<p>ನರೇಗಲ್: ರೋಣ ಶಾಸಕ ಜಿ. ಎಸ್. ಪಾಟೀಲ ಅವರ 78ನೇ ಜನ್ಮದಿನದ ಅಂಗವಾಗಿ ನರೇಗಲ್ ಕಾಂಗ್ರೆಸ್ ಘಟಕದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್ತುಗಳನ್ನು ಶುಕ್ರವಾರ ವಿತರಣೆ ಮಾಡಲಾಯಿತು.</p>.<p>ಕಾಂಗ್ರೆಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಮಾತನಾಡಿ, ಶಾಸಕರು ನರೇಗಲ್ ಪಟ್ಟಣದ ಅಭಿವೃದ್ದಿಗೆ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದಾರೆ. ಇಳಿ ವಯಸ್ಸಿನಲ್ಲೂ ಯುವಕರಂತೆ ಸಂಘಟನೆ ಮಾಡುವ ಶಾಸಕರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.</p>.<p>ಪ್ರಚಾರ ಸಮಿತಿಯ ಸಂಯೋಜಕ ಅಲ್ಲಾಬಕ್ಷಿ ನದಾಫ್ ಮಾತನಾಡಿ, ತಾಲ್ಲೂಕಿನ ಹಿರಿಯ ರಾಜಕಾರಣಿಗಳಾಗಿ ಪಕ್ಷಾತೀತವಾಗಿ ಎಲ್ಲರನ್ನೂ ಪ್ರೀತಿಸುತ್ತಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದರು.</p>.<p>ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ಫಕೀರಪ್ಪ ಮಳ್ಳಿ, ಸಂತೋಷ ಹನಮಸಾಗರ, ಮುತ್ತಪ್ಪ ನೂಲ್ಕಿ, ಗುಡ್ಡದಪ್ಪ ಗೋಡಿ, ಸದ್ದಾಂ ನೇಶಖಾನ, ವಿನಾಯಕ ಕಟ್ಟಿಮನಿ, ಆರೋಗ್ಯ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-23-932372174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರೇಗಲ್: ರೋಣ ಶಾಸಕ ಜಿ. ಎಸ್. ಪಾಟೀಲ ಅವರ 78ನೇ ಜನ್ಮದಿನದ ಅಂಗವಾಗಿ ನರೇಗಲ್ ಕಾಂಗ್ರೆಸ್ ಘಟಕದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್ತುಗಳನ್ನು ಶುಕ್ರವಾರ ವಿತರಣೆ ಮಾಡಲಾಯಿತು.</p>.<p>ಕಾಂಗ್ರೆಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಮಾತನಾಡಿ, ಶಾಸಕರು ನರೇಗಲ್ ಪಟ್ಟಣದ ಅಭಿವೃದ್ದಿಗೆ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದಾರೆ. ಇಳಿ ವಯಸ್ಸಿನಲ್ಲೂ ಯುವಕರಂತೆ ಸಂಘಟನೆ ಮಾಡುವ ಶಾಸಕರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.</p>.<p>ಪ್ರಚಾರ ಸಮಿತಿಯ ಸಂಯೋಜಕ ಅಲ್ಲಾಬಕ್ಷಿ ನದಾಫ್ ಮಾತನಾಡಿ, ತಾಲ್ಲೂಕಿನ ಹಿರಿಯ ರಾಜಕಾರಣಿಗಳಾಗಿ ಪಕ್ಷಾತೀತವಾಗಿ ಎಲ್ಲರನ್ನೂ ಪ್ರೀತಿಸುತ್ತಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದರು.</p>.<p>ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ಫಕೀರಪ್ಪ ಮಳ್ಳಿ, ಸಂತೋಷ ಹನಮಸಾಗರ, ಮುತ್ತಪ್ಪ ನೂಲ್ಕಿ, ಗುಡ್ಡದಪ್ಪ ಗೋಡಿ, ಸದ್ದಾಂ ನೇಶಖಾನ, ವಿನಾಯಕ ಕಟ್ಟಿಮನಿ, ಆರೋಗ್ಯ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-23-932372174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>