<p><strong>ನರಗುಂದ</strong>: ‘ನೈರುತ್ಯ ರೆಲ್ವೆ ಇಲಾಖೆಯು ಹೊರಡಿಸಿರುವ ಪರೀಕ್ಷಾ ಸುತ್ತೋಲೆಯಲ್ಲಿ ಪ್ರಾದೇಶಿಕ ಭಾಷೆ ಕನ್ನಡ ಬಳಸದೆ ಹಿಂದಿ– ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಸುತ್ತೋಲೆ ಹೊರಡಿಸಿದ್ದು ಖಂಡನೀಯ. ರೈಲ್ವೆ ಪರೀಕ್ಷಾ ನೇಮಕಾತಿಯಲ್ಲಿ ಕನ್ನಡ ಕಡೆಗಣನೆ ಮಾಡುತ್ತಿರುವುದು ಸಲ್ಲದು’ ಎಂದು ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ದೊರೆಸ್ವಾಮಿ ವಿವಿಧೋದ್ದೇಶ ಟ್ರಸ್ಟ್ ಆಶ್ರಯದಲ್ಲಿ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ನಾದಬ್ರಹ್ಮಾನಂದ ಸ್ವಾಮಿಗಳ ಜಯಂತ್ಯುತ್ಸವದಲ್ಲಿ ಮಾತನಾಡಿದರು.</p>.<p>‘ಕೇಂದ್ರ ಸರ್ಕಾರ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ರೈಲ್ವೆ ಪರೀಕ್ಷಾ ನೇಮಕಾತಿಯಲ್ಲಿ ಕನ್ನಡವನ್ನು ಕಡೆಗಣಿಸುತ್ತಿರುವುದು ಭಾಷೆಗೆ ಮಾಡುತ್ತಿರುವ ದೊಡ್ಡ ಅಪಮಾನ. ಈ ಬಗೆಗೆ ಸಾಕಷ್ಟು ಹೋರಾಟ, ಚಳವಳಿ ಮಾಡಿದರೂ ಪರೀಕ್ಷೆಯಲ್ಲಿ ಕನ್ನಡ ಬಳಕೆ ಮಾಡದಿರುವುದು ವಿಪರ್ಯಾಸ’ ಎಂದು ವಿಷಾದಿಸಿದರು.</p>.<p>ಕಂಠಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಕಂಠಿ ಮಾತನಾಡಿ, ‘ಕನ್ನಡ ಭಾಷೆ, ಸಂಸ್ಕೃತಿ ಸಂವರ್ಧನೆಯ ಉದ್ದೇಶದೊಂದಿಗೆ ಸ್ಥಾಪಿತವಾದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯನ್ನು ಉಳಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ಕರ್ನಾಟಕದ ರಾಜಕೀಯ ಏಕೀಕರಣಕ್ಕೆ ಹಾಗೂ ಕರ್ನಾಟಕದ ಭೌಗೋಳಿಕ ಗಡಿ ರೇಖೆಗಳನ್ನು ಗುರುತಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಯತ್ನ ಮಹತ್ವದ್ದಾಗಿದೆ’ ಎಂದರು.</p>.<p>ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಅಲೆಮಾರಿ ಜನಾಂಗದ ನೀಲಾವತಿ ಯಣ್ಣಿ ಹಾಗೂ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೈರನಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ವೇದಿಕೆ ಮೇಲೆ ಬಿಆರ್ಸಿ ಕೇಂದ್ರದ ಬಿ.ಆರ್. ರಾಯನಗೌಡ್ರ, ಸಿ.ಎಫ್. ಕುರಿ, ಮುಖ್ಯಶಿಕ್ಷಕ ಎಂ.ಡಿ. ಸಕ್ಕರಿ, ಜೆ.ಆರ್. ಕದಂ, ಸಂಗಪ್ಪ ಪೂಜಾರ, ಆರ್.ಬಿ. ಚಿನಿವಾಲರ, ಅಮರೇಶ ತೆಗ್ಗಿಮನಿ, ಆರ್.ಕೆ. ಐನಾಪೂರ, ಮಹಾಂತೇಶ ಹಿರೇಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-23-1255454501</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ</strong>: ‘ನೈರುತ್ಯ ರೆಲ್ವೆ ಇಲಾಖೆಯು ಹೊರಡಿಸಿರುವ ಪರೀಕ್ಷಾ ಸುತ್ತೋಲೆಯಲ್ಲಿ ಪ್ರಾದೇಶಿಕ ಭಾಷೆ ಕನ್ನಡ ಬಳಸದೆ ಹಿಂದಿ– ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಸುತ್ತೋಲೆ ಹೊರಡಿಸಿದ್ದು ಖಂಡನೀಯ. ರೈಲ್ವೆ ಪರೀಕ್ಷಾ ನೇಮಕಾತಿಯಲ್ಲಿ ಕನ್ನಡ ಕಡೆಗಣನೆ ಮಾಡುತ್ತಿರುವುದು ಸಲ್ಲದು’ ಎಂದು ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ದೊರೆಸ್ವಾಮಿ ವಿವಿಧೋದ್ದೇಶ ಟ್ರಸ್ಟ್ ಆಶ್ರಯದಲ್ಲಿ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ನಾದಬ್ರಹ್ಮಾನಂದ ಸ್ವಾಮಿಗಳ ಜಯಂತ್ಯುತ್ಸವದಲ್ಲಿ ಮಾತನಾಡಿದರು.</p>.<p>‘ಕೇಂದ್ರ ಸರ್ಕಾರ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ರೈಲ್ವೆ ಪರೀಕ್ಷಾ ನೇಮಕಾತಿಯಲ್ಲಿ ಕನ್ನಡವನ್ನು ಕಡೆಗಣಿಸುತ್ತಿರುವುದು ಭಾಷೆಗೆ ಮಾಡುತ್ತಿರುವ ದೊಡ್ಡ ಅಪಮಾನ. ಈ ಬಗೆಗೆ ಸಾಕಷ್ಟು ಹೋರಾಟ, ಚಳವಳಿ ಮಾಡಿದರೂ ಪರೀಕ್ಷೆಯಲ್ಲಿ ಕನ್ನಡ ಬಳಕೆ ಮಾಡದಿರುವುದು ವಿಪರ್ಯಾಸ’ ಎಂದು ವಿಷಾದಿಸಿದರು.</p>.<p>ಕಂಠಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಕಂಠಿ ಮಾತನಾಡಿ, ‘ಕನ್ನಡ ಭಾಷೆ, ಸಂಸ್ಕೃತಿ ಸಂವರ್ಧನೆಯ ಉದ್ದೇಶದೊಂದಿಗೆ ಸ್ಥಾಪಿತವಾದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯನ್ನು ಉಳಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ಕರ್ನಾಟಕದ ರಾಜಕೀಯ ಏಕೀಕರಣಕ್ಕೆ ಹಾಗೂ ಕರ್ನಾಟಕದ ಭೌಗೋಳಿಕ ಗಡಿ ರೇಖೆಗಳನ್ನು ಗುರುತಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಯತ್ನ ಮಹತ್ವದ್ದಾಗಿದೆ’ ಎಂದರು.</p>.<p>ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಅಲೆಮಾರಿ ಜನಾಂಗದ ನೀಲಾವತಿ ಯಣ್ಣಿ ಹಾಗೂ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೈರನಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ವೇದಿಕೆ ಮೇಲೆ ಬಿಆರ್ಸಿ ಕೇಂದ್ರದ ಬಿ.ಆರ್. ರಾಯನಗೌಡ್ರ, ಸಿ.ಎಫ್. ಕುರಿ, ಮುಖ್ಯಶಿಕ್ಷಕ ಎಂ.ಡಿ. ಸಕ್ಕರಿ, ಜೆ.ಆರ್. ಕದಂ, ಸಂಗಪ್ಪ ಪೂಜಾರ, ಆರ್.ಬಿ. ಚಿನಿವಾಲರ, ಅಮರೇಶ ತೆಗ್ಗಿಮನಿ, ಆರ್.ಕೆ. ಐನಾಪೂರ, ಮಹಾಂತೇಶ ಹಿರೇಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-23-1255454501</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>