<p><strong>ನರೇಗಲ್:</strong> ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ಪಟ್ಟಣದ ಹಜರತ್ ರಹಿಮಾನ ಶ್ಯಾವಲಿ (ರಹ) ಶರಣರ ದರ್ಗಾದ ಉರುಸ್ ಸೋಮವಾರ ಸಂಜೆ ಸಂಭ್ರಮದಿಂದ ಜರುಗಿತು.</p>.<p>ದರ್ಗಾದಿಂದ ಆರಂಭವಾದ ಮೆರವಣಿಗೆ ಗಣೇಶ ಗುಡಿ, ದ್ಯಾಮಮ್ಮನ ಗುಡಿ, ಗದಗ ರಸ್ತೆ, ಪಟ್ಟಣ ಪಂಚಾಯಿತಿ ರಸ್ತೆ, ಹೊಸ ಬಸ್ ನಿಲ್ದಾಣ, ಜಕ್ಕಲಿ ಕ್ರಾಸ್, ಹಳೆ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಸಂಚರಿಸಿತು.</p>.<p>ಇದೇ ಸಂದರ್ಭದಲ್ಲಿ ಹೊಸ ಬಸ್ ನಿಲ್ದಾಣದಿಂದ ಲಕ್ಷ್ಮಮ್ಮನ ಪಾಲಕಿಯನ್ನು ಕೋಚಲಾಪುರ ಗ್ರಾಮಕ್ಕೆ ಬೀಳ್ಕೊಡಲಾಯಿತು. ಭಕ್ತರು ಪುಷ್ಪವನ್ನು ಸುರಿದರು. ಮೆರವಣಿಗೆ ಹೊರಟ ಅಲಂಕೃತ ವಾಹನ ಮೇಲೆ ಕುಳಿತು ಈಗಿನ ಸಯ್ಯದ್ ಮಂಜೂರ ಹುಸೇನ ಶ್ಯಾವಲಿಗಳವರು ಭಕ್ತರಿಗೆ ದರ್ಶನ ನೀಡಿದರು.</p>.<p>ವಾಹನದ ಮುಂದೆ ಕುದುರೆ ಸಾಗಿತು. ಮೆರವಣಿಗೆಯುದ್ಧಕ್ಕೂ ಕಲಾ ತಂಡಗಳು ಭಾಗವಹಿಸಿ ಮೆರುಗು ಹೆಚ್ಚಿಸಿದ್ದವು. ನರೇಗಲ್, ಕೋಚಲಾಪುರ, ತೋಟಗಂಟಿ, ಬೂದಿಹಾಳ, ಜಕ್ಕಲಿ, ಮಾರನಬಸರಿ, ಹಾಲಕೆರೆ, ಮಲ್ಲಾಪುರ, ನಿಡಗುಂದಿ, ಕೋಟುಮಚಗಿ, ಅಡ್ನೂರ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-910931823</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್:</strong> ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ಪಟ್ಟಣದ ಹಜರತ್ ರಹಿಮಾನ ಶ್ಯಾವಲಿ (ರಹ) ಶರಣರ ದರ್ಗಾದ ಉರುಸ್ ಸೋಮವಾರ ಸಂಜೆ ಸಂಭ್ರಮದಿಂದ ಜರುಗಿತು.</p>.<p>ದರ್ಗಾದಿಂದ ಆರಂಭವಾದ ಮೆರವಣಿಗೆ ಗಣೇಶ ಗುಡಿ, ದ್ಯಾಮಮ್ಮನ ಗುಡಿ, ಗದಗ ರಸ್ತೆ, ಪಟ್ಟಣ ಪಂಚಾಯಿತಿ ರಸ್ತೆ, ಹೊಸ ಬಸ್ ನಿಲ್ದಾಣ, ಜಕ್ಕಲಿ ಕ್ರಾಸ್, ಹಳೆ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಸಂಚರಿಸಿತು.</p>.<p>ಇದೇ ಸಂದರ್ಭದಲ್ಲಿ ಹೊಸ ಬಸ್ ನಿಲ್ದಾಣದಿಂದ ಲಕ್ಷ್ಮಮ್ಮನ ಪಾಲಕಿಯನ್ನು ಕೋಚಲಾಪುರ ಗ್ರಾಮಕ್ಕೆ ಬೀಳ್ಕೊಡಲಾಯಿತು. ಭಕ್ತರು ಪುಷ್ಪವನ್ನು ಸುರಿದರು. ಮೆರವಣಿಗೆ ಹೊರಟ ಅಲಂಕೃತ ವಾಹನ ಮೇಲೆ ಕುಳಿತು ಈಗಿನ ಸಯ್ಯದ್ ಮಂಜೂರ ಹುಸೇನ ಶ್ಯಾವಲಿಗಳವರು ಭಕ್ತರಿಗೆ ದರ್ಶನ ನೀಡಿದರು.</p>.<p>ವಾಹನದ ಮುಂದೆ ಕುದುರೆ ಸಾಗಿತು. ಮೆರವಣಿಗೆಯುದ್ಧಕ್ಕೂ ಕಲಾ ತಂಡಗಳು ಭಾಗವಹಿಸಿ ಮೆರುಗು ಹೆಚ್ಚಿಸಿದ್ದವು. ನರೇಗಲ್, ಕೋಚಲಾಪುರ, ತೋಟಗಂಟಿ, ಬೂದಿಹಾಳ, ಜಕ್ಕಲಿ, ಮಾರನಬಸರಿ, ಹಾಲಕೆರೆ, ಮಲ್ಲಾಪುರ, ನಿಡಗುಂದಿ, ಕೋಟುಮಚಗಿ, ಅಡ್ನೂರ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-910931823</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>