<p><strong>ನರಗುಂದ:</strong> ದಾದಿಯರ ಸೇವೆ ಆರೋಗ್ಯ ಇಲಾಖೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಿನದ 24 ಗಂಟೆಯೂ ಸೇವೆ ಸಲ್ಲಿಸುತ್ತಿರುವ ದಾದಿಯರ ಸೇವೆ ಈಶ್ವರನಿಗೆ ಸಮನಾದ ಸೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಆಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ದಾದಿಯರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.</p>.<p>ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಆರೋಗ್ಯ ಸೇವೆಯನ್ನು ನಿರಂತರ ಮಾಡುತ್ತಿರುವ ದಾದಿಯರ ಕೈಂಕರ್ಯ ಶ್ಲಾಘನೀಯ ಎಂದರು.</p>.<p>ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಡೇಶ ಭದ್ರಗೌಡ, ಹಿರಿಯ ಶುಷ್ರೂಷಕಿ ಭಾರತಿ ಪಾಟೀಲ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಆರೋಗ್ಯ ಅಧಿಕಾರಿ ರೇಣುಕಾ ಕೊರವನವರ ಮಾತನಾಡಿ, ದಾದಿಯರಿಗೆ ಯಾವಾಗಲೂ ಗೌರವ ಸಲ್ಲಿಸಿ, ವಾತ್ಸಲ್ಯದಿಂದ ಕಾಣಬೇಕು ಎಂದರು.</p>.<p>ಉತ್ತಮ ಸೇವೆ ಸಲ್ಲಿಸದ 12 ಜನ ದಾದಿಯರಿಗೆ ಸನ್ಮಾನಿಸಲಾಯಿತು. ಪ್ರದೀಪ ಹಾಗೂ ಸುರೇಶ ಹಡಪದ ನಿರೂಪಿಸಿದರು. ಸರೋಜಿನಿ ಬಿರಾದಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-1936884275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ದಾದಿಯರ ಸೇವೆ ಆರೋಗ್ಯ ಇಲಾಖೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಿನದ 24 ಗಂಟೆಯೂ ಸೇವೆ ಸಲ್ಲಿಸುತ್ತಿರುವ ದಾದಿಯರ ಸೇವೆ ಈಶ್ವರನಿಗೆ ಸಮನಾದ ಸೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಆಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ದಾದಿಯರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.</p>.<p>ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಆರೋಗ್ಯ ಸೇವೆಯನ್ನು ನಿರಂತರ ಮಾಡುತ್ತಿರುವ ದಾದಿಯರ ಕೈಂಕರ್ಯ ಶ್ಲಾಘನೀಯ ಎಂದರು.</p>.<p>ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಡೇಶ ಭದ್ರಗೌಡ, ಹಿರಿಯ ಶುಷ್ರೂಷಕಿ ಭಾರತಿ ಪಾಟೀಲ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಆರೋಗ್ಯ ಅಧಿಕಾರಿ ರೇಣುಕಾ ಕೊರವನವರ ಮಾತನಾಡಿ, ದಾದಿಯರಿಗೆ ಯಾವಾಗಲೂ ಗೌರವ ಸಲ್ಲಿಸಿ, ವಾತ್ಸಲ್ಯದಿಂದ ಕಾಣಬೇಕು ಎಂದರು.</p>.<p>ಉತ್ತಮ ಸೇವೆ ಸಲ್ಲಿಸದ 12 ಜನ ದಾದಿಯರಿಗೆ ಸನ್ಮಾನಿಸಲಾಯಿತು. ಪ್ರದೀಪ ಹಾಗೂ ಸುರೇಶ ಹಡಪದ ನಿರೂಪಿಸಿದರು. ಸರೋಜಿನಿ ಬಿರಾದಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-1936884275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>