾಪುರ ಬಳಿ ಬೆಣ್ಣೆಹಳ್ಳ ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಶಿರೋಳ-ಹದ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ತಾಲ್ಲೂಕಿನ ಸುರಕೋಡ ಗ್ರಾಮದ ಬಳಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ಗ್ರಾಮ ನಡುಗಡ್ಡೆಯಾಗಿ ಹೊರಗಿನ ಸಂಪರ್ಕ ಕಳೆದುಕೊಂಡಿದೆ.</p>.<p>ತಾಲ್ಲೂಕಿನ ಕುರ್ಲಗೇರಿಯಲ್ಲಿ ಪ್ರಾಥಮಿಕ ಶಾಲೆ ಹಾಗೂ ಮನೆಗಳಿಗೆ ಬೆಣ್ಣೆ ಹಳ್ಳದ ನೀರು ನುಗ್ಗಿ ಆತಂಕ ಸೃಷ್ಟಿಸಿದೆ.</p>.<p><strong>7 ಗ್ರಾಮಗಳಿಗೆ ಆತಂಕ:</strong> ಬೆಣ್ಣೆ ಹಳ್ಳದ ಪ್ರವಾಹದಿಂದ ಸುರಕೋಡ, ಕುರ್ಲಗೇರಿ, ಗಂಗಾಪುರ, ಖಾನಾಪುರ, ಹದಲಿ, ಬನಹಟ್ಟಿ, ಮೂಗನೂರ ಗ್ರಾಮಗಳ ಜನರು ತೀವ್ರ ಆತಂಕಗೊಂಡಿದ್ದಾರೆ. ಕುರ್ಲಗೇರಿ, ಸುರಕೋಡ ಗ್ರಾಮಗಳು ಸ್ಥಳಾಂತರಗೊಂಡಿವೆ. ಆದರೆ, ಜನರು ಸಂಪೂರ್ಣ ಸ್ಥಳಾಂತರಗೊಳ್ಳದ ಪರಿಣಾಮ ಹಳ್ಳದ ಸಮೀಪವಿರುವ ಮನೆಗಳಿಗೆ ನೀರು ನುಗ್ಗಿ ತೊಂದರೆ ಅನುಭವಿಸುವಂತಾಗಿದೆ.</p>.<p><strong>ಬೆಳೆ ಹಾನಿ:</strong> ರೈತರು ಮುಂಗಾರು ಬಿತ್ತನೆ ಮಾಡಿದ್ದು, ಬೆಣ್ಣೆ ಹಳ್ಳಕ್ಕೆ ಸಮೀಪವಿರುವ ಜಮೀನುಗಳಲ್ಲಿನ ಹೆಸರು, ಮೆಕ್ಕೆಜೋಳದ ಬೆಳೆ ಹಾನಿಯಾಗಿದೆ. ಒಟ್ಟಾರೆ 700 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರವಾಹಪೀಡಿತ ಗ್ರಾಮಗಳಿಗೆ ತಹಶೀಲ್ದಾರ್ ಶ್ರೀಶೈಲ ತಳವಾರ, ತಾಲ್ಲೂಕು ಪಂಚಾಯಿತಿ ಇಒ ಎಸ್.ಕೆ.ಇನಾಂದಾರ, ಬಿಇಒ ಗುರುನಾಥ ಹೂಗಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರೇಣುಕಾ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.</p>.<p><strong>ಜಿಲ್ಲಾಧಿಕಾರಿ ಭೇಟಿ:</strong> ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ ಸುರಕೋಡ, ಕುರ್ಲಗೇರಿ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದ ಪರಿಸ್ಥಿತಿ ಪರಿಶೀಲಿಸಿದರು.</p>.<p>ಜನರಿಗೆ ತೊಂದರೆಯಾಗದಂತೆ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ದತೆ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಜನರ ಸ್ಥಳಾಂತರಕ್ಕೆ ತುರ್ತು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಎಲ್ಲೋ ಮಳೆಯಾದ ಪರಿಣಾಮ ಬೆಣ್ಣೆಹಳ್ಳದ ಪ್ರವಾಹ ಬಂದಿದೆ. ಇದು ನಮ್ಮನ್ನು ತೀವ್ರ ಕಷ್ಟಕ್ಕೆ ದೂಡಿದ್ದು, ಬೆಣ್ಣೆ ಹಳ್ಳದಿಂದ ತೊಂದರೆಯಾಗದಂತೆ ಶಾಶ್ವತ ಪರಿಹಾರದ ಅಗತ್ಯವಿದೆ’ ಎಂದು ಕುರ್ಲಗೇರಿ ಗ್ರಾಮ ನಿವಾಸಿ ಯಲ್ಲಪ್ಪ ಚಲುವಣ್ಣವರ ತಿಳಿಸಿದರು.</p>.<div><blockquote>ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಲಾಗಿದ್ದು ಯಾವುದೇ ಹಾನಿಯಾಗಿಲ್ಲ. ಪ್ರವಾಹ ಪೀಡಿತ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ</blockquote><span class="attribution"> ಶ್ರೀಶೈಲ ತಳವಾರ ನರಗುಂದ ತಹಶೀಲ್ದಾರ್</span></div>.<div><blockquote>ಬೆಣ್ಣೆ ಹಳ್ಳದ ಪ್ರವಾಹದಿಂದ ಅಂದಾಜು 700 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಕುರಿತು ನಂತರ ಸಮೀಕ್ಷೆ ಮಾಡಲಾಗುವುದು </blockquote><span class="attribution">ಮಂಜುನಾಥ್ ಜನಮಟ್ಟಿ ಕೃಷಿ ಸಹಾಯಕ ನಿರ್ದೇಶಕ ನರಗುಂದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>